ಡಾ|ಎಂ.ಎನ್. ರಾಜೇಂದ್ರ ಕುಮಾರ್ಗೆ ಅಂ.ರಾ.ಅವಾರ್ಡ್
Team Udayavani, Dec 29, 2019, 3:03 AM IST
ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಸ್ಟಡೀಸ್ ಹೊಸದಿಲ್ಲಿ ವತಿಯಿಂದ ನಡೆದ ಇಂಡೋ-ಶ್ರೀಲಂಕಾ ಎಕನಾಮಿಕ್ ಕೋ-ಆಪರೇಶನ್ ಕಾನ್ಫರೆನ್ಸ್ನಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ|ಎಂ ಎನ್.ರಾಜೇಂದ್ರ ಕುಮಾರ್ ಅವರಿಗೆ ಇಂಟರ್ನ್ಯಾಶನಲ್ ಲೀಡರ್ಶಿಪ್ ಇನ್ನೋವೇಶನ್ ಎಕ್ಸಲೆನ್ಸ್ ಅವಾರ್ಡ್-2019 ಪ್ರಶಸ್ತಿಯನ್ನು ಶ್ರೀಲಂಕಾದಲ್ಲಿ ಪ್ರದಾನ ಮಾಡಲಾಯಿತು.
ಶ್ರೀಲಂಕಾ ವಿದೇಶಾಂಗ ಸಚಿವ ದಿನೇಶ್ ಗುಣವರ್ಧನ ಮತ್ತು ಫ್ರಾನ್ಸ್ ಮಿಂಡಾನಾವೊದ ಅಂತಾರಾಷ್ಟ್ರೀಯ ರಾಜಕುಮಾರಿ ಇಸಾಬೆಲ್ಲೆ ಲಾರ್ಗ್ ಅವರಿಂದ ಡಾ|ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು. ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೈಯಕ್ತಿಕ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಡಾ|ಎಂ.ಎನ್. ಅವರು ಸತತ 25 ವರ್ಷಗಳ ಸುದೀರ್ಘ ಅವಧಿಯಲ್ಲಿ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿಕ ಬದಲಾವಣೆಯನ್ನು ತರುವುದರ ಜೊತೆಗೆ ಎಸ್ಸಿಡಿಸಿಸಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ.
ಶ್ರೀಲಂಕಾದ ಹೈ ಕಮಿಷನರ್ ತರುಣ್ ಜಿತ್ ಸಿಂಗ್ ಸಂಧು, ತಮಿಳುನಾಡು ಸರಕಾರದ ಸಹಕಾರ ಸಚಿವ ಸೆಲ್ಲೂರು ಕೆ.ರಾಜು, ಶ್ರೀಲಂಕಾದ ಸಾಂಸ್ಕೃತಿಕ ಮತ್ತು ಹೌಸಿಂಗ್ ಇಲಾಖೆಯ ನಿರ್ದೇಶಕಿ ಅನುಶಾ ಗೋಕುಲಾ ಫೆರ್ನಾಂಡೋ, ಯುಎಸ್ಎ ಬ್ರ್ಯಾಂಡ್ ಅಂಬಾಸಡರ್ ಡಾ| ಹರಿಕೃಷ್ಣ ಮಾರನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