ನಿವೃತ್ತಿ ವೇತನ ನೀಡಲು ಒತ್ತಾಯ
Team Udayavani, Dec 28, 2019, 2:55 PM IST
ಶಿರಸಿ: ಅಕ್ಷರ ದಾಸೋಹ ನೌಕರರಿಗೆ ಶಾಸನಬದ್ಧ ಕನಿಷ್ಠ ಕೂಲಿ, ನಿವೃತ್ತಿ ವೇತನದ ಜೊತೆಗೆ ಡಿ ಗ್ರುಫ್ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್ ಹಾಗೂ ಅಕ್ಷರ ದಾಸೋಹ ನೌಕರರ ಸಂಘದ ಪ್ರಮುಖರು ಇಲ್ಲಿಯ ಸಹಾಯಕ ಆಯುಕ್ತರ ಕಚೇರಿ ಎದುರು ಜಮಾಯಿಸಿ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.
ಉಪವಿಭಾಗಾಧಿಕಾರಿ ಡಾ| ಈಶ್ವರ ಉಳ್ಳಾಗಡ್ಡಿಗೆ ಸಲ್ಲಿಸಿದ ಮನವಿಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಅಡುಗೆಯವರಾಗಿ ದುಡಿಯುತ್ತಿದ್ದಾರೆ. ಇವರಿಗೆ ಯಾವುದೇ ಜೀವನ ಭದ್ರತೆ, ನೌಕರ ನಿವೃತ್ತಿ ಇಲ್ಲ. ಮಾಸಿಕವಾಗಿ ಕೇವಲ 2,600ರೂ. ಪಡೆಯುತ್ತಿರುವ ಅಡುಗೆಯವರಿಗೆ ಕನಿಷ್ಠ 10ಸಾವಿರ ರೂ. ವೇತನ ನೀಡಬೇಕು ಎಂದು ಆಗ್ರಹಿಸಿದರು.
ಶಾಲೆಗಳಲ್ಲಿ ವಿದ್ಯಾರ್ಥಿ ಸಂಖ್ಯೆಯನ್ನಾಧರಿಸಿ ಅನೇಕ ವರ್ಷಗಳಿಂದ ಅಡುಗೆಯವರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಸರ್ಕಾರ ಕೈ ಬಿಡಬಾರದು. ಬಿಸಿಯೂಟ ತಯಾರಕರು ಯಾವುದೇ ರೀತಿ ಮರಣ ಹೊಂದಿದಲ್ಲಿ ಅವರಿಗೆ 2ಲಕ್ಷ ರೂ. ಪರಿಹಾರ ಹಾಗೂ ಅಂತ್ಯಕ್ರಿಯೆಗೆ 30ಸಾವಿರ ರೂ. ಅನುದಾನ ಮೀಸಲಿಡಬೇಕು. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಬಿಸಿಯೂಟ ತಯಾರಕರಿಗೆ 5ಲಕ್ಷ ರೂ. ಯೋಜನೆಯನ್ನು ಶಿಕ್ಷಣ ಇಲಾಖೆ ಅನುಷ್ಠಾನಗೊಳಸಿಬೇಕು. ಬಿಸಿಯೂಟ ತಯಾರಕರ ಕೈಪಿಡಿಯಲ್ಲಿರುವ ವಾರ್ಷಿಕವಾಗಿ ಹತ್ತು ದಿನದ ರಜೆ 20ದಿನಕ್ಕೆ ಏರಿಸಬೇಕು. ಸಿ.ಜಿ ಹಣದ ಹೆಚ್ಚಳದೊಂದಿಗೆ ದಿನಕ್ಕೊಂದು ತರಕಾರಿ ಅಡುಗೆ ಮಾಡುವುದನ್ನು ವಾಪಸ್ ಪಡೆಯಬೇಕು. ತಮಿಳುನಾಡು ಮಾದರಿಯಲ್ಲಿ ಬಿಸಿಯೂಟ ತಯಾರಕರಿಗೆ ಸರ್ಕಾರಿ ಸೌಲತ್ತುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಲಾಗಿದೆ.
ಪ್ರಮುಖರಾದ ಸರಸ್ವತಿ ಭಟ್ಟ, ಮೀನಾಕ್ಷಿ ಹಲಗೆರಿ, ಭುವನೇಶ್ವರಿ ನಾಯ್ಕ, ಸುಜಾತ ಭಟ್ಟ, ಕುಸುಮಾಕ್ಷಿ, ಪಾರ್ವತಿ ಭಟ್ಟ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!