ಕಂಪ್ಯೂಟರ್‌ ಆಪರೇಟರ್‌ಗಳ ಪ್ರತಿಭಟನೆ


Team Udayavani, Dec 27, 2019, 3:12 PM IST

bg-tdy-1

ಬೆಳಗಾವಿ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯತ್‌ ಕಂಪ್ಯೂಟರ್‌ ಆಪರೇಟರುಗಳು ಜಿಲ್ಲಾ ಪಂಚಾಯತ್‌ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೌಕರರು, ಸರ್ಕಾರದ ಹಲವಾರು ಯೋಜನೆಗಳನ್ನು ಗ್ರಾಮ ಪಂಚಾಯತ ಮಟ್ಟದಲ್ಲಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರ್‌ಗಳಿಗೆ ನೇಮಕಾತಿ ಆದೇಶ ನೀಡಿ ಕಾಯಂಗೊಳಿಸಬೇಕು. ನೇಮಕಾತಿಗಾಗಿ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. 2006-07 ರಲ್ಲಿ ಜಾರಿಗೆ ಬಂದಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಪಂಚಾಯತಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಸರ್ಕಾರದ ಅನೇಕ ಯೋಜನೆಗಳನ್ನು ಸಮಪರ್ಕವಾಗಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರುಗಳಿಗೆ ಕನಿಷ್ಠ ವೇತನ ಇಲ್ಲ. 2014ರ ಆದೇಶದನ್ವಯ ಅನುಮೋದನೆ ನೀಡಿ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಸಂಘದ ಜಿಲ್ಲಾ ಗೌರವ ಅಧ್ಯಕ್ಷ ವಿ. ಪಿ. ಕುಲಕರ್ಣಿ ಒತ್ತಾಯಿಸಿದರು.

2014ರ ಆದೇಶದ ಪ್ರಕಾರ ಸತತ 3 ವರ್ಷ ಮೇಲ್ಪಟ್ಟು ಪಂಚಾಯತಗಳಲ್ಲಿ ಕೆಲಸ ನಿರ್ವಹಿಸಿದ ಡಾಟಾ ಎಂಟ್ರಿ ಆಪರೇಟರುಗಳಿಗೆ ಕ್ಲರ್ಕ ಕಮ್‌ ಡಾಟಾ ಎಂಟ್ರಿ ಆಪರೇಟರ ಎಂದು ಪಂಚಾಯತಗಳಲ್ಲಿ ನಿರ್ಣಯ ಸ್ವೀಕರಿಸಿ ಅದರ ಮೂಲಕ ಜಿಲ್ಲಾ ಪಂಚಾಯತ ಅನುಮೋದನೆ ನೀಡಬೇಕು ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಡಿ. ನಾಡಗೌಡ ಒತ್ತಾಯಿಸಿದರು. ಸಿ.ಐ.ಟಿ.ಯು. ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ ಮಾತನಾಡಿ, ರೇಶನ್‌ ಕಾರ್ಡ್‌, ಉದ್ಯೋಗ ಖಾತ್ರಿ, ಬಾಪೂಜಿ ಸೇವಾ ಕೇಂದ್ರ ಮತ್ತು ವಸತಿ ಯೋಜನೆ ಹೀಗೆ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವ ಕಂಪ್ಯೂಟರ್‌ ಆಪರೇಟರುಗಳಿಗೆ ಸರ್ಕಾರದ ಆದೇಶದಂತೆ ಕನಿಷ್ಠ ವೇತನ ಜಾರಿ ಮಾಡಿ ಅವರಿಗೆ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಟಿ.ಎ. ಭಬಗೌಡ, ವೀರಭದ್ರ ಕಂಪ್ಲಿ, ಬಾಗಪ್ಪ ಚೌಗಲಾ, ಪ್ರಕಾಶ ಬಸ್ಸಾಪೂರ, ಸಾದಿಕ ಹುದ್ದಾರ, ಮತ್ತು ವಿಠಲ ಕೊನನಕುಂಟೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.