ಸಲಗಕ್ಕೆ ಟಗರು ಸಾಥ್‌

ಜ.5ಕ್ಕೆ ಆಡಿಯೋ ರಿಲೀಸ್‌ ಮಾಡ್ತಾರೆ ಶಿವಣ್ಣ

Team Udayavani, Dec 30, 2019, 7:03 AM IST

salaga

“ದುನಿಯಾ’ ವಿಜಯ್‌ ಅಭಿನಯದ “ಸಲಗ’ ಸಿನಿಮಾ ಆರಂಭದಿಂದಲೂ ಜೋರಾಗಿಯೇ ಸದ್ದು ಮಾಡುತ್ತ ಬಂದಿದೆ. ಇತ್ತೀಚೆಗಷ್ಟೇ ಮೇಕಿಂಗ್‌ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಈಗ ಮತ್ತೂಂದು ಹೊಸ ಸುದ್ದಿಯೆಂದರೆ, “ಸಲಗ’ಕ್ಕೆ “ಟಗರು’ ಸಾಥ್‌ ಕೊಡುತ್ತಿದೆ. ಹೌದು, “ದುನಿಯಾ’ ವಿಜಯ್‌ ಅಭಿನಯದ ಜೊತೆಯಲ್ಲಿ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಚಿತ್ರದ ಮೇಲೆ ಒಂದಷ್ಟು ನಿರೀಕ್ಷೆಯೂ ಇದೆ.

ಸದ್ಯಕ್ಕೆ ಅಂತಿಮ ಹಂತದಲ್ಲಿರುವ “ಸಲಗ’ ಇದೀಗ ಆಡಿಯೋ ಬಿಡುಗಡೆ ಮಾಡಲು ಸಾಕಷ್ಟು ತಯಾರಿ ನಡೆಸುತ್ತಿದೆ. ಹೊಸ ವರ್ಷದಲ್ಲಿ “ಸಲಗ’ ಚಿತ್ರತಂಡ ತನ್ನ ಹಾಡುಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಜನವರಿ 5 ರಂದು ಅದ್ಧೂರಿಯಾಗಿಯೇ ಚಿತ್ರದ ಹಾಡುಗಳನ್ನು ಹೊರತರುವ ನಿರ್ಧಾರ ಮಾಡಿರುವ “ದುನಿಯಾ’ ವಿಜಯ್‌ ಮತ್ತು ತಂಡ, ಚಿತ್ರದ ಆಡಿಯೋ ಬಿಡುಗಡೆಗೆ ಶಿವರಾಜಕುಮಾರ್‌ ಅವರನ್ನು ಆಹ್ವಾನಿಸಿದ್ದು,

ಅವರೇ ಅಂದು ವಿಶೇಷ ಅತಿಥಿಯಾಗಿ “ಸಲಗ’ ಚಿತ್ರದ ಆಡಿಯೋ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ. ಶಿವರಾಜಕುಮಾರ್‌ ಅವರು “ಸಲಗ’ ಚಿತ್ರದ ಆಡಿಯೋ ಬಿಡುಗಡೆ ಮಾಡುವ ಮೂಲಕ ಪುನಃ “ಟಗರು’ ತಂಡದ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, “ಸಲಗ’ ಚಿತ್ರವನ್ನು ಕೆ.ಪಿ.ಶ್ರೀಕಾಂತ್‌ ನಿರ್ಮಿಸುತ್ತಿದ್ದಾರೆ. “ಟಗರು’ ಚಿತ್ರಕ್ಕೂ ಕೆ.ಪಿ.ಶ್ರೀಕಾಂತ್‌ ನಿರ್ಮಾಪಕರಾಗಿದ್ದರು.

ಹಾಗಾಗಿ, ಶಿವರಾಜಕುಮಾರ್‌ ಅವರು ಈ “ಸಲಗ’ ಚಿತ್ರತಂಡದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಲಿದ್ದಾರೆ. ಅಂದಹಾಗೆ, “ಸಲಗ’ ಚಿತ್ರದ ಹಾಡುಗಳನ್ನು ಎ2 ಮ್ಯೂಸಿಕ್‌ ಹೊರತರುತ್ತಿದೆ. ಎ2 ಮ್ಯೂಸಿಕ್‌ ಯೂಟ್ಯೂಬ್‌ ಚಾನೆಲ್‌ನಲ್ಲೂ ಸಹ ಹಾಡುಗಳನ್ನು ವೀಕ್ಷಿಸಬಹುದು. ಚಿತ್ರದ ಹಾಡುಗಳಿಗೆ ಚರಣ್‌ ರಾಜ್‌ ಸಂಗೀತ ನೀಡಿದ್ದಾರೆ. ಶಿವಸೇನ ಛಾಯಾಗ್ರಹಣವಿದೆ. ಚಿತ್ರದಲ್ಲಿ “ಡಾಲಿ’ ಧನಂಜಯ್‌, “ಕಾಕ್ರೋಚ್‌’ ಸುಧಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದು,

ಇದೊಂದು ಪಕ್ಕಾ ಮಾಸ್‌ ಎಂಟರ್‌ಟೈನ್‌ಮೆಂಟ್‌ ಸಿನಿಮಾ ಆಗಿ ಹೊರಬರುತ್ತಿದೆ. “ದುನಿಯಾ’ ವಿಜಯ್‌ ಮೊದಲ ನಿರ್ದೇಶನದ ಸಿನಿಮಾ ಆಗಿರುವುದರಿಂದ ಸಹಜವಾಗಿಯೇ ಇದು ಕುತೂಹಲ ಕೆರಳಿಸಿದೆ. ಇನ್ನು, ವಿಜಯ್‌ ಅಭಿನಯದ ಚಿತ್ರ ಬಿಡುಗಡೆಯಾಗದೆ ಎರಡು ವರ್ಷಗಳಾಗಿವೆ. ಹಾಗಾಗಿ, “ಸಲಗ’ ಚಿತ್ರದ ಬಿಡುಗಡೆಯನ್ನು ಎಲ್ಲರೂ ಎದುರು ನೋಡುತ್ತಿದ್ದಾರೆ. ಹೊಸ ವರ್ಷಕ್ಕೆ ಹೊಸ ರೂಪದಲ್ಲಿ “ಸಲಗ’ ತನ್ನ ದರ್ಶನ ಕೊಡಲು ಸಜ್ಜಾಗುತ್ತಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.