ಜವಾರಿ ಟೊಮ್ಯಾಟೋ ತಳಿ ಸಂಸ್ಕರಣೆ


Team Udayavani, Dec 25, 2019, 2:17 PM IST

kopala-tdy-3

ಕುಷ್ಟಗಿ: ತಾಲೂಕಿನ ನಿಡಶೇಸಿ ಗ್ರಾಮದ ಸರ್ಕಾರಿ ತೋಟಗಾರಿಕಾ ಫಾರ್ಮ್ನಲ್ಲಿ ಇದೇ ಮೊದಲ ಬಾರಿಗೆ ಇಸ್ರೇಲ್‌ ಕೃಷಿ ಆಧಾರಿತವಾಗಿ ಚರಿ ಟೊಮ್ಯಾಟೋ ಬೆಳೆ ಪ್ರಯೋಗ ಫಲಶ್ರುತಿ ನೀಡಿದೆ.

ಮೂಲ ಜವಾರಿ ಟೊಮ್ಯಾಟೋವನ್ನು ಸಂಸ್ಕರಿಸಿ, ಅಭಿವೃದ್ಧಿ ಪಡಿಸಿದ ಈ ಟೊಮ್ಯಾಟೋಗೆ ಚರಿ ಟೊಮ್ಯಾಟೋ ಎಂದು ಹೆಸರಿಸಲಾಗಿದೆ. ಮೂಲ ಜವಾರಿ ಟೊಮ್ಯಾಟೋ ತೀರ ಹುಳಿಯಾಗಿದ್ದು, ಹೆಚ್ಚು ಬೀಜಗಳಿಂದ ಕೂಡಿರುತ್ತದೆ. ಆದರೆ ಚರಿ ಟೊಮ್ಯಾಟೋ ಸಿಹಿಯಾಗಿದ್ದು, ಬೀಜ ಕಡಿಮೆ ಇರುತ್ತದೆ. ತರಕಾರಿ ಹಾಗೂ ಹಣ್ಣಿನಂತೆಯೂ ಬಳಸಬಹುದಾಗಿದೆ. ತೋಟಗಾರಿಕಾ ಫಾರ್ಮ್ನಲ್ಲಿ ಕಳೆದ ತಿಂಗಳಿಂದೀಚೆಗೆ ತಲಾ 10 ಗುಂಟೆಯ ಪ್ರತ್ಯೇಕ ಎರಡು ಪಾಲಿಹೌಸ್‌ನಲ್ಲಿ ಪ್ರಯೋಗಾರ್ಥ ಚರಿ ಟೊಮ್ಯಾಟೋ ಬೆಳೆಯಲಾಗಿದೆ. ಪ್ರತಿ ಪಾಲಿಹೌಸ್‌ನಲ್ಲಿ 2,500 ಗಿಡಗಳಿದ್ದು, ಪ್ರಯೋಗಾರ್ಥವಾಗಿರುವ ಹಿನ್ನೆಲೆಯಲ್ಲಿ ಉತ್ತಮ ಇಳುವರಿ ಬಂದಿದೆ. ಚರಿ ಟೊಮ್ಯಾಟೋ ಬೆಂಗಳೂರಿನ ಹುಳಿಮಾವು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಪ್ರಯೋಗಾರ್ಥವಾಗಿ ಬೆಳೆಯಲಾಗಿತ್ತು. ನಂತರ ಇದೇ ಮೊದಲ ಬಾರಿಗೆ ಕೊಪ್ಪಳ ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಮಾರ್ಗದರ್ಶನದಲ್ಲಿ ಕುಷ್ಟಗಿಯ ನಿಡಶೇಸಿ ತೋಟಗಾರಿಕಾ ಫಾರ್ಮ್ನಲ್ಲಿ ಬೆಳೆಯಲಾಗಿದ್ದು, ನಿರೀಕ್ಷಿಸಿದಂತೆ ಇಳುವರಿ ಬಂದಿದೆ.

ಕೆಂಪು ಹಾಗೂ ಹಳದಿ ಬಣ್ಣದ ಚರಿ ಟೊಮ್ಯಾಟೋ ಹಣ್ಣನ್ನು ನೇರವಾಗಿ ಚಟ್ನಿ, ಸಾಸ್‌ ತಯಾರಿಕೆಗೆ ಹಾಗೂ ದೊಡ್ಡ ಹೋಟೆಲ್‌ಗ‌ಲ್ಲಿ ಸ್ನಾ ಕ್ಸ್‌ ಆಗಿ ಬಳಸಲಾಗುತ್ತಿದೆ. ಐರಿ ಟೊಮ್ಯಾಟೋ ಸದ್ಯದ ಬೆಲೆ ಕೆ.ಜಿ.ಗೆ 80 ರೂ. ಇದೆ. 2,500 ಗಿಡಗಳಿಂದ ಪ್ರತಿದಿನ 80ರಿಂದ 100 ಕೆ.ಜಿ ಇಳುವರಿ ಬರುತ್ತಿದ್ದು, ಮುಂದಿನ 7-8 ತಿಂಗಳಿನಲ್ಲಿ 30 ಟನ್‌ ನಿರೀಕ್ಷೆಯಲ್ಲಿದ್ದು, 6ರಿಂದ 7 ಲಕ್ಷ ರೂ. ಆದಾಯ ನಿರೀಕ್ಷಿಸಬಹುದಾಗಿದೆ ಎಂದು ಸಹಾಯಕ ತೋಟಗಾರಿಕಾ ಅಧಿಕಾರಿ ಆಂಜನೇಯ ದಾಸರ್‌ ವಿವರಿಸಿದರು. ಈ ಬೆಳೆ 8 ತಿಂಗಳವರೆಗೆ ನಿರಂತರ ಇಳುವರಿ ನೀಡುತ್ತಿದ್ದು, ಹಣ್ಣಾದ ಚರಿ ಟೊಮ್ಯಾಟೋಗಳನ್ನು ನೇರವಾಗಿ ಮಾರುಕಟ್ಟೆಗೆ ಕಳಿಸಬಹುದು. ಹಣ್ಣಿನ ತೊಗಟೆ ದಪ್ಪವಾಗಿದ್ದು, 15 ದಿನ ಇಟ್ಟರೂ ಅದೇ ತಾಜಾತನ ಉಳಿಸಿಕೊಂಡಿರುತ್ತದೆ. ಹೀಗಾಗಿ ಬೇರೆಡೆ ಸಾಗಾಣಿಕೆಗೆ ಈ ಹಣ್ಣು ಉಪಯುಕ್ತವಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.