ಪರ-ವಿರೋಧ ಪ್ರತಿಭಟನೆಗಳ ಸರದಿ ; ಪೌರತ್ವ ತಿದ್ದುಪಡಿ ಕಾಯ್ದೆ ಪರ ಜಾಥಾಗಳು ಶುರು_

ಎಲ್ಲೆಡೆ ಮುಂದುವರಿದ ಕಾಯ್ದೆ ವಿರೋಧಿ ಪ್ರತಿಭಟನೆ

Team Udayavani, Dec 23, 2019, 2:05 AM IST

Protest-22-12

ಹೊಸದಿಲ್ಲಿ: ಎನ್‌ಆರ್‌ಸಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳಿಗೆ ದೇಶವು ಸಾಕ್ಷಿಯಾದ ಬಳಿಕ ಈಗ ಈ ಕಾಯ್ದೆಯ ಪರವೂ ಪ್ರತಿಭಟನೆಗಳು ಆರಂಭವಾಗಿವೆ. ದೇಶದ ಹಲವೆಡೆ ಪೌರತ್ವ ಕಾಯ್ದೆಯ ಪರ ಹಾಗೂ ವಿರೋಧ ಪ್ರತಿಭಟನೆಗಳು ಭಾನುವಾರ ನಡೆದಿದ್ದು, ಎರಡೂ ಕಡೆಯವರು ತಮ್ಮದೇ ಆದ ವಾದಗಳನ್ನು ಮುಂದಿಟ್ಟಿದ್ದಾರೆ.

ಬೆಂಗಳೂರು, ಮುಂಬಯಿ, ದಿಲ್ಲಿ ಸೇರಿದಂತೆ ಹಲವೆಡೆ ಕಾಯ್ದೆಯ ಪರ ಜಾಥಾಗಳು ಆರಂಭವಾಗಿವೆ. ಮುಂಬಯಿನ ಧಾರಾವಿಯಲ್ಲಿ ಕಾಯ್ದೆಯನ್ನು ವಿರೋಧಿಸಿ ಭಾನುವಾರ ಜಾಥಾ ನಡೆದರೆ, ಘಟ್ಕೋಪರ್‌, ನಾಗ್ಪುರ ಸೇರಿದಂತೆ ಬಿಜೆಪಿ ಪ್ರಬಲವಾಗಿರುವಂಥ ಪ್ರದೇಶಗಳಲ್ಲಿ ಸಿಎಎ ಪರ ಮೆರವಣಿಗೆಗಳನ್ನು ನಡೆಸಲಾಗಿದೆ.

ಮುಂದುವರಿದ ಪ್ರತಿಭಟನೆ: ದಿಲ್ಲಿ, ತಮಿಳುನಾಡು, ಹೈದರಾಬಾದ್‌, ರಾಜಸ್ಥಾನ ಸೇರಿದಂತೆ ಹಲವೆಡೆ ರವಿವಾರವೂ ಸಾವಿರಾರು ಮಂದಿ ಪೌರತ್ವ ಕಾಯ್ದೆ ವಿರೋಧಿಸಿ ಬೀದಿಗಿಳಿದಿದ್ದಾರೆ. ಹೈದರಾಬಾದ್‌ನ ದಾರು ಸ್ಸಲಾಂನಲ್ಲಿ ಜಾಥಾ ಉದ್ದೇಶಿಸಿ ಮಾತನಾಡಿರುವ ಎಐಎಂಐಎಂ ಸಂಸದ ಅಸಾದುದ್ದೀನ್‌ ಒವೈಸಿ, ‘ಯಾರ್ಯಾರು ಎನ್‌ಆರ್‌ಸಿ- ಸಿಎಎಯನ್ನು ವಿರೋಧಿಸುತ್ತೀರೋ, ಅವರೆಲ್ಲರೂ ತಮ್ಮ ತಮ್ಮ ಮನೆಗಳ ಹೊರಗೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು. ಆ ಮೂಲಕ ಈ ಕರಾಳ ಕಾನೂನಿನ ಬಗ್ಗೆ ಬಿಜೆಪಿಗೆ ಸಂದೇಶ ಕಳುಹಿಸಬೇಕು’ ಎಂದಿದ್ದಾರೆ.

