ಆರು ಬೋಗಿಯ ಮತ್ತೆರಡು ಮೆಟ್ರೋ ರೈಲು


Team Udayavani, Dec 29, 2019, 3:05 AM IST

Bangalore-Metro

ಬೆಂಗಳೂರು: “ನಮ್ಮ ಮೆಟ್ರೋ’ ಹಸಿರು ಮಾರ್ಗದ ಮತ್ತೆರಡು ರೈಲುಗಳಿಗೆ ತಲಾ ಮೂರು ಹೆಚ್ಚುವರಿ ಬೋಗಿಗಳು ಸೇರ್ಪಡೆಗೊಳ್ಳಲಿವೆ. ಸೋಮವಾರ (ಡಿ.30) ನಾಗಸಂದ್ರ- ಯಲಚೇನಹಳ್ಳಿ ನಡುವಿನ ಮಾರ್ಗದ ಮೂರು ಬೋಗಿಗಳ ಎರಡು ರೈಲುಗಳನ್ನು ಆರು ಬೋಗಿಗಳನ್ನಾಗಿ ಪರಿವರ್ತಿಸಲಾಗುವುದು.

ಈ ಮೂಲಕ ಉದ್ದೇಶಿತ ಮಾರ್ಗದಲ್ಲಿ ಒಟ್ಟಾರೆ 14 ಆರು ಬೋಗಿಗಳ ಮೆಟ್ರೋ ರೈಲುಗಳು ಕಾರ್ಯಾಚರಣೆ ಮಾಡಲಿವೆ. ಭಾನುವಾರ ಹೊರತುಪಡಿಸಿ ಆರು ಬೋಗಿಗಳ ಈ ರೈಲುಗಳು ಒಟ್ಟು 106 ಸುತ್ತಿನ ಪ್ರಯಾಣ ನಡೆಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ ಪ್ರಕಟಣೆ ತಿಳಿಸಿದೆ. ಗರಿಷ್ಠ ಸಮಯದಲ್ಲಿ ಅಂದರೆ ಪೀಕ್‌ ಅವರ್‌ನಲ್ಲಿ ಶೇ.77ರಷ್ಟು ಆರು ಬೋಗಿ ರೈಲುಗಳು ಸಂಚರಿಸಲಿವೆ. ಈ ಮಾರ್ಗದಲ್ಲಿ ಒಟ್ಟಾರೆ 22 ರೈಲುಗಳು ನಿತ್ಯ ಕಾರ್ಯಾಚರಣೆ ನಡೆಸುತ್ತವೆ.

ಮೆಟ್ರೋದಲ್ಲಿ ಎಲ್ಲಿಗೆ ಪ್ರಯಾಣಿಸಿದರೂ 50 ರೂ.!
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ. 31ರ ತಡರಾತ್ರಿ ನಗರದ ಮೂರು ಮೆಟ್ರೋ ನಿಲ್ದಾಣಗಳಿಂದ ಯಾವುದೇ ನಿಲ್ದಾಣಕ್ಕೆ ಪ್ರಯಾಣ ದರ 50 ರೂ.! 31ರಂದು ತಡರಾತ್ರಿ 2 ಗಂಟೆಗೆ ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಏಕ ಕಾಲ ದಲ್ಲಿ ನಾಲ್ಕೂ ದಿಕ್ಕುಗಳಿಗೆ ರೈಲುಗಳು ಹೊರ ಡಲಿವೆ. ಈ ವಿಸ್ತರಿಸಿದ ಅಂದರೆ 11.30ರ ನಂತರ ಮಹಾತ್ಮ ಗಾಂಧಿ ರಸ್ತೆ (ಎಂ.ಜಿ. ರಸ್ತೆ), ಟ್ರಿನಿಟಿ ಮತ್ತು ಕಬ್ಬನ್‌ ಉದ್ಯಾನ ನಿಲ್ದಾಣಗಳಿಂದ ಇತರೆ ಯಾವುದೇ ನಿಲ್ದಾಣಗಳಿಗೆ ಪ್ರಯಾಣಿಸುವವರಿಗೆ 50 ರೂ. ಟಿಕೆಟ್‌ ದರ ನಿಗದಿಪಡಿಸಲಾಗಿದೆ.

50 ರೂ. ಮೊತ್ತದ ಕಾಗದದ ಟಿಕೆಟ್‌ಗಳನ್ನು ವಿತರಿಸಲಾಗುವುದು. ಟೋಕನ್‌ಗಳನ್ನು ವಿತರಿಸುವುದಿಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ವಿಸ್ತರಿಸಿದ ಅವಧಿಯಲ್ಲಿ 31ರ ರಾತ್ರಿ 8ರಿಂದಲೇ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಮುಂಚಿತವಾಗಿ ಟಿಕೆಟ್‌ ಖರೀದಿಸಬಹುದು. ಸ್ಮಾರ್ಟ್‌ ಕಾರ್ಡ್‌ ಹೊಂದಿರುವವರಿಗೆ ಎಂದಿನಂತೆ ರಿಯಾಯ್ತಿ ದರ ಅನ್ವಯ ಆಗಲಿದೆ. ಟ್ರಿನಿಟಿ, ಎಂ.ಜಿ. ರಸ್ತೆ ಮತ್ತು ಕಬ್ಬನ್‌ ಉದ್ಯಾನ ಹೊರತುಪಡಿಸಿದರೆ, ಉಳಿದ ನಿಲ್ದಾಣಗಳ ನಡುವೆ ಪ್ರಯಾಣ ದರ ಎಂದಿನಂತೆ ಇರಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಪ್ರಕಟಣೆ ತಿಳಿಸಿದೆ.

ಕೊನೆಯ ಮೆಟ್ರೋ ರೈಲು ನಿರ್ಗಮನ ಸಮಯ
ಟರ್ಮಿನಲ್‌ ನಿರ್ಗಮನ ಸಮಯ (ತಡರಾತ್ರಿ)
ಬೈಯಪ್ಪನಹಳ್ಳಿ 1.35
ಮೈಸೂರು ರಸ್ತೆ 1.40
ನಾಗಸಂದ್ರ 1.30
ಯಲಚೇನಹಳ್ಳಿ 1.35

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.