ಶಾಸಕರೆದುರು ಸಮಸ್ಯೆ ಮಹಾಪೂರ

ಜನರ ದೂರು-ದುಮ್ಮಾನಕ್ಕೆ ಸ್ಪಂದಿಸಲು ಶಾಸಕ ರಘುಮೂರ್ತಿ ಸೂಚನೆ

Team Udayavani, Dec 22, 2019, 3:46 PM IST

22-Decemebrer-20

ಚಳ್ಳಕೆರೆ: ಇಲ್ಲಿನ ನಗರಸಭೆ ಕಾರ್ಯಾಲಯದಲ್ಲಿ ಶಾಸಕ ಟಿ. ರಘುಮೂರ್ತಿ ಶನಿವಾರ ಅಧಿಕಾರಿಗಳು, ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರ ಸಭೆ ನಡೆಸಿದರು.

ನಗರಸಭೆ ಆಡಳಿತ ಸುಸ್ಥಿತಿಯಲ್ಲಿಲ್ಲ. ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿಲ್ಲ. ಕಚೇರಿಗೆ ಬರುವ ನಾಗರಿಕರ ಕೆಲಸ ಕಾರ್ಯ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ನಗರಸಭಾ ಸದಸ್ಯರು ಸಾರ್ವಜನಿಕರು ಆರೋಪಿಸಿದರು.

ನಗರಸಭಾ ಸದಸ್ಯ ಎಂ.ಜೆ. ರಾಘವೇಂದ್ರ ವಿದ್ಯುತ್‌ ಕಂಪನಿ ಟೆಂಡರ್‌ ಕಾಮಗಾರಿಯನ್ನು ಸದ್ಯ ಕಾರ್ಯನಿರ್ವಹಿಸುವ ಟೆಂಡರ್‌ದಾರರಿಗೆ ಇ-ಟೆಂಡರ್‌ ಮೂಲಕ ನೀಡಲಾಗಿದೆ ಎಂದು ದೂರಿದರು. ಈ ಬಗ್ಗೆ ಶಾಸಕರು ಪ್ರಭಾರಿ ಪೌರಾಯುಕ್ತ ಪಿ. ಪಾಲಯ್ಯನವರನ್ನು ಪ್ರಶ್ನಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ನಿರ್ಗಮನ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ವಿಳಂಬವಾದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಇ-ಟೆಂಡರ್‌ ಮೂಲಕ ಹಳಬರಿಗೆ ಗುತ್ತಿಗೆ ಮಂಜೂರು ಮಾಡಲಾಗಿದೆ. ಅದನ್ನು ಬದಲಾಯಿಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು.

ನಗರಸಭಾ ಸದಸ್ಯರಾದ ವೈ. ಪ್ರಕಾಶ್‌, ಮಲ್ಲಿಕಾರ್ಜುನ್‌, ವಿರೂಪಾಕ್ಷ, ರಮೇಶ್‌ ಗೌಡ, ಆರ್‌. ರುದ್ರ ನಾಯಕ, ಎಸ್‌.ಜಯಣ್ಣ,
ಶಿವಕುಮಾರ್‌, ಕೆ. ವೀರಭದ್ರಪ್ಪ, ಕೆ.ಸಿ. ನಾಗರಾಜ, ವಿ.ವೈ. ಪ್ರಮೋದ್‌, ಹೊಯ್ಸಳ ಗೋವಿಂದ, ಸಿ. ಶ್ರೀನಿವಾಸ್‌, ಚಳ್ಳಕೆರೆಯಪ್ಪ, ಪ್ರಶಾಂತ್‌ಕುಮಾರ್‌ ಮತ್ತಿತರರು ಮಾತನಾಡಿ, ಚಳ್ಳಕೆರೆ ನಗರದ ನೈರ್ಮಲ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ನಗರದ ತುಂಬೆಲ್ಲ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಖಾಲಿ ನಿವೇಶನಗಳೂ ಸೇರಿದಂತೆ ಎಲ್ಲಾ ರಸ್ತೆಯಲ್ಲೂ ಗಿಡ ಗಂಟಿ ಬೆಳೆದಿವೆ. ಸ್ವಚ್ಚತಾ ಕಾರ್ಯ ಚುರುಕಿನಿಂದ ನಡೆಯುತ್ತಿಲ್ಲವೆಂದು ಆರೋಪಿಸಿದರು.