3 ಲಕ್ಷ ಮಂದಿ ಭಾಗಿ: ರಾಜಸ್ಥಾನದ ಜೈಪುರದಲ್ಲಿ ರವಿವಾರ ಸಿಎಂ ಅಶೋಕ್‌ ಗೆಹ್ಲೊ ಟ್‌ ನೇತೃತ್ವದಲ್ಲಿ ಸುಮಾರು 3 ಲಕ್ಷ ಮಂದಿ ಬೃಹತ್‌ ಪ್ರತಿಭಟನಾ ಜಾಥಾ ನಡೆಸಿದ್ದಾರೆ. ಪೌರತ್ವ ಕಾಯ್ದೆ ಖಂಡಿಸಿ ನಡೆದ ‘ಸಂವಿಧಾನ್‌ ಬಚಾವೋ ಜಾಥಾದಲ್ಲಿ ಸಿಪಿಐ, ಸಿಪಿಎಂ, ಆಪ್‌, ಎಸ್‌ಪಿ, ಆರ್‌ಎಲ್‌ಡಿ, ಜೆಡಿಎಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆಲ್ಬರ್ಟ್‌ ಹಾಲ್‌ನಿಂದ ಆರಂಭವಾದ ಈ ಮೌನ ಮೆರವಣಿಗೆಯು 3 ಕಿ.ಮೀ. ದೂರ ಸಾಗಿ ಜೆಎಲ್‌ಎನ್‌ ರಸ್ತೆಯಲ್ಲಿ ಸಮಾರೋಪಗೊಂಡಿತು. ಇದೇ ವೇಳೆ, ಮುನ್ನೆಚ್ಚರಿಕಾ ಕ್ರಮವಾಗಿ ಜೈಪುರದಲ್ಲಿ ಮೊಬೈಲ್‌ ಇಂಟರ್ನೆಟ್‌ ಸಂಪರ್ಕವನ್ನು ರಾತ್ರಿ 8ರವರೆಗೆ ಸ್ಥಗಿತಗೊಳಿಸಲಾಗಿತ್ತು.

ಅನಿಶ್ಚಿತತೆ ಕಳವಳಕಾರಿ ಎಂದ ಬಾಂಗ್ಲಾ: ಸಿಎಎ ಮತ್ತು ಎನ್‌ಆರ್‌ಸಿ ಭಾರತದ ಆಂತರಿಕ ವಿಚಾರವೇ ಆಗಿದ್ದರೂ, ಭಾರತದಲ್ಲಿನ ಅನಿಶ್ಚಿತತೆಯು ನೆರೆರಾಷ್ಟ್ರಗಳಿಗೂ ಆತಂಕಕಾರಿಯಾಗಿದೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್‌ ಮೊಮೇನ್‌ ಹೇಳಿದ್ದಾರೆ. ಜತೆಗೆ, ಆದಷ್ಟು ಬೇಗ ಭಾರತದ ಪರಿಸ್ಥಿತಿ ಶಾಂತವಾಗಲಿ ಎಂದು ಆಶಿಸಿದ್ದಾರೆ.

ಪಿಎಫ್ಐ ಕೈವಾಡ ಎಂದ ಡಿಸಿಎಂ: ಉತ್ತರಪ್ರದೇಶದ ಹಲವು ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರದಲ್ಲಿ ಹೊರಗಿನವರ ಕೈವಾಡವಿದೆ ಎಂದು ಉಪಮುಖ್ಯಮಂತ್ರಿ ದಿನೇಶ್‌ ಶರ್ಮಾ ಆರೋಪಿಸಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟವರ ಪೈಕಿ ಪಶ್ಚಿಮ ಬಂಗಾಲದ ಮಾಲ್ಡಾ ಜಿಲ್ಲೆಯಿಂದ ಬಂದ ಪಿಎಫ್ಐ (ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ) ಕಾರ್ಯಕರ್ತರು ಇದ್ದಾರೆ.

ಪಿಎಫ್ಐಗೆ ನಿಷೇಧಿತ ಸಿಮಿ ಜತೆ ಸಂಬಂಧವಿದೆ ಎಂದಿದ್ದಾರೆ ಶರ್ಮಾ. ಜತೆಗೆ, ಹಿಂಸಾಚಾರದಲ್ಲಿ 288 ಪೊಲೀಸರು ಗಾಯಗೊಂಡಿದ್ದಾರೆ. ಈ ಪೈಕಿ 62 ಮಂದಿ ಗುಂಡೇಟಿನಿಂದ ಗಾಯಗೊಂಡವರು. ಪ್ರತಿಭಟನಾಕಾರರೇ ಅಕ್ರಮ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಗುಂಡು ಹಾರಿಸಿರುವುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದೂ ಶರ್ಮಾ ಹೇಳಿದ್ದಾರೆ.

