ಶಿಕ್ಷಕರು ಅಧ್ಯಯನಶೀಲರಾಗಲಿ


Team Udayavani, Dec 31, 2019, 3:00 AM IST

shikashakaru

ಮಧುಗಿರಿ: ರಾಷ್ಟ್ರದ ಸದೃಢವಾಗಲು ಪ್ರಾಥಮಿಕ ಶಿಕ್ಷಣ ಮೂಲ ಕಾರಣ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್‌.ವಿ.ವೆಂಕಟೇಶಯ್ಯ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ನೌಕರರ ಸಂಘದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ, ಮತ್ತು ಬಡ್ತಿ ಪಡೆದ ಮುಖ್ಯಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಶಿಕ್ಷಕರಿಗಾಗಿ ನಡೆದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಕ್ಯಾಲೆಂಡರ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಮುಖ್ಯಶಿಕ್ಷಕರ ಮೇಲೆ ದೇಶದ ಬುನಾದಿ ಅಡಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪಡೆದ ಶಿಕ್ಷಣವೇ ಅಭಿವೃದ್ಧಿಗೆ ಪೂರಕ. ಆದ್ದರಿಂದ ಮುಖ್ಯಶಿಕ್ಷಕರ ಜವಾಬ್ದಾರಿ ಹೆಚ್ಚಾಗಿದ್ದು, ತಾವೂ ಅಧ್ಯಯನಶೀಲರಾಗಿ ಮಕ್ಕಳನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬೇಕಿದೆ. ಇದರಂತೆ ರಾಜ್ಯ ಸರ್ಕಾರ ಇತರೆ ರಾಜ್ಯದಲ್ಲಿರುವಂತಹ ವೇತನ ಶ್ರೇಣಿ ನಮ್ಮ ಶಿಕ್ಷಕರಿಗೂ ಅನ್ವಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ರಾಮಣ್ಣ ಮಾತನಾಡಿ, ಈರುಳ್ಳಿ ಕೆ.ಜಿ 150ಕ್ಕೆ ಏರಿಕೆಯಾಗಿದ್ದು, ಹಳೆ ದರವನ್ನೇ ನೀಡಲಾಗುತ್ತಿದೆ. ಇನ್ನೂ ಅನುದಾನ ಕಳೆದ 5 ತಿಂಗಳಿಂದಲೂ ನೀಡಿಲ್ಲ. ಹೀಗೆ ಮುಂದುವರೆದರೆ ಎಲ್ಲ ಜವಾಬ್ದಾರಿ ನಿರ್ವಹಿಸುವ ಮುಖ್ಯಶಿಕ್ಷಕರಿಗೆ ತೊಂದರೆಯಾಗಲಿದೆ. ಶಾಲೆ ಸಮಸ್ಯೆಳಿಗೆ ಮುಖ್ಯಶಿಕ್ಷಕರ ದೂರುವ ಚಿಂತನೆ ಬದಲಾಗಬೇಕು. ಅವರಿಗೂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅಧಿಕಾರಿಗಳು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿರಿಯ ಶಿಕ್ಷಕ ವೆಣಕಟರಮಣಪ್ಪ, ಡಿ ಗ್ರೂಪ್‌ ನೌಕರರು ಇಲ್ಲದ ಕಾರಣ ಮುಖ್ಯಶಿಕ್ಷಕರ ಪಾಡು ಹೇಳತೀರದಾಗಿದೆ. ಶೈಕ್ಷಣಿಕ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ. ಶಾಲೆ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ಸ್ಥಳೀಯ ಗ್ರಾಪಂ ಗಮನ ಹರಿಸುತ್ತಿಲ್ಲ. ಇದು ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸರ್ಕಾರದ ಕಾರ್ಯಕ್ರಮಗಳಿಂದ ಶಿಕ್ಷಕರು ಶಾಲೆಗೆ ಗೈರಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಅವಶ್ಯಕವಾದಲ್ಲಿ ಕಾರ್ಯಾಗಾರ ಮಾಡಬೇಕು. ಶಿಕ್ಷಕರು ಅಧ್ಯಯನಶೀಲರಾಗುವ ಜೊತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡುವ ಶಿಕ್ಷಣ ನೀಡಬೇಕು ಎಂದರು.

ಡಯಟ್‌ ಉಪ ಪ್ರಾಂಶುಪಾಲ ಕೃಷ್ಣಪ್ಪ ಪಾಠದ ಜೊತೆಗೆ ಮಕ್ಕಳಿಗೆ ಜೀವನ ಕೌಶಲ್ಯವನ್ನು ಕಲಿಸುವ ಹಾಗೂ ಶಾಲಾ ದಾಖಲಾತಿ ನಿರ್ವಹಿಸುವ ಕುರಿತು ಉಪನ್ಯಾಸ ನೀಡಿದರು. ತಹಶೀಲ್ದಾರ್‌ ನಂದೀಶ್‌, ಬಿಇಒ ರಂಗಪ್ಪ, ಡಿವೈಪಿಸಿ ರಾಜಕುಮಾರ್‌, ನೌಕರರ ಸಂಘದ ತಾಲೂಕು ಗೌರವಾಧ್ಯಕ್ಷ ಜಯರಾಂ, ಖಜಾಂಚಿ ಚಿಕ್ಕರಂಗಯ್ಯ, ನಿರ್ದೇಶಕ ಶಶಿಕುಮಾರ್‌, ಇಸಿಒ ಪ್ರಾಣೇಶ್‌, ಚೆನ್ನಬಸಪ್ಪ, ಶಿಕ್ಷಕ ಮುಖಂಡರಾದ ನರಸೇಗೌಡ, ನರಸಿಂಹಮೂರ್ತಿ, ತಾಲೂಕಿನ ಮುಖ್ಯಶಿಕ್ಷಕರು ಇದ್ದರು.

ಸಮ್ಮಿಶ್ರ ಸರ್ಕಾರದಲ್ಲಿ ಸಿಆರ್‌ಪಿ, ಬಿಆರ್‌ಪಿಗಳಿಗೆ ಕಡ್ಡಾಯ ವರ್ಗಾವಣೆ ಮತ್ತು ಇತರೆ ವಿಷಯದ ಶಿಕ್ಷಕರಿಗೂ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. ಆದರೆ ಅದನ್ನು ಮುಂದುವರೆಸಲು ಈಗಿನ ಸರ್ಕಾರ ಕ್ರಮವಹಿಸಬೇಕಿದೆ. ಮುಖ್ಯಶಿಕ್ಷಕರ ಜವಾಬ್ದಾರಿ ಹೆಚ್ಚಾಗಿದ್ದು, ಸಹಶಿಕ್ಷಕರಿಗೆ ಮಾದರಿಯಾಗಿರಬೇಕು.
-ಜಗದೀಶ್‌, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.