ಭತ್ತದ ಮೇವು ಮಾರಾಟ


Team Udayavani, Dec 25, 2019, 12:31 PM IST

25-December-8

„ಗುಂಡಭಟ್ಟ ಜೋಷಿ
ಕೆಂಭಾವಿ:
ಜಿಲ್ಲೆಯಲ್ಲಿ ಮೇವಿನ ಕೊರತೆ ಆಗಬಾರದು ಎಂಬ ಉದ್ದೇಶದಿಂದ ರೈತರು ಭತ್ತದ ಮೇವನ್ನು ಸುಡಬಾರದು ಎಂದು ಜಿಲ್ಲಾಧಿಕಾರಿಗಳು ಪ್ರತಿ ಬಾರಿ ಆದೇಶ ನೀಡುತ್ತಾರೆ. ಆದರೆ ಇದಕ್ಕೆ ಅಪವಾದ ಎಂಬಂತೆ ಕೆಂಭಾವಿ ವಲಯದಿಂದ ಭತ್ತದ ಮೇವನ್ನು ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಲಾಗುತ್ತಿದೆ.

ಈಗಾಗಲೇ ಭತ್ತದ ರಾಶಿ ಪ್ರಾರಂಭವಾಗಿದೆ. ನಾ ಮುಂದು ತಾ ಮುಂದು ಎಂದು ಹೊರ ಜಿಲ್ಲೆಗಳ ಜನರು ನೂರಾರು ವಾಹನಗಳಲ್ಲಿ ಭತ್ತದ ಮೇವನ್ನು ತುಂಬಿಸಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ದನಗಳಿಗೆ ಮೇವಿನ ಕೊರತೆ ಎದುರಾಗಿತ್ತು. ಇದನ್ನು ಮನಗಂಡ ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳಿಗೆ ಮೇವು ಸಾಗಿಸದಂತೆ ಕಟ್ಟಪ್ಪಣೆ ಹೊರಡಿಸಿದೆ. ಕೆಂಭಾವಿ ವಲಯದಲ್ಲಿ ಅರ್ಧ ಭಾಗ ನೀರಾವರಿ ಪ್ರದೇಶಕ್ಕೆ ಒಳಪಟ್ಟಿದ್ದರೆ, ಇನ್ನರ್ಧ ಭಾಗ ಒಣ ಬೇಸಾಯ ಪದ್ಧತಿಯಿಂದ ಮಳೆ ಅವಲಂಬಿಸಿ ರೈತರು ಬಿತ್ತನೆ ಮಾಡುತ್ತಾರೆ. ಒಣಬೇಸಾಯ ಪದ್ಧತಿ ಅಳವಡಿಸಿಕೊಂಡಿರುವ ರೈತರು ತಮ್ಮ ರಾಸುಗಳ ಹಸಿವು ನೀಗಿಸಲು ಭತ್ತದ ಮೇವಿನ ಕಡೆ ಚಿತ್ತ ನೆಟ್ಟಿದ್ದಾರೆ. ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆ ಅಲ್ಲದೆ ಮಹಾರಾಷ್ಟ್ರ, ಆಂಧ್ರ ರಾಜ್ಯಗಳಿಂದಲೂ ಜನರು ಬಂದು ಟ್ರ್ಯಾಕ್ಟರ್‌, ಲಾರಿ ಸೇರಿದಂತೆ ಇನ್ನಿತರೆ ವಾಹನಗಳಲ್ಲಿ ಭತ್ತದ ಮೇವನ್ನು ತಗೆದುಕೊಂಡು ಹೋಗುತ್ತಿದ್ದಾರೆ. ಇದಕ್ಕೆ ತಡೆ ಹಿಡಿಯುವ ಪ್ರಯತ್ನ ಜಿಲ್ಲಾಡಳಿತ ಮಾಡುವುದಿಲ್ಲವೇ ಎಂಬ ಪ್ರಶ್ನೆ ಎದುರಾಗಿದೆ.

ರೈತರು ಪ್ರತಿ ಬಾರಿ ಭತ್ತದ ಮೇವನ್ನು ಉಚಿತವಾಗಿ ನೀಡುತ್ತಿದ್ದರು. ಆದರೆ ಈ ಬಾರಿ ಬೇರೆ ಜಿಲ್ಲೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಪ್ರತಿ ಒಂದು ಲೋಡ್‌ ಗೆ ಇಂತಿಷ್ಟು ನಿಗದಿ ಮಾಡಿ ಆ ಭಾಗದ ರೈತರಿಂದ ಹಣ ಪಡೆಯುತ್ತಿದ್ದಾರೆ ಎಂದು ಕೆಲವರು ಹೇಳುತ್ತಾರೆ. ಕೆಂಭಾವಿ-ಸುರಪುರ, ಕೆಂಭಾವಿ- ಹುಣಸಗಿ, ಕೆಂಭಾವಿ-ಮಲ್ಲಾ ರಸ್ತೆಗಳಲ್ಲಿ ಈಗಾಗಲೇ ಭತ್ತದ ರಾಶಿ ನಡೆದಿದೆ.

ಭತ್ತದ ಗದ್ದೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಒಟ್ಟಾರೆ ಮುಂಬರುವ ಬೇಸಿಗೆ ದಿನಗಳಲ್ಲಿ ದನಕರುಗಳಿಗೆ ಮೇವಿನ ಕೊರತೆ ಆಗದ ರೀತಿಯಲ್ಲಿ ಜಿಲ್ಲಾಡಳಿತ ಯಾವ ರೀತಿ ಕ್ರಮ ಕೈಗೊಳ್ಳುವುದು ಕಾದು ನೋಡಬೇಕು.

ತಾಲೂಕಿನಲ್ಲಿ ಮುಂಬರುವ ದಿನಗಳಲ್ಲಿ ದನಕರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ನೀಗಿಸಲು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗಿದೆ. ಯಾವ ಕಾರಣಕ್ಕೂ ನಮ್ಮ ತಾಲೂಕಿನ ಮೇವು ಬೇರೆ ಜಿಲ್ಲೆಗೆ ಹೋಗದಂತೆ ಕ್ರಮ ಕೈಗೊಳ್ಳಲಾಗುವುದು. ತಾಲೂಕಿನ ಗಡಿಯಲ್ಲಿ ಗಸ್ತು ನೇಮಿಸಲಾಗುವುದು. ಅವಶ್ಯ ಬಿದ್ದರೆ ಪೊಲೀಸ್‌ ಇಲಾಖೆ ಸಹಾಯ ಪಡೆಯಲಾಗುವುದು.
ನಿಂಗಣ್ಣ ಬಿರಾದಾರ,
ತಹಶೀಲ್ದಾರ್‌ ಸುರಪುರ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.