ಸ್ವ -ಶಕ್ತಿ ಯೋಜನೆ ಜಿಲ್ಲೆಯಾದ್ಯಂತ ವಿಸ್ತರಣೆ

ಪ್ರತಿ ಗ್ರಾಪಂವಾರು ವಿವಿಧ ಕೌಶಲ ಕೋರ್ಸ್‌ ತರಬೇತಿ

Team Udayavani, Dec 23, 2019, 1:06 PM IST

23-December-9

ಬಳ್ಳಾರಿ: ಜಿಲ್ಲಾ ಖನಿಜನಿ ಧಿ ಯೋಜನೆಯಡಿ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಬದುಕುಕಟ್ಟಿಕೊಡುವ ಕೆಲಸಕ್ಕೆ ಸನ್ನದ್ಧವಾಗಿರುವ ಜಿಲ್ಲಾಡಳಿತ “ಸ್ವ-ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದೆ. ಈಗಾಗಲೇ ಜಿಲ್ಲೆಯ ಸಂಡೂರು ತಾಲೂಕಿನಾದ್ಯಂತ ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಯೋಜನೆಯನ್ನು ಇದೀಗ ಜಿಲ್ಲೆಯಾದ್ಯಂತ ವಿಸ್ತರಿಸಲು ಉದ್ದೇಶಿಸಲಾಗಿದೆ.

ಜಿಲ್ಲಾ ಖನಿಜ ಪ್ರತಿಷ್ಠಾನದ ಅಡಿ 5 ವಿವಿಧ ಪ್ರಮುಖ ಕೌಶಲ್ಯಯುತ ಕೋರ್ಸ್‌ಗಳ ತರಬೇತಿಯನ್ನು ಸ್ವ-ಶಕ್ತಿ ಯೋಜನೆ ಅಡಿ ನಿರುದ್ಯೋಗಿ ಯುವಜನರಿಗೆ ನೀಡುವುದರ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿಸುವುದಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಇದಕ್ಕೆ ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆ ಎಂದು ಹೆಸರಿಡಲಾಗಿದೆ. ಮೊದಲ ಹಂತದಲ್ಲಿ ಸಂಡೂರು ತಾಲೂಕಿನಲ್ಲಿ ಬರುವ 26 ಗ್ರಾಪಂಗಳಲ್ಲಿ ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ತರಬೇತಿ ಸಂಪೂರ್ಣ ಉಚಿತವಾಗಿದೆ. ಆಧಾರ್‌ಕಾರ್ಡ್‌, ರೇಷನ್‌ ಕಾರ್ಡ್‌, ಜಾತಿ ಪ್ರಮಾಣಪತ್ರ (ಎಸ್ಸಿ/ ಎಸ್ಟಿಗೆ ಮಾತ್ರ), ಬ್ಯಾಂಕ್‌ ಖಾತೆಯ ವಿವರ ಹಾಗೂ ಭಾವಚಿತ್ರ ಸಹಿತ ಇತ್ತೀಚಿನ ಪಾಸ್‌ ಪೋರ್ಟ್‌ ಸೈಜಿನ 2 ಭಾವಚಿತ್ರಗಳೊಂದಿಗೆ ತರಬೇತಿ ಪಡೆಯಲು ಆಸಕ್ತಿಯಿರುವವರು ತಮ್ಮ ಗ್ರಾಪಂಗಳಲ್ಲಿ ಹೆಸರು ನೋಂದಾಯಿಸಬಹುದು.

ಗ್ರಾಪಂವಾರು ಪ್ರತಿ ಕೋರ್ಸ್‌ಗೆ 80ರಿಂದ 100 ಜನ ನಿರುದ್ಯೋಗಿ ಯುವಜನರಿಗೆ ತರಬೇತಿ ನೀಡಿ ಅವರನ್ನು ಸ್ವಾವಲಂಬಿಗೊಳಿಸುವ ಮಹತ್ತರ ಹೊಣೆ ಜಿಲ್ಲಾಡಳಿತದ್ದಾಗಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಹೇಳುತ್ತಾರೆ. ತರಬೇತಿಗೆ ಹಾಜರಾತಿ ಕಡ್ಡಾಯವಾಗಿರುತ್ತದೆ. ಶೇ.80 ರಷ್ಟು ಹಾಜರಾತಿ ಇದ್ದ ಫಲಾನುಭವಿಗಳಿಗೆ ಮಾತ್ರ ಟೂಲ್‌ಕಿಟ್‌ ನೀಡಲಾಗುವುದು. ಶೇ.
60 ರಷ್ಟು ಹಾಜರಾತಿ ಇದ್ದ ಫಲಾನುಭವಿಗಳಿಗೆ ಮಾತ್ರ ತರಬೇತಿ ಭತ್ಯೆ ನೀಡಲಾಗುತ್ತದೆ ಮತ್ತು ಮೊದಲು ಹೆಸರು ನೋಂದಾಯಿಸಿದವರಿಗೆ ಮೊದಲ ಆದ್ಯತೆಯನ್ನಾಗಿ ಪರಿಗಣಿಸಿ ತರಬೇತಿ ನೀಡಲಾಗುತ್ತದೆ. ಸಂಡೂರು ಸ್ವಯಂ-ಶಕ್ತಿ ಯೋಜನೆ ಹೆಸರಿನಲ್ಲಿ ನೀಡಲಾಗುವ ವಿವಿಧ ಕೌಶಲ್ಯ ತರಬೇತಿಗಳ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಡಿ. 24ರಂದು ಬೆಳಗ್ಗೆ 10ಕ್ಕೆ ಸಂಡೂರು ತಾಲೂಕಿನ ವಿಠ್ಠಲಾಪುರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಚಾಲನೆ ನೀಡಲಾಗುತ್ತದೆ.

ಡಿ.24ರಿಂದ ಜ. 8ರವರೆಗೆ ಸಂಡೂರು ತಾಲೂಕಿನ ಪ್ರತಿ ಗ್ರಾಪಂವಾರು ಈ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಇದರಲ್ಲಿ ನೋಂದಣಿಯಾದ ಅಭ್ಯರ್ಥಿಗಳನ್ನು ಅವರ ಆಸಕ್ತಿಗನುಗುಣವಾಗಿ ಅವರ ಗ್ರಾಪಂ ವ್ಯಾಪ್ತಿಯಲ್ಲಿಯೇ (5ಕಿ.ಮೀ ಮೀರದಂತೆ) ತರಬೇತಿ ನೀಡಲಾಗುತ್ತದೆ. ಜನವರಿ ಮೊದಲ ವಾರದಿಂದ ಈ ತರಬೇತಿಗಳು ಆರಂಭವಾಗಲಿವೆ ಎಂದು ಜಿಲ್ಲಾ ಧಿಕಾರಿ ನಕುಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.