ಪೊಲೀಸರಿಂದಲೇ ಫೈರಿಂಗ್‌?: ಉ.ಪ್ರದೇಶ ಹಿಂಸಾಚಾರದ ವೇಳೆ ನಮ್ಮ ಬಂದೂಕುಗಳಿಂದ ಒಂದೇ ಒಂದು ಗುಂಡೂ ಹಾರಿಲ್ಲ ಎಂದು ಡಿಜಿಪಿ ಸಿಂಗ್‌ ಅವರು ಸ್ಪಷ್ಟನೆ ನೀಡಿದ ಬೆನ್ನಲ್ಲೇ ವಿಡಿಯೋವೊಂದು ಬಹಿರಂಗವಾಗಿದೆ. ಅದರಲ್ಲಿ ಕಾನ್ಪುರದಲ್ಲಿ ಪೊಲೀಸರೇ ತಮ್ಮ ರೈಫ‌ಲ್‌ಗ‌ಳಿಂದ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುತ್ತಿರುವ ದೃಶ್ಯಗಳಿವೆ.

ಟಿಎಂಸಿ ನಾಯಕರು ವಶಕ್ಕೆ: ಮೃತರ ಕುಟುಂಬಗಳಿಗೆ ಭೇಟಿ ನೀಡಲೆಂದು ಆಗಮಿಸಿದ್ದ ತೃಣಮೂಲ ಕಾಂಗ್ರೆಸ್‌ನ ನಾಲ್ವರು ಸದಸ್ಯರ ನಿಯೋಗವನ್ನು ಲಕ್ನೋ ವಿಮಾನ ನಿಲ್ದಾಣದಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಅವರು ಉ.ಪ್ರದೇಶದ ಬಿಜ್ನೋರ್‌ಗೆ ಭೇಟಿ ನೀಡಿ, ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರ ಕುಟುಂಬ ಸದಸ್ಯರಿಗೆ ಸಾಂತ್ವನ ನುಡಿದಿದ್ದಾರೆ.

ವಿದೇಶಿ ಪ್ರವಾಸಿಗರ ಹಿಂದೇಟು: ದೇಶದ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಕಾರಣ ಭಾರತಕ್ಕೆ ಭೇಟಿ ನೀಡಲು ವಿದೇಶಿ ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಕ್ರಿಸ್‌ಮಸ್‌ ರಜೆಯ ಸಮಯವಾದರೂ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸದ್ಯಕ್ಕೆ ಭಾರತಕ್ಕೆ ತೆರಳುವುದು ಒಳಿತಲ್ಲ ಎಂದು ಅಮೆರಿಕ, ಯುಕೆ, ಯುಎಇ ಸೇರಿದಂತೆ ವಿವಿಧ ದೇಶಗಳು ತಮ್ಮ ನಾಗರಿಕರಿಗೆ ಸೂಚನೆ ನೀಡಿರುವ ಕಾರಣ, ಭಾರತದ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

ಅನೇಕ ಪ್ರವಾಸಿಗರು ಕರೆ ಮಾಡಿ ತಮ್ಮ ಪ್ರವಾಸ ರದ್ದು ಪಡಿಸುತ್ತಿದ್ದಾರೆ ಎಂದು ಭಾರತೀಯ ಟ್ರಾವೆಲ್‌ ಏಜೆಂಟ್ಸ್‌ ಅಸೋಸಿಯೇಷನ್‌ನ ಅಧ್ಯಕ್ಷೆ ಜ್ಯೋತಿ ಮಾಯಾಲ್‌ ತಿಳಿಸಿದ್ದಾರೆ. ಇನ್ನೊಂದೆಡೆ ವಿದೇಶಗಳಿಗೆ ತೆರಳುತ್ತಿರುವ ಭಾರತೀಯರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದೂ ಹೇಳಲಾಗಿದೆ.

ಅಯ್ಯಪ್ಪ ಭಕ್ತರಿಗೆ ದಾರಿ ಬಿಟ್ಟರು!
ದೇಶದ ಹಲವು ಪ್ರದೇಶಗಳಲ್ಲಿ ಹಿಂಸಾಚಾರದ ಸುದ್ದಿಗಳು ಕೇಳಿಬರುತ್ತಿರುವ ನಡುವೆಯೇ ಸಾಮರಸ್ಯದ ಸಂದೇಶವೊಂದಕ್ಕೆ ತಮಿಳುನಾಡು ಸಾಕ್ಷಿಯಾಗಿದೆ. ಇಲ್ಲಿನ ಕೊಯಮತ್ತೂರಿನಲ್ಲಿ ಅಲ್‌ ಜಮಾತ್‌ ಜಿಲ್ಲಾ ಒಕ್ಕೂಟ ಮತ್ತು ಇತರೆ ಇಸ್ಲಾಮಿಕ್‌ ಸಂಘಟನೆಗಳು ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವು. ಸುಮಾರು 15 ಸಾವಿರ ಮಂದಿ ಇದರಲ್ಲಿ ಭಾಗಿಯಾಗಿದ್ದರು.

