ಶೂನ್ಯ ಬಂಡವಾಳದಲ್ಲಿ ಸಿನಿಮಾ!

ನಂಬೋದು ಕಷ್ಟ, ಆದ್ರೂ ನಂಬಲೇ ಬೇಕು...

Team Udayavani, Dec 26, 2019, 7:01 AM IST

Maduve-Oota

ಶೂನ್ಯ ಬಂಡವಾಳದಲ್ಲಿ ಕೃಷಿ, ಶೂನ್ಯ ಬಂಡವಾಳದಲ್ಲಿ ಉದ್ಯಮ ಮುಂತಾದವು ಶುರು ಮಾಡುವುದರ ಬಗ್ಗೆ ನೀವೆಲ್ಲ ಕೇಳಿರುತ್ತೀರಿ. ಆದರೆ ಶೂನ್ಯ ಬಂಡವಾಳದಲ್ಲಿ ಸಿನಿಮಾ ಮಾಡುವುದನ್ನು ಎಂದಾದರೂ ಕೇಳಿದ್ದೀರಾ? ಚಿತ್ರರಂಗದಲ್ಲಿ ಇದನ್ನು ಕೇಳುವುದಿರಲಿ, ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಒಂದು ಸಿನಿಮಾ ಮಾಡಬೇಕು ಅಂದ್ರೆ ನಮ್ಮ ನಿರ್ಮಾಪಕರು, ನಿರ್ದೇಶಕರು, ನಟ-ನಟಿಯರು ಕೋಟಿ ಕೋಟಿ ಖರ್ಚಾಗುತ್ತದೆ ಎಂದು ಲೆಕ್ಕಾಚಾರ ಹಾಕುವಾಗಲೇ, ಇಲ್ಲೊಂದು ಹೊಸಬರ ತಂಡ ಶೂನ್ಯ ಬಂಡವಾಳದಲ್ಲಿ ಸದ್ದಿಲ್ಲದೆ ಒಂದು ಸಿನಿಮಾ ಮಾಡಿ ಮುಗಿಸಿದೆ.

ಅಷ್ಟೇ ಅಲ್ಲದೆ ಸದ್ಯ ಫ‌ಸ್ಟ್‌ ಕಾಪಿಯೊಂದಿಗೆ ಹೊರಬಂದಿರುವ ಈ ಚಿತ್ರ ಸೆನ್ಸಾರ್‌ ಮುಂದಿದ್ದು, ಶೀಘ್ರದಲ್ಲಿಯೇ ರಿಲೀಸ್‌ ಕೂಡ ಆಗಲಿದೆ ಅಂದ್ರೆ ನೀವು ನಂಬಲೇಬೇಕು. ಹೌದು, ಚಿತ್ರರಂಗದ ಮಟ್ಟಿಗೆ ಸೋಜಿಗ ಎನಿಸಿದರೂ, ಇಂಥದ್ದೊಂದು ಪ್ರಯತ್ನ ನಡೆದಿದೆ. ಸಮಾನ ಮನಸ್ಕ ಸಿನಿಮಾ ಪ್ರೇಮಿಗಳು ಸೇರಿ ಇಂಥದ್ದೊಂದು ಸಿನಿಮಾವನ್ನು ಸಾಧ್ಯವಾಗಿಸಿದ್ದಾರೆ. ಯಾರೂ ಈ ಚಿತ್ರಕ್ಕೆ ನೇರವಾಗಿ ಎಲ್ಲಿಯೂ ಹಣ ಹೂಡದೆಯೇ, ಶ್ರಮದಾನ ಮಾಡುವ ಮೂಲಕ ಚಿತ್ರವನ್ನು ನಿರ್ಮಿಸಿದ್ದಾರೆ. ಅಂದಹಾಗೆ, ಆ ಚಿತ್ರದ ಹೆಸರು “ಮದುವೆ ಊಟ’.

ಇನ್ನು ಚಿತ್ರದಲ್ಲಿ ಅಭಿನಯ, ಚಿತ್ರೀಕರಣ, ಪೋಸ್ಟ್‌ ಪ್ರೊಡಕ್ಷನ್‌ ಇವೆಲ್ಲಾವನ್ನು ಚಿತ್ರತಂಡದ ಸದಸ್ಯರು ಉಚಿತವಾಗಿ ಮಾಡಿದ್ದಾರಂತೆ. ಕೇವಲ ನಾಲ್ಕು ಜಾಗದಲ್ಲಿ ಶೂಟಿಂಗ್‌ ನಡೆಸಲಾಗಿದ್ದು, ಯಾವ ಕಮರ್ಶಿಯಲ್‌ ಸಿನಿಮಾಗಳಿಗೂ ಕಡಿಮೆ ಇಲ್ಲದಂತೆ ನಮ್ಮ ಚಿತ್ರ ಮೂಡಿಬಂದಿದೆ ಎನ್ನುತ್ತದೆ ಚಿತ್ರತಂಡ. “ವ್ಯಾಸರ ಜನಪ್ರಿಯ ನುಡಿ ಸಂಶಯಾತ್ಮ ವಿನಶ್ಯತಿ. ಅಂದರೆ ಸಂಶಯ ಹೊಂದಿರುವವರು ನಾಶ ಆಗ್ತಾರೆ. ಅವರು ಸುಖದಿಂದ ಇರೋದಿಲ್ಲ. ಬೇರೆಯವರನ್ನು ಸಂತೋಷದಿಂದ ಇರಲು ಬಿಡುವುದಿಲ್ಲ.

ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮನು ಅರ್ಜುನನಿಗೆ ಹೇಳಿದ ಮಾತಿನಂತೆ ಈ ಚಿತ್ರದ ಕಥನ ಇರಲಿದೆ. ಜೀವನವೆಲ್ಲಾ ಸಂಶಯಪಡುವ ನಾವು ಮದುವೆಯಾಗುವವರ ಯೋಚನೆ, ಆಲೋಚನೆ ಮತ್ತು ಹಿನ್ನಲೆ ಬೇರೆಯಾಗಿರುತ್ತದೆ. ಅವರ ಮೇಲೆ ಅನುಮಾನಪಟ್ಟರೆ ಬದುಕು ಎಲ್ಲಿಗೋ ತೆಗೆದುಕೊಂಡು ಹೋಗುತ್ತದೆ. ಪ್ರಸಕ್ತ ಸಮಾಜದಲ್ಲಿ ಶೇಕಡ 30 ರಷ್ಟು ಜನರು ಇದೇ ರೀತಿಯಲ್ಲಿ ಸಾಗುತ್ತಿದ್ದಾರೆ. ನಿಮಾನ್ಸ್‌ದಲ್ಲಿ ರೋಗಿಗಳು ಸಾಕಷ್ಟು ಮಂದಿ ಇದರಿಂದಲೇ ನರಳುತ್ತಿದ್ದಾರೆ. ಅಮೆರಿಕಾದಲ್ಲಿ ಒಂದಷ್ಟು ಮಂದಿ ಸೈಕಿಯಾಟ್ರಿಕ್‌ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದಾರೆ.

ಸಂಬಂಧಗಳಲ್ಲಿ ಭಾವನೆಗಳ ಅಭದ್ರತೆ ಇಲ್ಲದಿದ್ದರೆ ಏನಾಗುತ್ತೆ ಎಂಬುದು ಕತೆಯ ತಿರುಳು’ ಎಂದು ಚಿತ್ರದ ಬಗ್ಗೆ ವಿವರಣೆ ಕೊಡುತ್ತದೆ ಚಿತ್ರತಂಡ. ಮಹೇಶ್‌ ಲೋನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವುದರ ಜೊತೆಗೆ ಚಿತ್ರದಲ್ಲಿ ಒಂದು ಪಾತ್ರಕ್ಕೆ ಬಣ್ಣವನ್ನೂ ಹಚ್ಚಿದ್ದಾರೆ. ಉಳಿದಂತೆ ಜೈ, ಸಾವನ್‌, ಆಕಾಶ್‌, ಧರ್ಮೇಂದ್ರ ಅರಸ್‌, ಗಾಯಿತ್ರಿ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರವಿತೇಜ, ವಿಕಾಸ್‌ ವಸಿಷ್ಟ ಮತ್ತು ಶ್ರೀಕಾಂತ್‌ ಅತ್ರಯ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು, ಮಧುಸೂಧನ್‌ ಹಿನ್ನಲೆ ಸಂಗೀತ ನೀಡಿದ್ದಾರೆ.

ಇನ್ನೊಂದು ವಿಶೇಷವೆಂದರೆ, ತಂಡವು ಇದೆಲ್ಲಾವನ್ನು ನಿಭಾಯಿಸಿರುವುದರ ಜೊತೆಗೆ ಹಳ್ಳಿಗಳನ್ನು ರಕ್ಷಿಸೋಣ ಎನ್ನುವ ಪರಿಕಲ್ಪನೆಯೊಂದಿಗೆ ಮೂಲಭೂತ ಸೌಕರ್ಯ ಇಲ್ಲದ ಹಳ್ಳಿಯನ್ನು ಅಭಿವೃದ್ದಿಗೊಳಿಸಲು ಯೋಜನೆ ರೂಪಿಸಿಕೊಂಡಿದೆ. ಮೊದಲ ಹಂತವಾಗಿ ಯಾದಗಿರಿ ಜಿಲ್ಲೆಯ ಗಂಗನಾಳ ಸ್ಥಳವನ್ನು ಆಯ್ಕೆ ಮಾಡಿಕೊಂಡಿದ್ದು, ಇದಕ್ಕಾಗಿ ಚಿತ್ರದ ಪ್ರಿ-ಟಿಕೆಟ್‌ನ್ನು ಖರೀದಿಸುವವರ ಹೆಸರನ್ನು ಚಿತ್ರದ ಟೈಟಲ್‌ ಕಾರ್ಡ್‌ನಲ್ಲಿ ಹಾಕಲು ಪ್ಲಾನ್‌ ಮಾಡಿಕೊಂಡಿದೆ.

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.