ಕುವೆಂಪು ಮನುಕುಲದ ಮಾರ್ಗದರ್ಶಕ
ವಿಶ್ವ ಮಾನವ ದಿನಾಚರಣೆ ಸಾಮಾಜಿಕ ಚಿಂತನೆ-ಜೀವನದ ಮೌಲ್ಯ ಪ್ರತಿಯೊಬ್ಬರ ಬದುಕಿಗೆ ಕೊಡುಗೆ
Team Udayavani, Dec 30, 2019, 12:23 PM IST
ಶಹಾಪುರ: ಕನ್ನಡಾಂಬೆ ವರ ಪುತ್ರರಾಗಿ ತಮ್ಮ ಸರಳ ಸಾಹಿತ್ಯದೊಂದಿಗೆ ಸಾಮಾಜಿಕ ಚಿಂತನೆ ಹಾಗೂ ಜೀವನದ ಮೌಲ್ಯ ಪ್ರತಿಯೊಬ್ಬರ ಬದುಕಿಗೆ ಕೊಡುಗೆಯಾಗಿ ನೀಡಿದ ರಾಷ್ಟ್ರಕವಿ ಕುವೆಂಪು ಮನುಕುಲದ ಮಾರ್ಗದರ್ಶಕರಾಗಿದ್ದರು ಎಂದು ಸಾಹಿತಿ ಶಿವಣ್ಣ ಇಜೇರಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಕಸಾಪ ಭವನದಲ್ಲಿ ತಾಲೂಕು ಆಡಳಿತದ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀವನಾದರ್ಶಗಳ ಪ್ರತಿಬಿಂಬಗಳಂತೆ ಹಲವಾರು ಗ್ರಂಥ ಭಂಡಾರಗಳನ್ನು ನಾಡಿಗೆ ಬಳುವಳಿಯಾಗಿ ನೀಡಿದ ಅವರು ಅಜರಾಮರಾಗಿದ್ದಾರೆ. ನಾಡು, ದೇಶ ಪರಂಪರೆ ಅಲ್ಲದೆ ಜೀವನ, ಸಂಸಾರ ಬದುಕಿನ ಕುರಿತು ಸಾಕಷ್ಟು ಮಜಲುಗಳ ಬಗ್ಗೆ ಸಮರ್ಪಕವಾಗಿ ಕಾವ್ಯ ಮತ್ತು ಕೃತಿಗಳ ಮೂಲಕ ತಿಳಿಸಿಕೊಟ್ಟ ಕುವೆಂಪು ಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.
ಸರ್ಕಾರ ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುತ್ತಿರುವದು ಅರ್ಥಬದ್ಧವಾಗಿದೆ ಎಂದು ಹೇಳಿದರು. ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ ಮಾತನಾಡಿ, ಕನ್ನಡ ಶ್ರೀಮಂತಗೊಳಿಸಿದ ಮಹಾನ್ ಚೇತನ ಕುವೆಂಪು. ಅವರ ಆದರ್ಶಗಳು ಮುಂದಿನ ಪೀಳಿಗೆಗೆ ಸೂಕ್ತ ಮಾರ್ಗವಾಗಬೇಕು. ವಿಶ್ವ ಮಾನವ ಸ್ವರೂಪಿಯಾದ ಅವರು, ಅವರ ನಡೆ ನುಡಿ ಬರಹಗಳಿಂದ ಸಾಕಷ್ಟು ಕಲಿಯಬೇಕಾಗಿದೆ ಎಂದು ಹೇಳಿದರು.
ತಹಶೀಲ್ದಾರ್ ಜಗನಾಥರಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಅಧ್ಯಕ್ಷ ಸಿದ್ದಲಿಂಗಣ್ಣ ಆನೇಗುಂದಿ, ಹಿರಿಯ ಸಾಹಿತಿ ದೊಡ್ಡಬಸ್ಸಪ್ಪ ಬಳ್ಳೂರಿಗಿ, ತಾಪಂ ಅಧ್ಯಕ್ಷ ನಾಗಣ್ಣ ಪೂಜಾರಿ, ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ, ಡಾ| ಅಬ್ದುಲ್ ಕರಿಂ, ಡಾ| ಮೋನಪ್ಪ ಶಿರವಾಳ, ಗುರುಬಸವಯ್ಯ ಗದ್ದುಗೆ, ಸಿಡಿಪಿಒ ಟಿ.ಪಿ. ದೊಡ್ಮನಿ, ಗುಂಡಪ್ಪ ತುಂಬಗಿ ಇದ್ದರು.
ಇದೇ ಸಂದರ್ಭದಲ್ಲಿ ಉಡುಪಿ ಪೇಜಾವರ ಶ್ರೀಗಳಿಗೆ ಎರಡು ನಿಮಿಷ ಮೌನಾಚರಣೆ ನಡೆಸುವ ಮೂಲಕ ಸಂತಾಪ ಸೂಚಿಸಿದರು.
ಕವಿತಾ ಪ್ರಾರ್ಥಿಸಿದರು. ದೇವಿಂದ್ರಪ್ಪ ಕನ್ಯಾಕೋಳೂರ ಸ್ವಾಗತಿಸಿದರು. ಬಸವರಾಜ ಸಿನ್ನೂರ ನಿರೂಪಿಸಿದರು. ಸಂತೋಷ ಉದ್ಧಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್ : ಗಿನ್ನೆಸ್ ಅಧಿಕಾರಿಗಳ ಭೇಟಿ
Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