ಜ.31ರಿಂದ ಜಾಗತಿಕ ಉದ್ಯಮಶೀಲತೆ ಶೃಂಗಸಭೆ
Team Udayavani, Dec 22, 2019, 3:00 AM IST
ಬೆಂಗಳೂರು: ಐಐಟಿ ಖಾರಗ್ಪುರ ವತಿಯಿಂದ “ಜಾಗತಿಕ ಉದ್ಯಮಶೀಲತೆ ಶೃಂಗಸಭೆ -2020’ನ್ನು ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಶೃಂಗಸಭೆಯು ಉದ್ಯಮಶೀಲತಾ ವೇದಿಕೆಯಾಗಲಿದ್ದು, ಹೊಸ ಹಾಗೂ ಯುವ ಉದ್ಯಮಿಗಳು, ಶ್ರೇಷ್ಠ ಉದ್ಯಮಿಗಳು, ಬಂಡವಾಳಶಾಹಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಹಿಂದಿನ ಆವೃತ್ತಿಗಳಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಸೇರಿದಂತೆ ಅನೇಕ ಉದ್ಯಮ ದಿಗ್ಗಜರು ಭಾಗವಹಿಸಿದ್ದರು. ಅದೇ ರೀತಿ ಈ ಬಾರಿ ಸ್ಯಾಮ್ಸಂಗ್, ಮೈಕ್ರೋಸಾಫ್ಟ್, ಡೆಲ್, ಐಬಿಎಂ, ಇಂಟೆಲ್, ಫ್ಲಿಪ್ಕಾರ್ಟ್, ಅಮೆಜಾನ್ ವೆಬ್ ಸರ್ವೀಸಸ್, ಡೆಲಾಯ್ಡ್ನಂತಹ ದೈತ್ಯ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಕಾರ್ಯಾಗಾರಗಳು, ಚರ್ಚೆಗಳ ಮೂಲಕ ಉದ್ಯಮಶೀಲ ಪ್ರಯತ್ನಗಳು ಮತ್ತು ಅನುಭವಗಳ ವಿನಿಮಯವಾಗಲಿದೆ.
ಜತೆಗೆ ಹೊಸ ಸಾರ್ಟ್ ಆಪ್ ಕಂಪನಿಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ವೇದಿಕೆ ಒದಗಿಸಲಾಗಿದೆ. ಈ ಶೃಂಗಸಭೆ ಪ್ರವೇಶ ನೋಂದಣಿ ಆರಂಭವಾಗಿದ್ದು, ಡಿ.25 ಕೊನೆಯ ದಿನವಾಗಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ https://reg-ges.ecell-iitkgp.org ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