ಪಟ್ಟನಾಯಕನಹಳ್ಳಿ ಬಸ್ ನಿಲ್ದಾಣದ ರಸ್ತೆ ಅವ್ಯವಸ್ಥೆ
Team Udayavani, Dec 28, 2019, 4:17 PM IST
ಶಿರಾ: ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಬಸ್ ನಿಲ್ದಾಣದ ರಸ್ತೆ ಅಭಿವೃದ್ಧಿ ಕಾಮಗಾರಿ ಅನುಮೋದನೆಯಾಗಿ ಒಂದು ವರ್ಷ ಕಳೆದರೂ ನನೆಗುದಿಗೆ ಬಿದ್ದಿದೆ.
ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನ ಮಠಕ್ಕೆ ಬರುವ ಭಕ್ತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ 11 ಕೋಟಿ ಮತ್ತು 8 ಕೋಟಿ ಪ್ರತ್ಯೇಕ ಕಾಮಗಾರಿಗೆ ಮಂಜೂರಾತಿ ನೀಡಿತ್ತು. ಆದರೆ ವರ್ಷ ಕಳೆದರೂ ರಸ್ತೆ ಕಾಮಗಾರಿ ನಡೆದಿಲ್ಲ. ಬಾಕ್ಸ್ ಚರಂಡಿ ನಿರ್ಮಿಸಿ ಹಳೆಯ ಡಾಂಬರ್ ರಸ್ತೆ ಹಾಳು ಮಾಡಲಾಗಿದೆ. ಇದರಿಂದ ಸ್ಥಳೀಯರು ದೂಳಿನ ಸಮಸ್ಯೆ ಅನುಭವಿಸಬೇಕಾಗಿದೆ.
ಕಾಣೆಯಾದ ಗುತ್ತಿಗೆದಾರ: 2018ರಲ್ಲಿ ಪಟ್ಟನಾಯಕನಹಳ್ಳಿ ಬಸ್ ನಿಲ್ದಾಣದ 150 ಮೀಟರ್ ರಸ್ತೆ ಕಾಮಗಾರಿಗೆ 1 ಕೋಟಿ ರೂ. ಮಂಜೂರಾಗಿತ್ತು. ಅದರಂತೆ ಕಾಮಗಾರಿ ಆರಂಭಿಸಿದ ಗುತ್ತಿಗೆದಾರ ಹಳೆ ರಸ್ತೆ ತೆಗೆದು ರಸ್ತೆಯ ಅಕ್ಕ ಪಕ್ಕ ಬಾಕ್ಸ್ ಚರಂಡಿ ಕಾಮಗಾರಿ ಮುಗಿಸಿ ಹಿಂದೆ ಇದ್ದ ಡಾಂಬರ್ ರಸ್ತೆ ಕಿತ್ತು ಹಾಕಿಸಿದ್ದಾನೆ. ಶೀಘ್ರ ಡಾಂಬರಿಕರಣ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿ ಹೋದ ಗುತ್ತಿಗೆದಾರ ವರ್ಷ ಕಳೆದರೂ ಇತ್ತ ಸುಳಿದಿಲ್ಲ. ಇದೀದ ರಸ್ತೆ ಸಂಪೂರ್ಣ ಮಣ್ಣಿನ ರಸ್ತೆಯಾಗಿದ್ದು, ವಾಹನಗಳು ಸಂಚರಿಸಿದರೆ ದೂಳಿನ ಅಭಿಷೇಕವಾಗುತ್ತದೆ. ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು, ಅಸ್ಪತ್ರೆಗೆ ಬರುವಂತ ವೃದ್ಧರು, ಪ್ರಯಾಣಿಕರು ನರಕಯಾತನೆ ಅನುಭವಿಸುವಂತಾಗಿದೆ.
2019ರ ನವೆಂಬರ್ನಲ್ಲಿ ಪಟ್ಟನಾಯಕನಹಳ್ಳಿಯಿಂದ ಉದ್ದರಾಮನಹಳ್ಳಿ ಕ್ರಾಸ್ವರೆಗೆ 8 ಕೋಟಿ ರೂ. ವೆಚ್ಚದ ಕಾಮಗಾರಿಯೂ ಕಳಪೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ. ಇಷ್ಟಾದರೂ ನಿರ್ಲಕ್ಷ್ಯ ವಹಿಸಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಡೆ ಸಾರ್ವಜನಿಕರ ಅನುಮಾನಗಳಿಗೆ ಕಾರಣವಾಗಿದೆ. ತಕ್ಷಣ ಬಸ್ ನಿಲ್ದಾಣ ರಸ್ತೆಗೆ ಡಾಂಬರೀಕರಣ ಮಾಡುವ ಮೂಲಕ ದೂಳಿನಿಂದ ರಕ್ಷಿಸುವಂತೆ ಸಾರ್ವಜನಿಕರು ಅಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