ಕಾಲಗರ್ಭಕ್ಕೆ ಸೇರಿದ ಅಥಣಿ ಫಾಸಿಕಟ್ಟೆ

ರಸ್ತೆ ಅಗಲೀಕರಣದಲ್ಲಿ ಹೇಳ ಹೆಸರಿಲ್ಲಂದಂತಾದ ಸ್ಮಾರಕಮತ್ತೆ ನಿರ್ಮಾಣಕ್ಕೆ ಕೂಗು

Team Udayavani, Dec 26, 2019, 4:52 PM IST

26-December-17

„ಸಂತೋಷ ರಾ. ಬಡಕಂಬಿ
ಅಥಣಿ:
ಸ್ವಾತಂತ್ರ್ಯಕ್ಕೂ ಮುಂಚೆ ಮುಂಬೈ ಪ್ರಾಂತಕ್ಕೆ ಸೇರಿದ ಅಥಣಿಯಲ್ಲಿ ಅನೇಕ ಐತಿಹಾಸಿಕ ಕಟ್ಟಡಗಳಿದ್ದು, ಅವುಗಳೊಂದಿಗೆ ನಗರದ ಜನರ ಗಮನ ಸೆಳೆಯುತ್ತಿದ್ದ ಫಾಸಿಕಟ್ಟೆ ಇತ್ತೀಚೆಗಷ್ಟೇ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ನಾಶವಾಗಿದ್ದು, ಅದನ್ನು ರಕ್ಷಿಸಬೇಕಿತ್ತು ಎನ್ನುವ ಕಳಕಳಿ ಇದೀಗ ಕೇಳಿ ಬರುತ್ತಿದೆ.

ಅಥಣಿ ಇತಿಹಾಸ ತೆರೆದು ನೋಡಿದಾಗ 1830ರಲ್ಲಿ ಅಥಣಿ ನಗರದಲ್ಲಿ ಅಂಚೆ ಕಚೇರಿ, ಪುರಸಭೆ, ತಹಶೀಲ್ದಾರ್‌ ಕಚೇರಿ, ಸಬ್‌ ರಜಿಸ್ಟ್ರಾರ್‌ ಕಚೇರಿ. ಸರಕಾರಿ ಆಸ್ಪತ್ರೆ ಇವೆಲ್ಲ ಇಲಾಖೆಗಳು ಏಕ ಕಾಲಕ್ಕೆ ಆರಂಭವಾಗಿದ್ದವು. 1861ರಲ್ಲಿ ನ್ಯಾಯಾಲಯ ಕೂಡ ಆರಂಭವಾಗಿದೆ. ಈ ತಹಶೀಲ್ದಾರ್‌ ಕಚೇರಿ ಹಾಗೂ ಸರ್ಕಾರಿ ಆಸ್ಪತ್ರೆ ಮಧ್ಯದ ಸ್ಥಳದಲ್ಲಿಯೇ ಫಾಸಿಕಟ್ಟೆ (ಗಲ್ಲು ಶಿಕ್ಷೆ ನೀಡುವ ಸ್ಥಳ)ಇತ್ತು. ಈಗಲೂ ಈ ಸ್ಥಳಕ್ಕೆ ಫಾಸಿಕಟ್ಟೆ ಎಂದೇ ಕರೆಯುವುದು ರೂಢಿಯಲ್ಲಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಸಾಂಗಲಿ ಮತ್ತು ಜತ್ತ ಅಥಣಿ ಸುತ್ತಮುತ್ತ ಇರುವ ಸ್ಥಳಗಳಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆಗೆ ಒಳಗಾದ ಆರೋಪಿಗಳನ್ನು ಅಥಣಿಯ ಈ ಫಾಸಿಕಟ್ಟೆಗೆ ತಂದು ಇದೇ ಕಟ್ಟೆಯ ಮೇಲೆ ಗಲ್ಲಿಗೆ ಏರಿಸಲಾಗುತ್ತಿತ್ತು. ಸ್ವಾತಂತ್ರ್ಯ ನಂತರ ಅಥಣಿ ಫಾಸಿಕಟ್ಟೆಯಲ್ಲಿ ಫಾಸಿ ನೀಡುವುದನ್ನು ನಿಲ್ಲಿಸಿ ಆಯಾ ಸ್ಥಳದಲ್ಲೇ ಗಲ್ಲಿಗೇರಿಸುವ ಕಾರ್ಯ ನಡೆದವು. ಆದರೆ ಇದೀಗ ಸರ್ಕಾರದ ನಿರ್ಲಕ್ಷ್ಯದಿಂದ ಈ ಇತಿಹಾಸ ಪ್ರಸಿದ್ಧ ಫಾಸಿಕಟ್ಟೆಗೆ ರಕ್ಷಣೆ ದೊರೆಯದೇ ನಾಶವಾಗಿ ಹೆಸರಷ್ಟೇ ಉಳಿಯುವಂತಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ ಹೇಗೆ ಹೋರಾಟಕ್ಕೆ ಮೀಸಲಿರುವ ಸ್ಥಳವೋ ಹಾಗೆ ಅಥಣಿಯಲ್ಲಿ ಈ ಸ್ಥಳ ಸ್ಥಳೀಯ ಹೋರಾಟ, ಪ್ರತಿಭಟನೆಗಳಿಗೆ ಕೇಂದ್ರವಾಗಿತ್ತು. ಆದರೆ ಇತ್ತೀಚೆಗೆ 150 ಕೋಟಿ ರೂ. ವೆಚ್ಚದಲ್ಲಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ಅಥಣಿ ಪಟ್ಟಣದಲ್ಲಿ ಅಗಲೀಕರಣ ಮಾಡುವಾಗ ಈ ಐತಿಹಾಸಿಕ ಫಾಸಿಕಟ್ಟೆ ಒಡೆದು ಹೋಗಿದೆ. ಇದರಿಂದ ಅಂದಿನ ಫಾಸಿಕಟ್ಟೆ ಇಂದು ಇತಿಹಾಸ ಪುಟಗಳಲ್ಲಿ ಲೀನವಾಗಿದೆ.

