ಮನಸ್ಸಿಗೆ ಚಿಕಿತ್ಸೆ ಯಾವಾಗ?

ಪ್ರತಿ 7 ಜನರಲ್ಲಿ ಒಬ್ಬರಿಗೆ ಮಾನಸಿಕ ಸಮಸ್ಯೆ

Team Udayavani, Dec 25, 2019, 6:46 AM IST

sz-40

ಮಾನಸಿಕ ಸಮಸ್ಯೆ ಎಂದಾಕ್ಷಣ “ಹುಚ್ಚು’ ಎಂದು, ಮಾನಸಿಕ ಆಸ್ಪತ್ರೆ ಎಂದರೆ “ಹುಚ್ಚಾಸ್ಪತ್ರೆ’ ಎಂಬ ತಪ್ಪುಕಲ್ಪನೆ ದೂರಮಾಡುವತ್ತಲೂ ಪ್ರಯತ್ನ ನಡೆಯಬೇಕಿದೆ. ಜನರು ಹಿಂಜರಿಕೆಯಿಲ್ಲದೇ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವಂಥ ವಾತಾವರಣ ಮನೆಯಲ್ಲಿ ಮತ್ತು ಸಮಾಜದಲ್ಲಿ ಸೃಷ್ಟಿಯಾದಾಗ ಮಾತ್ರ ಸ್ವಸ್ಥ ಭಾರತ ನಿರ್ಮಾಣವಾಗಲು ಸಾಧ್ಯ.

ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಎಷ್ಟು ನಿಷ್ಕಾಳಜಿ ಇದೆ ಎನ್ನುವುದಕ್ಕೆ ಕನ್ನಡಿ ಹಿಡಿಯುವಂತಿದೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಬಿಡುಗಡೆಗೊಳಿಸಿರುವ ಒಂದು ವರದಿ. 1990 2017ರವರೆಗಿನ ಈ ಅಧ್ಯಯನ ಮಾಪನದ ಪ್ರಕಾರ ಭಾರತದಲ್ಲಿ ಪ್ರತಿ 7 ಜನರಲ್ಲಿ ಒಬ್ಬರು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಉತ್ತರ ಭಾರತದಲ್ಲಿ ಮಕ್ಕಳು ಹದಿಹರೆಯದವರಲ್ಲಿ ಮಾನಸಿಕ ಸಮಸ್ಯೆಅಧಿಕವಿದ್ದರೆ, ದಕ್ಷಿಣದಲ್ಲಿ, ಅಂದರೆ ಕರ್ನಾಟಕ, ಕೇರಳ, ಆಂಧ್ರ, ತಮಿಳುನಾಡು, ತೆಲಂಗಾಣದಲ್ಲಿ ಪ್ರೌಢರು ಮಾನಸಿಕ ಸಮಸ್ಯೆಗಳಿಂದ ಹೆಚ್ಚು ಬಳಲುತ್ತಿದ್ದಾರೆ.

ದಕ್ಷಿಣದಲ್ಲಿ ತೀವ್ರತರ ಮನೋಕಾಯಿಲೆಗಿಂತಲೂ ಖನ್ನತೆ, ದುಗುಡ ಅನುಭವಿಸುವವರ ಸಂಖ್ಯೆ ಅಧಿಕವಿದೆ. ಗಾಬರಿ ಹುಟ್ಟಿಸಬೇಕಾದ ಸಂಗತಿಯೆಂದರೆ, ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರುವ ದೇಶವಾಸಿಗಳ ಪ್ರಮಾಣ 1990ಕ್ಕೆ ಹೋಲಿಸಿದರೆ ದ್ವಿಗುಣಗೊಂಡಿರುವುದು. 2017ರ ವೇಳೆಗೆ ದೇಶದಲ್ಲಿ 19.73 ಕೋಟಿ ಜನರು ಒಂದಲ್ಲ ಒಂದು ರೀತಿಯ ಮನೋರೋಗಕ್ಕೆ ತುತ್ತಾಗಿದ್ದಾರೆ ಎನ್ನುತ್ತದೆ ಈ ವರದಿ.

ದೇಶವಾಸಿಗಳನ್ನು ಹೆಚ್ಚು ಕಾಡುತ್ತಿರುವ ಮನೋ ಸಮಸ್ಯೆಗಳಲ್ಲಿ ಮೊದಲೆರಡು ಸ್ಥಾನಗಳಲ್ಲಿ ಖನ್ನತೆ ಮತ್ತು ದುಗುಡ ಸಂಬಂಧಿ ಸಮಸ್ಯೆಗಳಿದ್ದರೆ, ನಂತರದ ಸ್ಥಾನದಲ್ಲಿ ಸ್ಕಿಝೋಫ್ರೀನಿಯಾ ಮತ್ತು ಬೈಪೋಲಾರ್‌ ಸಮಸ್ಯೆಗಳು ಇವೆ. ದಕ್ಷಿಣ ರಾಜ್ಯಗಳು ಆಧುನಿಕತೆಯ ಪಥದಲ್ಲಿ ಸಾಗುತ್ತಿದ್ದು, ಈ ಕಾರಣಗಳಿಂದಾಗಿ ಅಲ್ಲಿನ ಜನರಿಗೆ ಮಾನಸಿಕ ಒತ್ತಡವೂ ಅಧಿಕವಾಗುತ್ತದೆ ಎನ್ನುತ್ತದೆ ಈ ವರದಿ.

