ಹುಲಿಗಳ ಆವಾಸ ಸ್ಥಾನ ಹಳೇ ಮೈಸೂರು ಭಾಗ


Team Udayavani, Dec 31, 2019, 3:00 AM IST

huligala

ಮೈಸೂರು: ವ್ಯಾಘ್ರಗಳ ಆವಾಸಕ್ಕೆ ಹಳೇ ಮೈಸೂರು ಭಾಗವು ಅಗತ್ಯ ನೆಲೆಯನ್ನು ಕಲ್ಪಿಸಿಕೊಟ್ಟಿದ್ದು, ಮೈಸೂರು-ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಹುಲಿಗಳು ಹೆಚ್ಚು ಕಂಡು ಬರುತ್ತಿವೆ. ಅದರಲ್ಲೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚು ಹುಲಿಗಳಿರುವುದು ಗಮನಾರ್ಹ ಸಂಗತಿ.

ಒಂದೇ ಜಿಲ್ಲೆಯಲ್ಲೂ ಎರಡು ರಾಷ್ಟ್ರೀಯ ಉದ್ಯಾನವಿದ್ದು, ಬಂಡೀಪುರ, ಬಿಆರ್‌ಟಿ ಮತ್ತು ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಸೂಕ್ತ ಸಂರಕ್ಷಣೆ ಫ‌ಲವಾಗಿ ಬಲಿ ಪ್ರಾಣಿಗಳು (ಹುಲಿಯ ಆಹಾರ)ಹೆಚ್ಚಿದಂತೆ ಹೆಚ್ಚಿನ ಸಂಖ್ಯೆಯ ಹುಲಿಗಳು ನೆಲೆ ಕಂಡುಕೊಂಡಿವೆ.

ಈ ಬಾರಿ ಗಣತಿಯಲ್ಲಿ ಬಂಡೀಪುರದಲ್ಲಿ ಅಂದಾಜು 170ಕ್ಕಿಂತ ಹೆಚ್ಚು, ಬಿಆರ್‌ಟಿಯಲ್ಲಿ 60ರಷ್ಟು ಮತ್ತು ಮಹದೇಶ್ವರಬೆಟ್ಟದ ವನ್ಯಜೀವಿಧಾಮದಲ್ಲಿ 20 ರಷ್ಟು ಹುಲಿಗಳಿವೆ ಎಂದು ಅಂದಾಜಿಸಲಾಗಿದೆ. ಮೈಸೂರು-ಕೊಡಗು ಜಿಲ್ಲೆಯ ವ್ಯಾಪ್ತಿಗೆ ಬರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವದಲ್ಲಿ 110ಕ್ಕೂ ಹೆಚ್ಚು ಹುಲಿಗಳಿವೆ ಎಂದು ಹೇಳಲಾಗಿದ್ದು, ಕಳೆದ ಬಾರಿಗಿಂತ ಈ ವರ್ಷ ಏರಿಕೆಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

2ನೇ ಸ್ಥಾನ: ಕಳೆದ ಮೂರು ಬಾರಿಯ ಹುಲಿ ಗಣತಿಯಲ್ಲಿ ಅಗ್ರ ಪಂಕ್ತಿ ಕಾಯ್ದುಕೊಂಡಿದ್ದ ಕರ್ನಾಟಕ ಈ ಬಾರಿ 2ನೇ ಸ್ಥಾನಕ್ಕೆ ಬಂದರೂ ರಾಜ್ಯದಲ್ಲಿ ಹುಲಿಗಳ ಸಂತಾನ ವೃದ್ಧಿ ಸಕರಾತ್ಮಕವಾಗಿದೆ. 1973ರಲ್ಲಿ ಹುಲಿ ಯೋಜನೆ ಕೈಗೆತ್ತಿಕೊಂಡ ನಂತರ ರಾಜ್ಯದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡಿದೆ. ಕರ್ನಾಟಕದಲ್ಲಿ ಇನ್ನು ಹೆಚ್ಚಿನ ಹುಲಿಗಳು ವಾಸಿಸುವಷ್ಟು ಅರಣ್ಯ ಪ್ರದೇಶವಿದ್ದು, ಅವುಗಳನ್ನು ಸಂರಕ್ಷಣೆ ಮಾಡಬೇಕಾದ ತುರ್ತು ಅಗತ್ಯವಿದೆ.

