ಹೆಸ್ಕಾಂ ಕಚೇರಿ ಗೇಟಿಗೆ ಬೀಗ ಹಾಕಿ ಪ್ರತಿಭಟಿಸಿದ ರೈತ


Team Udayavani, Dec 28, 2019, 1:15 PM IST

hv-tdy-2

ಹಾವೇರಿ: ಹೊಲದಲ್ಲಿದ್ದ ವಿದ್ಯುತ್‌ ಕಂಬಗಳನ್ನು ತೆಗೆದಿರುವುದು ಹಾಗೂ ಜಮೀನಿನಲ್ಲಿರುವ ಪಂಪ್‌ ಸೆಟ್‌ಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ರೈತನೋರ್ವ ಹೆಸ್ಕಾಂ ಕಚೇರಿ ಗೇಟಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಕುರುಬಗೊಂಡ ಗ್ರಾಮದ ಭರಮಗೌಡ ರಾಯಣ್ಣನವರ ಪ್ರತಿಭಟನೆ ಮಾಡಿದ ರೈತ. ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರು ಬಂದು ಹೆಸ್ಕಾಂ ಕಚೇರಿ ಆವರಣ ಗೇಟಿಗೆ ಬಾಗಿಲು ಹಾಕಿ ಪ್ರತಿಭಟನೆ ಆರಂಭಿಸಿದರು. ಇದರಿಂದ ಆಗ ತಾನೇ ಕಚೇರಿಗೆ ಆಗಮಿಸುತ್ತಿದ್ದ ಕಚೇರಿಯ ಸಿಬ್ಬಂದಿ, ಅಧಿಕಾರಿಗಳು ಗೇಟಿನ ಹೊರಗೇ ನಿಲ್ಲಬೇಕಾಯಿತು. ಅಧಿಕಾರಿ, ಸಿಬ್ಬಂದಿಗಳು ಎಷ್ಟೇ ಮನವೊಲಿಸಿದರೂ ರೈತ ಗೇಟು ತೆಗೆಯಲು ಒಪ್ಪಲಿಲ್ಲ. ಆಗ ಕಚೇರಿ ಸಿಬ್ಬಂದಿಗಳೇ ಬಲವಂತದಿಂದ ಆತನನ್ನು ಪಕ್ಕಕ್ಕಿ ತಳ್ಳಿ ಗೇಟ್‌ ತೆಗೆದು ಒಳ ನಡೆದರು.

ರೈತನೊಂದಿಗೆ ಅಧಿಕಾರಿ, ಸಿಬ್ಬಂದಿಗಳು ವಾಗ್ವಾದ ನಡೆಸುತ್ತಿದ್ದಂತೆ ನೂರಾರು ಜನರು ಜಮಾಯಿಸಿ ಕೆಲಹೊತ್ತು ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತನನ್ನು ಸಮಾಧಾನಗೊಳಿಸಿ, ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳ ಎದುರು ಕರೆದೊಯ್ದರು.

ದೂಡಿ ಒಳಗೆ ಬಂದರು: ಕಚೇರಿಯ ಹಿರಿಯ ಅಧಿಕಾರಿಗಳ ಎದುರು ಬಂದ ರೈತ ಭರಮಗೌಡ, ಕಳೆದ ಒಂದು ವರ್ಷದಿಂದ ಅಲೆದಾಡಿದರೂ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿಲ್ಲ. ಮೊನ್ನೆ ನಾನು ಅವರಿಗೆ ಎಚ್ಚರಿಕೆ ಕೊಟ್ಟಂತೆ ಇಂದು ಗೇಟಿಗೆ ಕೀಲಿ ಹಾಕಿ ಪ್ರತಿಭಟನೆ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ನನ್ನನ್ನು ಬಲವಂತದಿಂದ ದೂಡಿ ಕೀಲಿ ತೆಗೆದರು. ಇವರ ವರ್ತನೆಯಿಂದ ಪೆಟ್ರೋಲ್‌ ಸುರಿದುಕೊಂಡು ಕಚೇರಿ ಎದುರೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನಿಸುವಷ್ಟು ಕೋಪ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಅಧಿಕಾರಿ : ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಹಾಯಕ ಇಂಜಿನಿಯರ್‌ ಸಿ.ವಿ. ಹೊಸಮನಿ, ಪ್ರತಿಭಟನಾನಿರತ ರೈತನ ಹೊಲದಲ್ಲಿದ್ದ ವಿದ್ಯುತ್‌ ಕಂಬಗಳನ್ನು ಇಲಾಖೆಯಿಂದ ತೆಗೆದಿಲ್ಲ. ಪಕ್ಕದ ಹೊಲದವರು ತೆಗೆದಿರಬಹುದು. ಕಂಬಗಳು ಅಲ್ಲಿಯೇ ಇವೆ. ಇನ್ನು ರೈತನ ಹೊಲ ವ್ಯಾಪ್ತಿಯಲ್ಲಿ 25 ಎಚ್‌ಪಿ ವಿದ್ಯುತ್‌ ಪರಿವರ್ತಕವಿದ್ದು, ಅದನ್ನು ಇವತ್ತೇ 63 ಎಚ್‌ಪಿ ಸಾಮರ್ಥ್ಯದ ವಿದ್ಯುತ್‌ ಪರಿವರ್ತಕ ಅಳವಡಿಸಿ ರೈತನ ಹೊಲಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಲಾಗುವುದು. ಬಳಿಕ ಅಕ್ರಮ-ಸಕ್ರಮ ಯೋಜನೆಯಡಿ ಅದನ್ನು ಸಕ್ರಮಗೊಳಿಸಲಾಗುವುದು. ಸದ್ಯಕ್ಕೆ ವಿದ್ಯುತ್‌ ಸಂಪರ್ಕ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.