ಬಾಯಿ ಹುಣ್ಣಿನ ನಿವಾರಣೆ ಹೇಗೆ ?


Team Udayavani, Dec 24, 2019, 5:09 AM IST

sd-33

ಬಾಯಿ ಹುಣ್ಣು ಅಥವಾ ಮೌತ್‌ ಅಲ್ಸರ್‌ ಇದು ಬಾಯಿಯ ಒಳಗಡೆ ಉಂಟಾಗುವುವ ಒಂದು ಹುಣ್ಣು. ಇದರ ನೋವು ಅಸಹನೀಯ. ಈ ಹುಣ್ಣಿನ ನೋವಿನಿಂದಾಗಿ ಜ್ವರ ಬರಬಹುದು, ಆಯಾಸವಾಗಬಹುದು ಮತ್ತು ಹಲ್ಲಿನ ಒಸಡುಗಳು ಊದಿಕೊಳ್ಳಬಹುದು. ಸಾಮಾನ್ಯವಾಗಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗಿ, ಉಷ್ಣತೆ ಜಾಸ್ತಿಯಾದಾಗ ಬಾಯಿಯಲ್ಲಿ ಹುಣ್ಣಾಗುತ್ತದೆ. ಅದರಲ್ಲೂ ಉಪ್ಪು ಹುಳಿ ಖಾರಗಳನ್ನು ಬಾಯಿಗೆ ಹಾಕಲು ಸಾಧ್ಯವಾಗುವುದಿಲ್ಲ. ಅತಿಯಾದ ಮಸಾಲೆಯುಕ್ತ ಆಹಾರ, ಆ್ಯಸಿಡಿಕ್‌ ಆಹಾರ ನಮ್ಮ ದೇಹಕ್ಕೆ ಅಲರ್ಜಿಯಾಗುವ ಆಹಾರಗಳನ್ನು ನಾವು ಸೇವಿಸಿದರೆ ಅಥವಾ ಹಲ್ಲನ್ನು ಸರಿಯಾಗಿ ಶುಚಿಗೊಳಿಸದ ಕಾರಣದಿಂದಾಗಿ, ಅತಿಯಾದ ಒತ್ತಡ, ಇಟಮಿನ್‌ ಬಿ, ಸಿ ಸೇರಿದಂತೆ ಪೌಷ್ಠಿಕಾಂಶದ ಕೊರತೆಯಿಂದ ಬಾಯಿಯಲ್ಲಿ ಹುಣ್ಣು ಉಂಟಾಗುವ ಸಾಧ್ಯತೆ ಇದೆ.

ಈ ಸಮಸ್ಯೆಯಿಂದ ನಿಮಗೆ ಮುಕ್ತಿ ಬೇಕಾದರೆ ನೀವು ಮನೆಯಲ್ಲೇ ಈ ಹುಣ್ಣನ್ನು ನಿವಾರಿಸಿಕೊಳ್ಳಬಹುದು.

ತುಳಸಿ ಎಲೆ
ತುಳಸಿ ಎಲೆ ಬಾಯಿ ಹುಣ್ಣಿನ ನಿವಾರಣೆ ಮಾಡುತ್ತದೆ. ಹತ್ತು ದಿನ ತುಳಸಿ ಎಲೆ ಜಗಿದು ನೀರು ಕುಡಿಯಬೇಕು. ಇದರಿಂದಾಗಿ ಬಾಯಿ ಹುಣ್ಣು ಶಮನಗೊಳ್ಳಬಹುದು.

ಮೆಂತೆ ಎಲೆ
ಮೆಂತೆ ಎಲೆಯನ್ನು ನೀರಿನಲ್ಲಿ ಸರಿಯಾಗಿ ಕುದಿಸಿ ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕಳಿಸುತ್ತಿದ್ದರೆ ಬಾಯಿ ಹುಣ್ಣು ನಿವಾರಣೆಗೊಳ್ಳುತ್ತದೆ.