ಕಾರಿಡಾರ್‌: ರಾಜ್ಯದ ಅರಣ್ಯ ಪ್ರದೇಶದಲ್ಲಿ ಇಲಾಖೆ ಕೈಗೊಂಡ ಬಿಗಿ ಕ್ರಮಗಳಿಂದಾಗಿ ಕಳೆದ ಅವಧಿಯಲ್ಲಿ 406 ಇದ್ದ ಹುಲಿಗಳ ಸಂಖ್ಯೆ ಈ ವರ್ಷ 524ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇನ್ನೂ ಸಾವಿರ ಹುಲಿಗಳು ವಾಸಿಸುವಷ್ಟು ಅರಣ್ಯವಿದ್ದು, ನೀಲಗಿರಿ ಜೈವಿಕ ಮಂಡಲದಿಂದ ಉತ್ತರ ಕರ್ನಾಟಕ, ಉತ್ತರ ಭಾರತದ ರಾಷ್ಟ್ರೀಯ ಉದ್ಯಾನ ಮತ್ತು ಅಭಯಾರಣ್ಯಗಳಿಗೆ ಹುಲಿಗಳು ಸಂಚಾರ ಮಾಡಲು ಸಂಪರ್ಕ ವ್ಯವಸ್ಥೆ ಕಲ್ಪಿಸಿಕೊಡಬೇಕಿದೆ.

ಜೊತೆಗೆ ಮತ್ತಷ್ಟು ಹುಲಿಗಳ ಹೆಚ್ಚಳಕ್ಕೆ ಬಯೋಲಾಜಿಕಲ್‌ ಕಾರಿಡಾರ್‌ ನಿರ್ಮಾಣ ಮಾಡುವ ಸವಾಲು ಸರ್ಕಾರದ ಮೇಲಿದೆ. ರಾಜ್ಯದಲ್ಲಿ ಅರಣ್ಯ ಇಲಾಖೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ರಕ್ಷಿತಾರಣ್ಯದ ಮೇಲೆ ಮಾನವ ಹಸ್ತಕ್ಷೇಪ, ಅರಣ್ಯ ಒತ್ತುವರಿ, ಅಭಿವೃದ್ಧಿ ಚಟುವಟಿಕೆಗಳು, ಪ್ರವಾಸಿಗರ ಭೇಟಿ, ಕಳ್ಳಬೇಟೆ ಕ್ಷೀಣಿಸಿ, ವನ್ಯ ಜೀವಿಗಳು ನಿರಾತಂಕವಾಗಿ ಬದುಕಲು ಸಾಧ್ಯವಾಗಿದೆ.

ಹುಲಿ ಸರಹದ್ದು: ಜೀವ ವೈವಿಧ್ಯ ತಾಣ, ಹುಲಿ ಸಂರಕ್ಷಿತ ಪ್ರದೇಶ, ವನ್ಯಜೀವಿ ಧಾಮಗಳಲ್ಲಿ ಇಂದಿಗೂ ಆದಿವಾಸಿ ಸಮುದಾಯ ವಾಸಿಸುತ್ತಿರುವುದು ಹುಲಿಗಳ ಸುಗಮ ಜೀವನಕ್ಕೆ ಸಮಸ್ಯೆಯಾಗಿದೆ. ತನ್ನ ಸರಹದ್ದಿನಲ್ಲಿ ಹುಲಿ ಸ್ವತ್ಛಂದವಾಗಿ ಬದುಕಲು ಮಾನವನ ಹಸ್ತಕ್ಷೇಪ ಅಡ್ಡಿಯಾಗಿದೆ.

