ಲಿಂಗಾನುಪಾತದಿಂದ ಸಮಸ್ಯೆ ಉಲ್ಬಣ

ತಾಯಿಗೆ ಬೆಲೆ ಕೊಡದ ಸಮಾಜ ಇದ್ದೂ ಸತ್ತಂತೆ ಶರಣೆಯರು ವಚನ ಬರೆದಿರುವುದು ಐತಿಹಾಸಿಕ ಪರಂಪರೆ

Team Udayavani, Dec 22, 2019, 11:31 AM IST

22-Decemebrer-3

ಬೀದರ: ಸಂತಸಕ್ಕಾಗಿ ಈಗ ಕೇವಲ ಗಂಡು ಮಗು ಪಡೆಯುವುದು ಎಷ್ಟು ಸಮಂಜಸ? ಮಾನವ ಸಂತಾನ ಬೆಳೆಯಬೇಕಾದರೆ ತಾಯಿ ಅನಿವಾರ್ಯ. ಈಗ ಲಿಂಗಾನುಪಾತ ವ್ಯತ್ಯಾಸವಾಗಿರುವುದರಿಂದಲೇ ಅನೇಕ ಜಟಿಲ ಸಮಸ್ಯೆ ಉಲ್ಬಣಗೊಳ್ಳುತ್ತಿವೆ ಎಂದು ಚಿತ್ರದುರ್ಗದ ಡಾ| ಶಿವಮೂರ್ತಿ ಮುರಘಾ ಶರಣರು ಕಳವಳ ವ್ಯಕ್ತಪಡಿಸಿದರು.

ನಗರದ ಬಿವಿಬಿ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಗ್ಗೆ ಶರಣ ಸಂಸ್ಕೃತಿ ಉತ್ಸವ ನಿಮಿತ್ತ ನಡೆದ ಸಹಜ ಶಿವಯೋಗದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು. ನಮ್ಮ ಭಾವನೆ ತುಂಬಾ ಸಂಕುಚಿತಗೊಂಡು ಅನೇಕ ಹಿಂಸೆಗಳಿಗೆ ನಾವೇ ಎಡೆಮಾಡಿಕೊಡುತ್ತಿದ್ದೇವೆ. ಹೆಣ್ಣು ಹೆಣ್ಣಲ್ಲ, ಹೆಣ್ಣು ರಕ್ಕಸಿಯಲ್ಲ. ಹೆಣ್ಣು ಸಾಕ್ಷಾತ ಕಪಿಲಸಿದ್ದ ಮಲ್ಲಿಕಾರ್ಜುನ ಎಂದು ಹೇಳಿ ತಾಯಿಗೆ ಅತ್ಯುನ್ನತವಾದ ಸ್ಥಾನ ಕೊಟ್ಟಿರುವುದು ಇಡೀ ಜಗತ್ತಿನ ಇತಿಹಾಸದಲ್ಲಿ ವಚನ ಸಾಹಿತ್ಯ ಮಾತ್ರ. ತಾಯಿಗೆ ಬೆಲೆ ಕೊಡದ ಸಮಾಜ ಇದ್ದು ಸತ್ತಂತೆ ಎಂದು ಹೇಳಿದರು.

12ನೇ ಶತಮಾನದ ಅನುಭವ ಮಂಟಪದಲ್ಲಿ ಸೂಳೆ ಸಂಕವ್ವೆ, ಹಡಪದ ಲಿಂಗಮ್ಮ, ಕಸಗೂಡಿಸುವ ಸತ್ಯಕ್ಕ ತಾನೂ ಬದುಕಿ ಇಡೀ ಸಮಾಜಕ್ಕೆ ಆದರ್ಶ ಪ್ರಾಯವಾಗಿರುವುದಲ್ಲದೇ 36 ಶರಣೆಯರು ವಚನ ಬರೆದಿರುವುದು ಒಂದು ಐತಿಹಾಸಿಕ ಪರಂಪರೆ. ಇವರೆಲ್ಲರೂ ಜೀವ ಕಾರುಣ್ಯದ ಮಹಾ ಶರಣರು. ಇಂದಿನ ಸಮಾಜದಲ್ಲಿ ಅನೇಕ ಮಕ್ಕಳು ಬೀದಿ ಪಾಲಾಗಿ ತಿಪ್ಪೆಗುಂಡಿಯಲ್ಲಿ ಬೀಳುತ್ತಿರುವುದು ಅತ್ಯಂತ ನೋವಿನ ಸಂಗತಿ. ನಮ್ಮ ಮಠ ನೂರಾರು ನಿರ್ಗತಿಕ, ದಲಿತ ಮಕ್ಕಳಿಗೆ ಸಾಂತ್ವನ ನೀಡುವುದಲ್ಲದೇ ಆಶ್ರಯ ತಾಣವಾಗಿದೆ ಎಂದು ಹೇಳಿದರು.

ವ್ಯಕ್ತಿಯೂ ತಮ್ಮ ಜೀವನದ ಕ್ಷಣಗಳನ್ನು ಆಸ್ವಾಧಿಸಿಕೊಂಡು ಮಾನವ ಸಂತಸಕ್ಕೆ ಕಾರಣಿಭೂತರಾಗಲೂ ದಿನಾಲೂ ಶಿವಯೋಗ ಮಾಡಬೇಕು ಎಂದು ಹೇಳಿದರು.

ಸಾಯಗಾಂವನ ಶ್ರೀ ಶಿವಾನಂದ ದೇವರು, ಇಂಜಿನಿಯರರಾದ ಹಾವಶೆಟ್ಟಿ ಪಾಟೀಲ, ಡಾ| ಎಸ್‌.ಆರ್‌. ಮಠಪತಿ, ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಜೈಶ್ರೀ ಸಕಾಲೆ, ಸಾಹಿತಿ ಮೇನಕಾ ಪಾಟೀಲ, ಜಿಪಂ ಸದಸ್ಯೆ ಶಕುಂತಲಾ ಬೆಲ್ದಾಳೆ, ಶಕುಂತಲಾ ವಾಲಿ, ಮಹಾನಂದಾ ಹಿರೇಮಠ, ಸಿದ್ರಾಮ ಸೀತಾ, ಗುತ್ತಿಗೆದಾರ ಭೀಮರಾವ್‌ ಮರಕಲ್‌, ವಿಜಯಲಕ್ಷ್ಮೀ ಕೌಠಗೆ, ಕಸ್ತೂರಿ ಪಟಪಳ್ಳಿ, ನೀಲಮ್ಮ ರೋಗನ್‌, ಡಾ| ವಿಜಶ್ರೀ ಬಶೆಟ್ಟಿ, ಸಿ.ಎಸ್‌. ಗಣಾಚಾರಿ, ಡಾ| ಜಗದೀಶ ಜಾಬಾ, ಭಾರತಿ ಪಾಟೀಲ ಇದ್ದರು.

ತೋಟಪ್ಪ ಉತ್ತಂಗಿ, ನವಲಿಂಗ ಪಾಟೀಲ ವಚನ ಗಾಯನ ನಡೆಸಿಕೊಟ್ಟರು. ಮಹಿಳಾ ಬಸವ ಕೇಂದ್ರದ ಗೌರವಾಧ್ಯಕ್ಷೆ ಕರುಣಾ ಶೆಟಕಾರ ಸ್ವಾಗತಿಸಿದರು. ಶಿಲ್ಪಾ ಮಜಗೆ ವಂದಿಸಿದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.