ಪೌರತ್ವ ಕಾಯ್ದೆ -ಎನ್‌ಆರ್‌ಸಿಗೆ ವಿರೋಧ


Team Udayavani, Dec 22, 2019, 1:10 PM IST

22-Decemebrer-8

ರಾಯಚೂರು: ಜಿಲ್ಲಾದ್ಯಂತ 144 ಸೆಕ್ಷನ್‌ ಜಾರಿಯಲ್ಲಿದ್ದರೂ ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ನಾಗರಿಕ ರಾಷ್ಟ್ರೀಯ ನೋಂದಣಿ ಖಂಡಿಸಿ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ-ಕಮ್ಯುನಿಸ್ಟ್‌ ಸಂಘಟನೆ ಕಾರ್ಯಕರ್ತರು ಶನಿವಾರ ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಪೊಲೀಸರು 15 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದ ಭಗತ್‌ಸಿಂಗ್‌ ವೃತ್ತದಲ್ಲಿ ಸಂಘಟನೆ ನೇತೃತ್ವದಲ್ಲಿ ನೂರಾರು ಜನ ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ರಸ್ತೆಗಿಳಿದು ಹೋರಾಟ ಮಾಡಿದರು. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಘೋಷಣೆ ಕೂಗಿದರು. ಕೆಲಕಾಲ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜಿಲ್ಲೆಯಲ್ಲಿ ಇಂದು ಕೂಡ ನಿಷೇಧಾಜ್ಞೆ ಜಾರಿಯಲ್ಲಿದ್ದು, ಹೋರಾಟ ಮೊಟಕು ಗೊಳಿಸುವಂತೆ ಸೂಚಿಸಿದರು. ಆದರೆ, ಪ್ರತಿಭಟನಾಕಾರರು ಮಾತ್ರ ಪೊಲೀಸರ ಮಾತಿಗೆ ಮನ್ನಣೆ ನೀಡದೆ ಹೋರಾಟ ಮುಂದುವರಿಸಿದರು. ಈ ವೇಳೆ ಬಲವಂತವಾಗಿ ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು.

ಡಿ.19ರಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪ್ರತಿಭಟನೆ, ಧರಣಿ ನಡೆಸುವುದು, ಗುಂಪು ಚರ್ಚೆ ನಡೆಸುವುದನ್ನು ನಿಷೇಧಿಸಲಾಗಿದೆ. ಆದರೆ, ಪೊಲೀಸರ ಅನುಮತಿ ಪಡೆಯದೆ ಹೋರಾಟ ನಡೆಸಿದ್ದಕ್ಕಾಗಿ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. 144ಕಲಂ ನಿಷೇಧಾಜ್ಞೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಸದರ್‌ ಬಜಾರ್‌ ಠಾಣೆ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತದಿಂದ ವ್ಯಾನ್‌ ಹತ್ತಿಸಿದರು. 15 ಜನರ ವಿರುದ್ಧ ಕರ್ನಾಟಕ ಪೊಲೀಸ್‌ ಕಾಯ್ದೆ 71ರ ಪ್ರಕಾರ ಪ್ರಕರಣ ದಾಖಲಿಸಿಕೊಂಡರು.

ಇದಕ್ಕೂ ಮುನ್ನ ಮಾತನಾಡಿದ ಸಂಘಟನೆ ಮುಖಂಡರು, ದೇಶದಲ್ಲಿ ಒಂದೆಡೆ ಆರ್ಥಿಕ ಬಿಕ್ಕಟ್ಟು ಎದುರಾಗಿ ಯುವಕರಿಗೆ ಕೆಲಸ ಇಲ್ಲದ ಸ್ಥಿತಿ ಎದುರಾಗಿದೆ. ಇಂಥ ವೇಳೆ ಅನಗತ್ಯ ಮಸೂದೆಗಳನ್ನು ಜಾರಿಗೊಳಿಸಿ ದೇಶದಲ್ಲಿ ಅಶಾಂತಿ ನೆಲೆಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಬಡಜನರು ಜೀವನ ನಡೆಸುವುದೇ ಕಷ್ಟವಾಗುತ್ತಿದೆ ಎಂದು ದೂರಿದರು.

ಇಂಥ ವೇಳೆ ದೇಶದ ನಾಗರಿಕರು ನೆಮ್ಮದಿಯಿಂದ ಬಾಳಲು ಆಗದಂತ ಕಾನೂನು ಜಾರಿ ಮಾಡುತ್ತಿರುವುದು ಖಂಡನೀಯ. ಇದರಿಂದ ಜನ ಆತಂಕದಲ್ಲೇ ದಿನದೂಡಬೇಕಿದ್ದು, ಕೂಡಲೇ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಮುಖಂಡರಾದ ಚಂದ್ರಗಿರೀಶ, ಶರಣಪ್ಪ ಉದ್ಬಾಳ, ಎನ್‌.ಎಸ್‌.ವೀರೇಶ, ಚನ್ನಬಸವ ಜಾನೇಕಲ್‌, ಮಹೇಶ, ಪ್ರಮೋದ ಕುಮಾರ, ಮಲ್ಲನಗೌಡ, ಆಂಜನೇಯ, ಸಲೀಂ, ಮಹ್ಮದ್‌ ಇಕ್ಬಾಲ್‌, ನಿಸಾರ್‌ ಅಹ್ಮದ್‌, ಈಶ್ವರ, ಗಣೇಶ, ಚೋಟುಬಾಯಿ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.