ಗಮನಿಸಬೇಕಾದ ಅಂಶವೆಂದರೆ, ಪುರುಷರಿಗಿಂತಲೂ ಮಹಿಳೆಯರಲ್ಲೇ ಮನೋಸಮಸ್ಯೆಗಳು ಅಧಿಕವಿದ್ದು, ಇದಕ್ಕೆ ಲಿಂಗ ತಾರತಮ್ಯ, ಲೈಂಗಿಕ ದೌರ್ಜನ್ಯ, ಪ್ರಸವ ಪೂರ್ವ ಪ್ರಸವಾನಂತರದ ಒತ್ತಡ ಕಾರಣವಾಗುತ್ತವೆ. ಸ್ವಾಸ್ಥ್ಯದ ವಿಚಾರದ ಬಗ್ಗೆ ಸಾಮಾಜಿಕವಾಗಿಯಾಗಲಿ ಅಥವಾ ಸರಕಾರಿ ಮಟ್ಟದಲ್ಲೇ ಆಗಲಿ ಚರ್ಚೆಯಾಗುವಾ ಗೆಲ್ಲ ದೈಹಿಕ ಆರೋಗ್ಯದ ಬಗ್ಗೆಯೇ ಮಾತನಾಡಲಾಗುತ್ತದೆ. ಆದರೆ ಮನುಷ್ಯನ ಜೀವನ ಗುಣಮಟ್ಟಕ್ಕೆ ದೈಹಿಕ ಅನಾರೋಗ್ಯದಷ್ಟೇ, ಮಾನಸಿಕ ರೋಗಗಳೂ ಮಾರಕ ಎನ್ನುವುದು ಪರಿಗಣನೆಗೇ ಬರುತ್ತಿಲ್ಲ. ಈ ಕಾರಣಕ್ಕಾಗಿಯೇ ಆರೋಗ್ಯ ವಿಮೆಗಳ ವ್ಯಾಪ್ತಿಯಲ್ಲೂ ಕೂಡ ಮಾನಸಿಕ ವ್ಯಾಧಿಗಳು ಬರುವುದೇ ಇಲ್ಲ. ಮನೋಚಿಕಿತ್ಸೆಗಳೂ ಕೂಡ ಆರೋಗ್ಯ ವಿಮೆಯ ವ್ಯಾಪ್ತಿಗೆ ಬರುವಂತೆ ಮಾಡಬೇಕಿದೆ.

ಆದಾಗ್ಯೂ ಕಳೆದ ಕೆಲವು ವರ್ಷಗಳಿಂದ ಕೇಂದ್ರ ಸರಕಾರವು ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಕೆಲಸ ಆರಂಭಿಸಿರುವುದು ಸಕಾರಾತ್ಮಕ ನಡೆ ಎನ್ನಬಹುದು. ಆದರೆ ಸಾಗಬೇಕಾದ ದಾರಿ ಬಹಳ ಇದೆ. ಇತ್ತೀಚೆಗೆ ನೀತಿ ಆಯೋಗ ಕೂಡ, ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳಿಗೂ ಮಾನಸಿಕ ಖನ್ನತೆಗಳಿಗೂ ನೇರಾನೇರ ಸಂಬಂಧ ಕಂಡುಬರುತ್ತಿದೆ ಎಂದಿದೆ. ಈ ಅಂಶಗಳನ್ನು ಅವಲೋಕಿಸಿದಾಗ, ಮಾನಸಿಕ ಆರೋಗ್ಯದ ವಿಚಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಬೃಹತ್‌ ನೀತಿ ನಿರೂಪಿತವಾಗುವ ತುರ್ತು, ಗೋಚರಿಸುತ್ತಿದೆ.

ಪ್ರತಿ ಆಸ್ಪತ್ರೆಗಳಲ್ಲಿ ಮಾನಸಿಕ ಚಿಕಿತ್ಸಕರು, ಶಾಲೆಗಳಲ್ಲಿ ಆಪ್ತ ಸಮಾಲೋಚಕರು ಇರುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಡ್ಡಾಯಗೊಳಿಸಬೇಕಿದೆ. ಇನ್ನು ಮಾನಸಿಕ ಸಮಸ್ಯೆ ಎಂದಾಕ್ಷಣ “ಹುಚ್ಚು’ ಎಂದು, ಮಾನಸಿಕ ಆಸ್ಪತ್ರೆ ಎಂದರೆ “ಹುಚ್ಚಾಸ್ಪತ್ರೆ’ ಎಂಬ ತಪ್ಪುಕಲ್ಪನೆ ದೂರಮಾಡುವತ್ತಲೂ ಪ್ರಯತ್ನ ನಡೆಯಬೇಕಿದೆ. ಸತ್ಯವೇನೆಂದರೆ, ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಲೇ ಇರುತ್ತಾರೆ, ಪ್ರಮಾಣದಲ್ಲಿ ವ್ಯತ್ಯಾಸವಿರುತ್ತದಷ್ಟೇ. ಜನರು ಹಿಂಜರಿಕೆಯಿಲ್ಲದೇ ತಮ್ಮ ಸಮಸ್ಯೆಗಳನ್ನು ಬಹಿರಂಗವಾಗಿ ಹೇಳಿಕೊಳ್ಳುವಂಥ ವಾತಾವರಣ ಮನೆಯಲ್ಲಿ ಮತ್ತು ಸಮಾಜದಲ್ಲಿ ಸೃಷ್ಟಿಯಾದಾಗ ಮಾತ್ರ ಸ್ವಸ್ಥ ಭಾರತ ನಿರ್ಮಾಣವಾಗಲು ಸಾಧ್ಯ.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.