ನಿಸ್ವಾರ್ಥ ಸೇವೆ ಇದ್ದಲ್ಲಿ ದೇವರ ಸಾಕ್ಷಾತ್ಕಾರ


Team Udayavani, Dec 30, 2019, 5:20 PM IST

30-December-26

ಬಸವಕಲ್ಯಾಣ: ಆತ್ಮ, ದೇಹ ಹಾಗೂ ಜ್ಞಾನ ಶಕ್ತಿಯನ್ನು ನಂಬಿಕೊಂಡು, ಪ್ರಾಮಾಣಿಕ ಸ್ವಾವಲಂಬಿಯಾಗಿ ದುಡಿಯುವುದರಲ್ಲಿ ದೇವರು ಕಾಣುತ್ತಾನೆ. ಅದುವೇ ನೀಜವಾದ ದೈವಭಕ್ತಿಯಾಗಿದ್ದು ಅದನ್ನು ನಂಬಿದವರು ಶ್ರೀ ಕನಕದಾಸರು ಎಂದು ತಿಂಥಣಿಯ ಕನಕ ಗುರುಪೀಠದ ಶ್ರೀ ಸಿದ್ಧಾರಾಮನಂದಪುರಿ
ಸ್ವಾಮೀಜಿ ಹೇಳಿದರು.

ಮುಚಳಂಬ ಗ್ರಾಮದಲ್ಲಿ ರವಿವಾರ ನಡೆದ ಭಕ್ತ ಕನಕದಾಸರ ಮೂರ್ತಿ ಅನಾವರಣ ಹಾಗೂ 532ನೇ ಕನಕ ಜಯಂತ್ಯುತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಕೇವಲ ಸನ್ಯಾಸಿ ಹಾಗೂ ಮೇಲ್ವರ್ಗದವರಿಗೆ ಮಾತ್ರ ದೇವರು ಒಲಿಯುತ್ತಾನೆ ಎಂಬುದನ್ನು ಸುಳ್ಳಾಗಿಸಿದ ಭಕ್ತ ಕನಕದಾಸರು, ನೈಜ ಭಕ್ತಿವೊಂದಿದ್ದರೆ ಸಾಕು ದೇವರು ಎಲ್ಲರಿಗೂ ಸಮವಾಗಿ ಒಲಿಯುತ್ತಾನೆ ಎಂದು ದಾಸರು ತಮ್ಮ ಸಾಹಿತ್ಯದಲ್ಲಿ ಹೇಳಿದ್ದಾರೆ ಎಂದು ತಿಳಿಸಿದರು.

ಕನಕದಾಸರ ಸಾಹಿತ್ಯ ಶ್ರೀಸಾಮಾನ್ಯರಿಗೂ ತಿಳಿಯುವಂತಹದು. ಗಾಳಿ-ಬೆಳಕಿನಂತೆ ಮಹಾತ್ಮರು ಶ್ರೇಷ್ಠರು. ಅವರ ತಾತ್ವಿಕ ನೆಲೆಯನ್ನು ಅನುಭವಿಸಬೇಕು. ನಿಸರ್ಗ ಸೃಷ್ಟಿ ಅದ್ಭುತ. ಅದು
ಜಾತಿಭೇದ ಮಾಡದೆ ನಿಸ್ವಾರ್ಥ ಸೇವೆ ನೀಡುತ್ತದೆ. ಮನೆಯಲ್ಲಿ ಹಿರಿಯರು ಮಕ್ಕಳಿಗೆ ಶ್ರಮ ಹಾಗೂ ದಾನದ ಗುಣಗಳನ್ನು ಕಲಿಸಬೇಕು ಎಂದು ಸಲಹೆ ನೀಡಿದರು.

ಮುಚಳಂಬ ಮಠದ ಶ್ರೀ ಪ್ರಣವಾನಂದ ಮಹಾಸ್ವಾಮಿಗಳು ಮಾತನಾಡಿ, ಮಹಾನ್‌ ವ್ಯಕ್ತಿಗಳ- ಸತು³ರುಷರ ಮೂರ್ತಿ ಪ್ರತಿಷ್ಠಾಪಿಸುವುದು, ಜಯಂತಿ ಆಚರಿಸುವುದಷ್ಟೆ ಅಲ್ಲ. ಅವರ ತತ್ವಾದರ್ಶಗಳನ್ನು ಪಾಲಿಸಬೇಕು. ಆಗ ಮಾತ್ರ ಅವರ ಜಯಂತಿ ಆಚರಣೆ ಸಾರ್ಥಕ ವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ. ನಾರಾಯಣರಾವ್‌ ಮಾತನಾಡಿ, ಕವಿ ಹಾಗೂ ಕೀರ್ತನಕಾರರು ಆಗಿರುವ ಕನಕದಾಸರು 15-16ನೇ ಶತಮಾನದ ದಾಸ ಪರಂಪರೆಯಲ್ಲೇ ಅತ್ಯಂತ ಶ್ರೇಷ್ಠರು. ಈ ಕನ್ನಡ ನಾಡು ಎಂಥ ಪುಣ್ಯಭೂಮಿ ಎಂದರೆ ಇಲ್ಲಿ ಅನೇಕ ಶರಣರು, ಸಂತರು, ವಚನಕಾರರು ಆಗಿ ಹೋಗಿದ್ದಾರೆ ಎಂದರು.

ನಂತರ ಪಂಡಿತರಾವ್‌ ಚಿದ್ರಿ ಮಾತನಾಡಿದರು. ಗೌರ ಗ್ರಾಮದ ಕನಕ ಗುರುಪೀಠದ ಬೀರಪ್ಪ ಮುತ್ಯಾ ಸಾನ್ನಿಧ್ಯ ವಹಿಸಿದ್ದರು. ಬೀದರ್‌ ಜಿಪಂ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ, ಬಸವಕಲ್ಯಾಣ ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ್‌, ಜಿಪಂ ಸದಸ್ಯೆ ನಿರ್ಮಲಾ ಮಾನೆಗೋಪಾಳೆ, ಬಿಜೆಪಿ ಯುವ ಮುಖಂಡ ಶರಣು ಸಲಗರ, ಕೆಪಿಸಿಸಿ ಸದಸ್ಯ ಶಿವರಾಜ ನರಶೆಟ್ಟಿ, ತಾಪಂ ಸದಸ್ಯೆ ಶಾಂತಾಬಾಯಿ ಪಾಂಚಾಳ, ಕೆ.ಡಿ. ಗಣೇಶ, ಸಂತೋಷ್‌ ಗುತ್ತೆದಾರ್‌, ರಮೇಶ್‌ ರಂಗೆ ಇದ್ದರು. ಶಿವಶರಣಪ್ಪಾ ಎನ್‌. ಛತ್ರೆ ಸ್ವಾಗತಿಸಿದರು. ಮಲ್ಲಿಕಾರ್ಜುನ್‌ ಎನ್‌. ಛತ್ರೆ ನಿರೂಪಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.