ಹುತಾತ್ಮ ಯೋಧನ ಕುಟುಂಬಕ್ಕೆ 2 ಲಕ್ಷ ರೂ. ನೆರವು: ಸಿ.ಸಿ.ಪಾಟೀಲ್
Team Udayavani, Dec 27, 2019, 5:04 PM IST
ರೋಣ (ಗದಗ): ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ವೀರಯೋಧ ವೀರೇಶ ಕುರಹಟ್ಟಿ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವೈಯಕ್ತಿಕವಾಗಿ 2 ಲಕ್ಷ ರೂ. ನೆರವು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಭರವಸೆ ನೀಡಿದ್ದಾರೆ.
ತಾಲೂಕಿನ ಕರಮುಡಿ ಗ್ರಾಮದ ಹುತಾತ್ಮ ಯೋಧ ವಿರೇಶ ಕುರಹಟ್ಟಿ (47) ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ, ವೀರೇಶ ಕುರಹಟ್ಟಿ ಅವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ವೀರ ಯೋಧನ ಕುಟುಂಬಕ್ಕೆ ದೇವರು ಅವರ ದುಖಃವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹುತಾತ್ಮ ಯೋಧನ ಕುಟುಂಬಕ್ಕೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಲು ಪ್ರಾಮಾ ಣಿಕ ಪ್ರಯತ್ನ ಮಾಡುತ್ತೇನೆ. ಹುತಾತ್ಮ ಯೋಧನ ಪುತ್ರಿ ಲಕ್ಷ್ಮೀ(ಶ್ರದ್ಧಾ) ವಿದ್ಯಾಭ್ಯಾಸ, ಮದುವೆಗಾಗಿ 105 ಲಕ್ಷ ರೂ. ಹಾಗೂ ಅವರ ಪುತ್ರ ಮನೋಜ್ ಅವರ ಶಿಕ್ಷಣಕ್ಕಾಗಿ 50 ಸಾವಿರ ರೂ. ಹಣವನ್ನು ನಾಳೆಯೊಳಗೆ ತಲುಪಿಸುತ್ತೇನೆ ಎಂದು ಆಶ್ವಾಸ ನೀಡಿದರು.
ಹುತಾತ್ಮ ಯೋಧನ ಪಾರ್ಥೀವ ಶರೀರವನ್ನು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಪುಣೆಗೆ ಬಂದು, ನಂತರ ಅಲ್ಲಿಂದ ಬೆಳಗಾವಿಗೆ ರಸ್ತೆ ಮಾರ್ಗವಾಗಿ ಬರಲಿದೆ. ಬಳಿಕ ನರಗುಂದ ರಸ್ತೆ ಮಾರ್ಗವಾಗಿ ಕರುಮುಡಿ ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ತಲುಪಲಿದೆ. ಮಾರ್ಗ ಮಧ್ಯೆ ಅನೇಕ ಕಡೆಗಳಲ್ಲಿ ದೇಶಭಕ್ತರು, ದೇಶಾಭಿಮಾನಿಗಳು ಗೌರವ ಸಮರ್ಪಿಸಲಿದ್ದಾರೆ. ಬಳಿಕ ಗ್ರಾಮಸ್ಥರ ಇಚ್ಛೆಯಂತೆ ಗ್ರಾಮದ ಶಾಲಾ ಆವತಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