ಜೊತೆಗೆ ಒತ್ತಡ ಉಂಟಾಗುತ್ತಿರುವುದು ಹುಲಿಗಳ ವಂಶಾಭಿವೃದ್ದಿಗೆ ಮಾರಕವಾಗಿದೆ. ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಕಾಡಿನಲ್ಲಿರುವವರಿಗೆ ಅಗತ್ಯ ಸೌಲಭ್ಯ ನೀಡಿ ಕಾಡಿನಿಂದ ಹೊರಗಿಡುವ ಪ್ರಯತ್ನ ಮಾಡುವ ಮೂಲಕ ವ್ಯಾಘ್ರ ಸಂತತಿ ಹೆಚ್ಚಳಕೆ ಕಾರಣವಾಗಬೇಕಿದೆ.

ಟಾಪ್ ನ್ಯೂಸ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Shimoga: ಮಟನ್ ಹೆಚ್ಚಿಗೆ ಹಾಕೆಂದು ಹೇಳಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಮಚ್ಚೇಟು!

Kotee movie trailer

Kotee movie; ಇನ್ನೆರಡು ದಿನದಲ್ಲಿ ಧನಂಜಯ್‌ ನಟನೆಯ ‘ಕೋಟಿ’ ಟ್ರೇಲರ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್

Americaದಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ; ಸಾರ್ವಜನಿಕರ ನೆರವು ಕೋರಿದ ಪೊಲೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gundlupete

Gundlupete: ಅನೈತಿಕ ಸಂಬಂಧದ ವಿಚಾರ: ಸ್ವಂತ ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

2-hunsur

Hunsur: ಬಿರುಗಾಳಿ ಸಹಿತ ಭಾರೀ ಮಳೆಗೆ ಕೆರೆಯಂತಾದ ಹೊಲಗಳು

ಐತಿಹಾಸಿಕ ಸ್ಮಾರಕಗಳ ತ್ರೀಡಿ ಮ್ಯಾಪಿಂಗ್‌, ಲೇಸರ್‌ ಸ್ಕ್ಯಾನಿಂಗ್‌

ಐತಿಹಾಸಿಕ ಸ್ಮಾರಕಗಳ ತ್ರೀಡಿ ಮ್ಯಾಪಿಂಗ್‌, ಲೇಸರ್‌ ಸ್ಕ್ಯಾನಿಂಗ್‌

2-hunsur

Hunsur: ಕಸಾಯಿಖಾನೆಗೆ ಸಾಗಿಸುತ್ತಿದ್ದ 40ಕ್ಕೂ ಅಧಿಕ ಹಸುಗಳ ರಕ್ಷಣೆ

Sculptor Arun yogiraj: ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿದ ನಂದಿ ವಿಗ್ರಹ ಅಮರನಾಥಕ್ಕೆ

Sculptor Arun yogiraj: ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿದ ನಂದಿ ವಿಗ್ರಹ ಅಮರನಾಥಕ್ಕೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

chef chidambara trailer

Chef Chidambara trailer: ಭರವಸೆ ಮೂಡಿಸಿದ ಅನಿರುದ್ಧ್ ಸಿನಿಮಾ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

12

Sagara: ಮತದಾನಕ್ಕೆ ಬಂದಿದ್ದವರ ಮೊಬೈಲ್ ಕಳ್ಳತನ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

Mandya: ಬಿಜೆಪಿ‌ ಮುಖಂಡನ ಮಗ ನೌಕಪಡೆಯ ಲೆಫ್ಟಿನೆಂಟ್ ಆಗಿ ಆಯ್ಕೆ

ಈಶಾನ್ಯ ಪದವೀಧರರ ಚುನಾವಣೆ: ಹರಪನಹಳ್ಳಿಯಲ್ಲಿ ಮ.1 ಗಂಟೆಯವರೆಗೆ ಶೇ.33.8 ರಷ್ಟು ಮತದಾನ

ಈಶಾನ್ಯ ಪದವೀಧರರ ಚುನಾವಣೆ: ಹರಪನಹಳ್ಳಿಯಲ್ಲಿ ಮ.1 ಗಂಟೆಯವರೆಗೆ ಶೇ.33.8 ರಷ್ಟು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.