ಇದಕ್ಕೆ ಉತ್ತರಿಸಿದ ಕಂದಾಯಾಧಿ ಕಾರಿ ವಿ. ಈರಮ್ಮ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ, ನಗರದ ಜನಸಂಖ್ಯೆ 60 ಸಾವಿರ ದಾಟಿದೆ. ಸುಮಾರು 70 ಪೌರಕಾರ್ಮಿಕರ ಅವಶ್ಯಕತೆ ಇದ್ದು, 22 ಕಾಯಂ ಹಾಗೂ 26 ಜನ ತಾತ್ಕಾಲಿಕ ಪೌರಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೆಚ್ಚುವರಿ ನೌಕರರ ನೇಮಕಾತಿಗೆ ಅವಕಾಶವಿಲ್ಲ. ಇರುವ ಸಿಬ್ಬಂದಿ ಸಹಕಾರದಿಂದ ಸ್ವಚ್ಛತಾ ಕಾರ್ಯ ಮಾಡಲಾಗುತ್ತಿದೆ ಎಂದರು.

ನಗರದ ಸುಮಾರು 50 ಜನ ಖಾಲಿ ನಿವೇಶನದಾರರಿಗೆ ನೋಟಿಸ್‌ ನೀಡಲಾಗಿದೆ ಎಂದು ಕಂದಾಯಾಧಿ ಕಾರಿ ತಿಳಿಸಿದರು. ನಗರದ ವಿವಿಧೆಡೆಗಳಲ್ಲಿ ನಗರಸಭೆ ನಿರ್ಮಿಸಿರುವ ಶೌಚಾಲಯಗಳನ್ನು ಸಾರ್ವಜನಿಕರು ಬಳಸುತ್ತಿಲ್ಲ. ವಿವಿಧ ವಾರ್ಡ್‌ಗಳಲ್ಲಿರುವ ಬಹುತೇಕ ಶೌಚಾಲಯಗಳು ನಿರುಪಯುಕ್ತವಾಗಿವೆ ಎಂದು ನಗರಸಭೆ ಸದಸ್ಯೆಯರಾದ ಸಾಕಮ್ಮ, ಸುಮಾ ಭರಮಣ್ಣ, ಎಂ. ನಾಗವೇಣಿ, ಕವಿತಾ ಬೋರಯ್ಯ, ಕವಿತಾ ವೀರೇಶ್‌, ತಿಪ್ಪಕ್ಕ, ಆರ್‌. ಮಂಜುಳಾ, ನಿರ್ಮಲಾ, ಜಯಲಕ್ಷ್ಮೀ ಸುಮಾ ಆಂಜನೇಯ, ಜೈತುಂಬಿ, ಪಾಲಮ್ಮ, ಸುಜಾತ ಪಾಲಯ್ಯ ಶಾಸಕರ ಗಮನಕ್ಕೆ ತಂದರು.

ಎಇಇ ಜೆ. ಶ್ಯಾಮಲಾ, ವಿನಯ್‌, ಸಹಾಯಕ ಇಂಜಿನಿಯರ್‌ ಲೋಕೇಶ್‌ ಈ ಬಗ್ಗೆ ಮಾಹಿತಿ ನೀಡಿದರು. ನಗರ ವ್ಯಾಪ್ತಿಯಲ್ಲಿ 3693 ಶೌಚಾಲಯ ನಿರ್ಮಿಸಲು ಸರ್ಕಾರ ಆದೇಶ ನೀಡಿದೆ. ಈ ಪೈಕಿ 3593 ಶೌಚಾಲಯಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇನ್ನೂ 100 ಬಾಕಿ ಇದ್ದು, ಹೆಚ್ಚುವರಿಯಾಗಿ 275 ಅರ್ಜಿಗಳ ಬಂದಿವೆ. ಪ್ರತಿ ಶೌಚಾಲಯಕ್ಕೆ ಸರ್ಕಾರ 15 ಸಾವಿರ ರೂ.ನೀಡಲಿದೆ. 14 ಸಾರ್ವಜನಿಕ ಶೌಚಾಲ ಯಗಳ ದುರಸ್ತಿ ಮಾಡಲಾಗುವುದು ಎಂದರು.

