ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲ ಶೃಂಗೇರಿ ಸ್ವಾಮಿಗಳಿಗೆ ಪೂರ್ಣಕುಂಭ ಸ್ವಾಗತ
ತೆಕ್ಕಟ್ಟೆ : ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲಕ್ಕೆ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರನ್ನು ಶುಕ್ರವಾರದಂದು ದೇವಳದ ರಾಜಗೋಪುರದಿಂದ ಪೂರ್ಣಕುಂಭ ಸ್ವಾಗತದೊಂದಿಗೆ ದೇವಳಕ್ಕೆ ಭರಮಾಡಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಶ್ರೀಗಳವರ ಪಾದಪೂಜೆ ಮತ್ತು ದೇವಳದ ವತಿಯಿಂದ ದೇವಳದ ಆಡಳಿತ ಧರ್ಮದರ್ಶಿ ದೇವರಾಯ ಎಂ.ಶೇರೆಗಾರ್ ಹಾಗೂ ಅನಿತಾ ಶೇರೆಗಾರ್ ದಂಪತಿಗಳು ಅವರನ್ನು ಗೌರವಿಸಿದರು. ಶಾರದಾ ಪೀಠದ ಅರ್ಚಕ ಲೋಕೇಶ್ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ದೇವಳದ ರಾಜಶೇಖರ್ ಹೆಗ್ಡೆ ನಿರೂಪಿಸಿ, ವಂದಿಸಿದರು.
ಮಹಾ ಚಂಡಿಕಾಯಾಗ : ದೇಗುಲದಲ್ಲಿ ಮಹಾ ಚಂಡಿಕಾಯಾಗ, ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ರಂಗಪೂಜೆ ಮತ್ತು ಸ್ವರ್ಣ ಪಲ್ಲಕ್ಕಿ ಉತ್ಸವ ಹಾಗೂ ಅಷ್ಟಾವಧಾನ ಸೇವೆ ನೆರವೇರಿತು.
ಚಿತ್ರಗಳು : ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