ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಶಸ್ಸಿಗೆ ಶ್ರಮಿಸಿ


Team Udayavani, Dec 23, 2019, 3:00 AM IST

bahugrama

ಜಾವಗಲ್‌: ಹೇಮಾವತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಯಶಸ್ಸಿಗೆ ಪ್ರತಿಗ್ರಾಮ ಗ್ರಾಮಪಂಚಾಯಿತಿಯ ವಾಟರ್‌ಮನ್‌ಗಳು ಹಾಗೂ ಪಿಡಿಒಗಳು ಶ್ರಮಿಸಬೇಕು ಎಂದು ಶಾಸಕ ಕೆ.ಎಸ್‌. ಲಿಂಗೇಶ್‌ ತಿಳಿಸಿದರು.

ಜಾವಗಲ್‌ ಗ್ರಾಮ ಪಂಚಾಯಿತಿಯಿಂದ ಜಾವಗಲ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಾವಗಲ್‌ ಹೋಬಳಿಯ ಗ್ರಾಮ ಪಂಚಾಯಿತಿ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆಯನ್ನು 256ಕೋಟಿ ರೂ. ವೆಚ್ಚದಲ್ಲಿ ಅರಸೀಕೆರೆ ತಾಲೂಕಿನ 530 ಹಳ್ಳಿಗಳಿಗೆ ಹೊಸ ತಂತ್ರಜ್ಞಾನವನ್ನು ಅಳವಡಿಸಿ ಶುದ್ಧ ಕುಡಿಯುವ ನೀರನ್ನು 24*7 ಮಾದರಿಯಲ್ಲಿ ಸರಬರಾಜುಮಾಡಲಾಗುವುದೆಂದರು.

ಯೋಜನೆಯ ಬಗ್ಗೆ ಅರಿವು ಮೂಡಿಸಿ: ಪ್ರತಿ ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ ಒಎಚ್‌ಟಿ, ಸಿಸ್ಟನ್‌ಗಳಿಗೆ ಮೀಟರ್‌ ಅಳವಡಿಸಿ ನೀರು ಸರಬರಾಜು ಮಾಡಲಾಗುವುದು. ಪ್ರತಿಯೊಂದು ಗ್ರಾಮಗಳಲ್ಲಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಗ್ರಾಮಸ್ಥರಲ್ಲಿ ಯೋಜನೆಯ ಸದುಯೋಗದ ಬಗ್ಗೆ ಅರಿವು ಮೂಡಿಸಬೇಕೆಂದರು ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ನೀರನ್ನು ಮಿತವಾಗಿ ಬಳಸಿ: ನೀರನ್ನು ಹಿತಮಿತವಾಗಿ, ಸಮರ್ಪಕವಾಗಿ ಬಳಸುವಂತೆ, ಸ್ವತ್ಛತೆಗೆ, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಪಿಡಿಒ, ಕಾರ್ಯದರ್ಶಿ ಹಾಗೂ ವಾಟರ್‌ಮನ್‌ಗಳು ಸಮರ್ಪಕವಾಗಿ ನೀರಿನ ನಿರ್ವಹಣೆ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ತಿಳಿಸಿದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಂಜಿತಾ ಮಾತನಾಡಿ, ಜಾವಗಲ್‌ ಹೋಬಳಿಯ ಹಲವು ಹಳ್ಳಿಗಳು , ಹೊಸ ಬಡಾವಣೆಗಳು ಯೋಜನೆಯಡಿ ಕೈಬಿಟ್ಟಿದ್ದು ಅವುಗಳನ್ನು ಸೇರಿಸುವ ವ್ಯವಸ್ಥೆ ಮಾಡಲಾಗುವುದೆಂದರು. ಕೆಲವೊಂದು ಗ್ರಾಮಗಳಲ್ಲಿ ಒಎಚ್‌ಟಿ , ಜಿಎಲ್‌ಎಸ್‌ಆರ್‌ ಸೌಲಭ್ಯ ಇಲ್ಲದಿರುವ ಕಡೆ ಅವುಗಳ ನಿರ್ಮಾಣಕ್ಕೆ ಹಾಗೂ ಸಿಸ್ಟನ್‌ ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು.