ಸಂಜೆ ನಮಾಜ್‌ಗೆ ಸಮಯವಾದ ಕಾರಣ, ಪ್ರತಿಭಟನಕಾರರು ಮೆರವಣಿಗೆ ನಡೆಯುತ್ತಿದ್ದ ಸ್ಥಳದಲ್ಲೇ ನಮಾಜ್‌ ಮಾಡತೊಡಗಿದರು. ಅಷ್ಟರಲ್ಲಿ ಶಬರಿಮಲೆಗೆ ಹೊರಟಿದ್ದ ಅಯ್ಯಪ್ಪ ಭಕ್ತರ ತಂಡವೊಂದು ಇರುಮುಡಿ ಕಟ್ಟು ಹೊತ್ತುಕೊಂಡು ಅಲ್ಲಿಗೆ ಬಂತು. ಕೂಡಲೇ ಪ್ರತಿಭಟನಾಕಾರರು ನಮಾಜ್‌ನ ನಡುವೆಯೇ ಅಯ್ಯಪ್ಪ ಭಕ್ತರಿಗೆ ದಾರಿ ಮಾಡಿಕೊಟ್ಟು, ಅವರಿಗೆ ತೆರಳಲು ಅನುವು ಮಾಡಿದರು. ಇದರ ವಿಡಿಯೋ ಈಗ ದೇಶಾದ್ಯಂತ ವೈರಲ್‌ ಆಗಿದೆ.

ನಡ್ಡಾಗೆ ವಲಸಿಗರಿಂದ ಸಮ್ಮಾನ
ಮಧ್ಯಪ್ರದೇಶದಲ್ಲಿ ವಾಸಿಸುತ್ತಿರುವ ಪಾಕಿಸ್ಥಾನದ ನೂರಾರು ವಲಸಿಗರು ಈ ಕಾಯ್ದೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ, ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸಮ್ಮಾನಿಸಿದ್ದಾರೆ. ಇಂದೋರ್‌ನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ವಲಸಿಗರು, ತಾವು ಧಾರ್ಮಿಕ ಕಾರಣಗಳಿಗಾಗಿ ಪಾಕ್‌ನ‌ಲ್ಲಿ ಎದುರಿಸಿದ ಸಂಕಷ್ಟಗಳನ್ನು ವಿವರಿಸಿದರು. ಸಿಎಎಯಿಂದಾಗಿ ನಮಗೆ ಭಾರತದ ಪೌರತ್ವ ಸಿಗಲಿದೆ ಎಂದು ಸಂಭ್ರಮಿಸಿದರು.

ಪ್ರಧಾನಿ ಮೋದಿ, ಅಮಿತ್‌ ಶಾ ದೇಶದ ಯುವಜನತೆಯ ಭವಿಷ್ಯವನ್ನೇ ನಾಶ ಮಾಡಿದ್ದಾರೆ. ನಿರುದ್ಯೋಗ ಹಾಗೂ ಆರ್ಥಿಕತೆಯ ದುಸ್ಥಿಃತಿ ಬಗ್ಗೆ ಯುವಕರಿಗಿರುವ ಆಕ್ರೋಶದಿಂದ ತಪ್ಪಿಸಿಕೊಳ್ಳಲು ದ್ವೇಷದ ತೆರೆಯ ಹಿಂದೆ ಅವಿತು ಕುಳಿತಿದ್ದಾರೆ.
– ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕ

ದೇಶದ ಶೇ.80ರಷ್ಟು ಮಂದಿಯೂ ಪೌರತ್ವ ಕಾಯ್ದೆಯ ಪರ ಬೀದಿಗಿಳಿದು ಹೋರಾಡಲು ನಿರ್ಧರಿಸಿದ್ದೇ ಆದಲ್ಲಿ, ಕಾಂಗ್ರೆಸ್‌ನ ಸ್ಥಿತಿ ಏನಾಗಬಹುದು ಎಂದು ಯೋಚಿಸಿ. ವಿಪಕ್ಷ ಕಾಂಗ್ರೆಸ್‌ ಭಾರತದಲ್ಲಿ ‘ಹೊಸ ಪಾಕಿಸ್ಥಾನ’ ಸೃಷ್ಟಿಸಲು ಸಂಚು ರೂಪಿಸಿದಂತಿದೆ.
– ಕೈಲಾಶ್‌ ವಿಜಯವರ್ಗೀಯ, ಬಿಜೆಪಿ ನಾಯಕ

ಟಾಪ್ ನ್ಯೂಸ್

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.