ನಗರಸಭಾ ಸದಸ್ಯೆ ಆರ್‌. ಮಂಜುಳಾ ಮಾತನಾಡಿ, ತಾವು ಪ್ರತಿನಿಧಿ ಸುವ 24ನೇ ವಾರ್ಡ್‌ ವ್ಯಾಪ್ತಿಯಲ್ಲಿ 5 ಮದ್ಯದ ಅಂಗಡಿಗಳಿವೆ. ಪ್ರತಿ ಅಂಗಡಿಯ ಪಕ್ಕದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಿಸಿ ಅಲ್ಲಿ ಕುಡಿಯಲು ಮದ್ಯ ನೀಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ದೇವಸ್ಥಾನ, ಶಾಲೆ, ಬ್ಯಾಂಕ್‌ಗಳಿದ್ದು, ಪ್ರತಿನಿತ್ಯ ಜನರು ಕಿರುಕುಳ ಅನುಭವಿಸುತ್ತಿದ್ದಾರೆಂದು ಆರೋಪಿಸಿದರು. ಕೂಡಲೇ ಶಾಸಕರು ಪಿಎಸ್‌ಐ ನೂರ್‌ ಅಹಮ್ಮದ್‌ ಅವರನ್ನು ಕರೆಸಿ ತಾತ್ಕಾಲಿಕ ಶೆಡ್‌ಗಳನ್ನು ತೆರವಿಗೆ ಸೂಚಿಸಿದರು.

ನಗರಸಭೆಯಿಂದ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪಂದಿಸಲು ಮುಕ್ತಿ ವಾಹನ, ಆಧುನಿಕ ಜೆಸಿಬಿ ಮತ್ತು ಸ್ವಚ್ಛತೆಗೆ ಸಕ್ಕಿಂಗ್‌ ಮಿಷನ್‌ ಅವಶ್ಯಕತೆ ಇದೆ ಎನ್ನುವ ಮನವಿ ಮುಂದಿಡಲಾಯಿತು. ಇದಕ್ಕೆ ಸ್ಪಂದಿಸಿದ ಶಾಸಕರು ತಮ್ಮ ಅನುದಾನದಲ್ಲಿ ಮುಕ್ತಿ ವಾಹನವನ್ನು ನೀಡುವ ಭರವಸೆ ನೀಡಿದರು. ಜೆಸಿಬಿ ಮತ್ತು ಸಕ್ಕಿಂಗ್‌ ಮಿಷನ್‌ ಖರೀದಿಸಲು ಜಿಲ್ಲಾಧಿಕಾರಿಗೆ ಪತ್ರ ಬರೆಯುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ರಾಜಶೇಖರ್‌, ಇಂಜಿನಿಯರ್‌ ಸ್ವಾಮಿ, ಇಇ ಕಾಳಪ್ಪ, ಸಮಾಜ ಕಲ್ಯಾಣಾಧಿಕಾರಿ ಜೆ.ಆರ್‌. ಮಂಜಪ್ಪ, ಪರಿಶಿಷ್ಟ ವರ್ಗ ಕಲ್ಯಾಣಾಧಿಕಾರಿ ಮಾಲತಿ, ಸ್ಲಂ ಬೋರ್ಡ್‌ ಸಹಾಯಕ ಇಂಜಿನಿಯರ್‌ ಪಾಟೀಲ್‌, ಹೌಸಿಂಗ್‌ ಬೋರ್ಡ್‌ ಇಂಜಿನಿಯರ್‌ ಅಣ್ಣಪ್ಪ, ಉಪ ನೋಂದಣಾಧಿಕಾರಿ ತಿಪ್ಪೇರುದ್ರಪ್ಪ, ಎಚ್‌.ಎಸ್‌. ಸೈಯ್ಯದ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.