ಸೂರ್ಯಗ್ರಹಣ ಮೋಕ್ಷ: ಬಾನಂಗಳದಲ್ಲಿ ಕಂಕಣ ಸೂರ್ಯಗ್ರಹಣದ ನೆರಳು ಬೆಳಕಿನಾಟ
ಭಾರತದಲ್ಲಿ ಅತ್ಯಪರೂಪದ ಕಂಕಣ ಸೂರ್ಯಗ್ರಹಣ ಮೊದಲು ಗೋಚರವಾಗಿದ್ದು ಕೇರಳದ ಚೆರ್ವತ್ತೂರಿನಲ್ಲಿ
Team Udayavani, Dec 26, 2019, 12:42 PM IST
ನವದೆಹಲಿ:ಅಪರೂಪದ ಕಂಕಣ ಸೂರ್ಯಗ್ರಹಣ ಗುರುವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಿದ್ದು, 11.15ಕ್ಕೆ ಸೂರ್ಯಗ್ರಹಣ ಮುಕ್ತಾಯವಾಯಿತು. ಈ ಬಾರಿ ಅತಿ ಹೆಚ್ಚು ಸ್ಪಷ್ಟವಾಗಿ ಗ್ರಹಣ ಕರ್ನಾಟಕದ ಮಂಗಳೂರು, ಮೈಸೂರು ಹಾಗೂ ಮಡಿಕೇರಿ ಭಾಗದಲ್ಲಿ ಗೋಚರಿಸಿದ್ದು ವಿಶೇಷವಾಗಿತ್ತು.
ಸೌದಿ ಅರೇಬಿಯಾದ ರಿಯಾದ್ ನಲ್ಲಿ ಆರಂಭಿಕವಾಗಿ ಭಾಗಶಃ ಸೂರ್ಯಗ್ರಹಣ ಗೋಚರಿಸಿತ್ತು. ಭಾರತದಲ್ಲಿ ಅತ್ಯಪರೂಪದ ಕಂಕಣ ಸೂರ್ಯಗ್ರಹಣ ಮೊದಲು ಗೋಚರವಾಗಿದ್ದು ಕೇರಳದ ಚೆರ್ವತ್ತೂರಿನಲ್ಲಿ. ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಜನರು ಬಾನಂಗಳದಲ್ಲಿ ನಡೆದ ಕಂಕಣ ಸೂರ್ಯಗ್ರಹಣದ ಕೌತುಕವನ್ನು ಸೌರ ಕನ್ನಡಕಗಳನ್ನು ಧರಿಸಿ ಕಣ್ತುಂಬಿಕೊಂಡರು.
ವರ್ಷದ ಕಂಕಣ ಸೂರ್ಯಗ್ರಹಣ ಬೆಳಗ್ಗೆ 9.04 ನಿಮಿಷಕ್ಕೆ ಗೋಚರವಾಗಿದ್ದು, ಗರಿಷ್ಠ ಪ್ರಮಾಣದಲ್ಲಿ 10.47ರ ಸುಮಾರಿಗೆ ಗೋಚರವಾಗತೊಡಗಿತ್ತು. ಪೂರ್ಣ ಪ್ರಮಾಣದಲ್ಲಿ ಫೆಸಿಪಿಕ್ ಓಸಿಯನ್ಸ್ ನ ಗುವಾಂನಲ್ಲಿ 12.30ಕ್ಕೆ ಕೊನೆಯದಾಗಿ ಸೂರ್ಯಗ್ರಹಣ ಗೋಚರವಾಗಿ ಮುಕ್ತಾಯವಾಗಿತ್ತು.
ಕಂಕಣ ಸೂರ್ಯಗ್ರಹಣ ಪೂರ್ಣ, ಭಾಗಶಃ ಹಾಗೂ ಉಂಗುರಾಕೃತಿ ಸೇರಿದಂತೆ ಮೂರು ವಿಧದಲ್ಲಿ ಗೋಚರವಾಗಿತ್ತು. ಸೂರ್ಯಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಹೋಮ, ಹವನ ನಡೆಯಿತು. ಬಹುತೇಕ ದೇವಾಲಯಗಳು ಸೂರ್ಯಗ್ರಹಣ ಸಮಯದಲ್ಲಿ ಮುಚ್ಚಲಾಗಿದ್ದು, ಸೂರ್ಯಗ್ರಹಣ ಮೋಕ್ಷದ ಬಳಿಕ ಶುದ್ದಿಕಾರ್ಯ ನಡೆಸಿ ಪೂಜೆ, ಪುನಸ್ಕಾರ ಆರಂಭಿಸಿದ್ದವು.
ದಕ್ಷಿಣ ಕನ್ನಡ ಬಹುತೇಕ ಮಸೀದಿಗಳಲ್ಲಿ ನಮಾಜ್ ಮಾಡಲಾಯಿತು. ಮಂಗಳೂರು ಬಂದರಿನ ಜುಮ್ಮಾ ಮಸೀದಿಯಲ್ಲಿ ಖತೀಬ್ ಸ್ವದಕತುಲ್ಲಾಹ್ ಫೈಝಿ ನೇತೃತ್ವದಲ್ಲಿ ನಮಾಜ್ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