ಮುಂದಿನ ಪೀಳಿಗೆಗೆ ನಾವು ಅಥಣಿಯ ಇತಿಹಾಸ ಹೇಳುವಾಗ ಈ ಸ್ಥಳದಲ್ಲಿ ಫಾಸಿಕಟ್ಟೆ ಇತ್ತು ಎಂದು ಫೋಟೊ ತೋರಿಸಿ ಹೇಳುವ ಪ್ರಸಂಗ ಎದುರಾಗಿದ್ದು ನಮ್ಮ ಪೀಳಿಗೆಯ ದುರಂತ. ಸಾರ್ವಜನಿಕರು ಹಾಗೂ ನಾಯಕರ ನಿರ್ಲಕ್ಷéದಿಂದ ಇಂದು ಇತಿಹಾಸ ಪ್ರಸಿದ್ಧ ಈ ಸ್ಥಳ ಹಾಳಾಗಿ ಒಡೆದು ಹೋಗಿದ್ದು, ಇನ್ನು ಮುಂದಾದರೂ ನಾವು ಎಚ್ಚೆತ್ತುಕೊಂಡು ಉಳಿದ ಕಚೇರಿಗಳನ್ನಾದರೂ ಉಳಿಸಬೇಕಾಗಿದೆ.
ಪ್ರಶಾಂತ ತೋಡಕರ
ಅಥಣಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ

ಇತಿಹಾಸ ಪ್ರಸಿದ್ದ ಫಾಸಿಕಟ್ಟೆ ನಮ್ಮ ನಿರ್ಲಕ್ಷ್ಯದಿಂದ ಆಗಿದೆ. ಸಂಘಟಿತರಾಗಿ ಹೋರಾಡಿ ಆ ಸ್ಥಳದಲ್ಲಿ ಫಾಸಿಕಟ್ಟೆ ಗುರುತಿಗಾಗಿ ಸ್ಥಳವನ್ನು ಕಾಯ್ದಿರಿಸುವಂತೆ ಒತ್ತಾಯಿಸಬೇಕಾಗಿದೆ. ನಮ್ಮ ಅಥಣಿ ಇತಿಹಾಸ ಬಿಂಬಿಸುವ ಈ ಫಾಶಿಕಟ್ಟೆ ನೆನಪು ಮುಂದಿನ ತಲೆಮಾರಿಗೆ ಉಳಿಯಬೇಕಾದರೆ ಇಲ್ಲಿ ಒಂದು ಚಿಕ್ಕ ಕಟ್ಟೆ ನಿರ್ಮಾಣ ಮಾಡಬೇಕು ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಲಾಗುವುದು.
ಅಬ್ದುಲ್‌ ಜಬ್ಬರ ಚಿಂಚಲಿ
ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಪರಿಷತ್‌ ಬೆಳಗಾವಿ ಜಿಲ್ಲಾಧ್ಯಕ್ಷ 

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.