ಮೀಟರ್‌ ಅಳವಡಿಕೆ ಮಾಡಲಾಗಿದ್ದು, ಅವುಗಳನ್ನು ದುಷ್ಕಮಿಗಳು ಹಾಳು ಮಾಡದಂತೆ ಅಧಿಕಾರಿಗಳು ವಾಟರ್‌ ಮನ್‌ಗಳು ಗಮನಹರಿಸುವಂತೆ ಸೂಚಿಸಿದರು. ಅರಸೀಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಪಿ ನಟರಾಜು ಮಾತನಾಡಿ, ಯೋಜನೆಯ ಸಂಪೂರ್ಣ ಯಶಸ್ಸಿಗೆ ಪಿಡಿಒ, ಕಾರ್ಯದರ್ಶಿ, ವಾಟರ್‌ಮನ್‌ಗಳ ಸಂಪೂರ್ಣ ಜವಾಬ್ದಾರಿಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯವೆಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮಹದೇವಪ್ಪ, ತಾಪಂ ಸದಸ್ಯರಾದ ವಿಜಯಕುಮಾರ್‌, ಬಸವರಾಜು, ಪ್ರಭಾಕರ್‌ , ಪಿಡಿಒ ಮಂಜುನಾಥ್‌, ಕಾರ್ಯದರ್ಶಿ ಈರೇಗೌಡ, ಮಾತನಾಡಿದರು. ಗ್ರಾಪಂ ಅಧ್ಯಕ್ಷ ಕುಮಾರ್‌ ನಾಯ್ಕ ಉಪಾಧ್ಯಕ್ಷೆ ಶಂಕರಮ್ಮ , ಎಪಿಎಂಸಿ ಸದಸ್ಯ ಧರ್ಮಪ್ಪ, ಹೋಬಳಿ ಪಿಡಿಒ ಗಳು ಕಾರ್ಯದರ್ಶಿಗಳು ವಾಟರ್‌ಮನ್‌ಗಳು, ಅ ಕಾರಿಗಳು, ಯೋಜನೆಯ ಗುತ್ತಿಗೆದಾರರು ಭಾಗವಹಿಸಿದ್ದರು.

ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ: ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಾವಗಲ್‌ ಪಟ್ಟಣ ಸೇರಿದಂತೆ ಹೋಬಳಿಯ ಸುಮಾರು, 23 ಗ್ರಾಮಗಳಿಗೆ ಯಗಚಿ ನೀರು ಸಮರ್ಪಕವಾಗಿ ಸರಬರಾಜು ಆಗದಿರುವುದರಿಂದ ಜಾವಗಲ್‌ ಪಟ್ಟಣವನ್ನು ಹೇಮಾವತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸೇರಿಸಿ ಕುಡಿಯುವ ನೀರಿನ ಸೌಲಭ್ಯ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನಮಾಡುವುದಾಗಿ ಶಾಸಕ ಶಿವಲಿಂಗೇಗೌಡ ಭರವಸೆನೀಡಿದರು.

183 ಹಳ್ಳಿಗಳಿಗೆ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡುತ್ತಿದೆ. 2020ರ ಜನವರಿ ಅಂತ್ಯಕ್ಕೆ ಎಲ್ಲಾ 530 ಗ್ರಾಮಗಳಿಗೂ ನೀರು ಸರಬರಾಜು ಮಾಡಲಾಗುವುದು.
-ಶ್ರೀನಿವಾಸ್‌, ಗ್ರಾಮೀಣ ಕುಡಿಯುವ ನೀರು ವ್ಯವಸ್ಥೆ ಎಇಇ

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.