ಅರಶಿಣ
ಸಾಮಾನ್ಯವಾಗಿ ಅರಶಿಣ ನಮ್ಮ ಎಲ್ಲರ ಮನೆಯಲ್ಲಿ ಸಿಗುವಂತ ವಸ್ತು. ಚಿಟಿಕಿ ಅರಶಿಣವನ್ನು ಹುಣ್ಣು ಆದ ಜಾಗಕ್ಕೆ ಹಚ್ಚುತ್ತಾ ಬಂದರೆ ಹುಣ್ಣು ನಿವಾರಣೆಯಾಗುತ್ತದೆ.

ಬಸಲೆಸೊಪ್ಪು: ಎರಡು ಬಸಲೆ ಸೊಪ್ಪನ್ನು ಚೆನ್ನಾಗಿ ಅಗೆದು ತಿನ್ನಬೇಕು. ಇದನ್ನು ದಿನದಲ್ಲಿ 3-4 ಬಾರಿ ಮಾಡಬೇಕು. ಈ ರೀತಿ ಮಾಡುವುದರಿಂದ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.

ಜೇನುತುಪ್ಪ
ಹುಣ್ಣಾಗಿರುವ ಜಾಗದಲ್ಲಿ ಜೇನುತುಪ್ಪವನ್ನು ಹಚ್ಚಿ ಹತ್ತು ನಿಮಿಷ ಬಿಟ್ಟು ತೊಳೆದುಕೊಂಡರೆ ಅದರ ಉರಿ ಕಡಿಮೆಯಾಗುತ್ತದೆ. ಜೇನುತುಪ್ಪಕ್ಕೆ ಅರಶಿಣ ಹಾಕಿ ಹುಣ್ಣಾದಲ್ಲಿಗೆ ಹಚ್ಚಿದರೆ 10ರಿಂದ 15 ನಿಮಿಷ ಬಿಟ್ಟು ತಣ್ಣೀರಿನಲ್ಲಿ ತೊಳೆಯಿರಿ ಹುಣ್ಣು ಮಾಯವಾಗುತ್ತದೆ.

ತೆಂಗಿನ ಹಾಲು
ಒಂದು ತೆಂಗಿನ ಕಾಯಿಯ ಹಾಲನ್ನು ತೆಗೆದುಕೊಂಡು ಅದನ್ನು ನಿಧಾನವಾಗಿ ಹುಣ್ಣುಗಳ ಮೇಲೆ ಮಸಾಜ್‌ ಮಾಡುತ್ತಾ ಬಂದರೆ ಬಾಯಿ ಹುಣ್ಣು ನಿವಾರಣೆಯಾಗುತ್ತದೆ. ಪ್ರತಿದಿನ ಮಲಗುವ ಮುನ್ನ ಸರಿಯಾಗಿ ಬಾಯಿ ಮುಕ್ಕಳಿಸಿ, ಉಪಹಾರದ ನಂತರವೂ ಈ ರೀತಿ ಮಾಡುವುದರಿಂದ ಬಾಯಿಯಲ್ಲಿ ಉಂಟಾಗುವ ಹುಣ್ಣನ್ನು ತಡೆಗಟ್ಟಬಹುದು.

ಟೊಮೇಟೊ
ಬಾಯಿ ಹುಣ್ಣಿಗೆ ಟೊಮೇಟೊ ಉತ್ತಮ ಕೆಲಸ ಮಾಡುತ್ತದೆ. ಹಸಿಯಾದ ಟೊಮ್ಯಾಟೋ ತಿಂದರೆ ಅಥವಾ ಟೊಮ್ಯಾಟೋ ಜ್ಯೂಸ್‌ ಮಾಡಿ ಅದರಲ್ಲಿ ಬಾಯಿ ಮುಕ್ಕಳಿಸಿಕೊಂಡರೆ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.

- ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.