ಪೊಲೀಸ್ ಜೀಪ್ ಎಗರಿಸಿದ ಭೂಪ!
Team Udayavani, Dec 31, 2019, 3:05 AM IST
ಚಿಕ್ಕಮಗಳೂರು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪೊಲೀಸ್ ಜೀಪನ್ನೇ ಅಪಹರಿಸಿ ಪರಾರಿಯಾದ ಘಟನೆ ನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಪೊಲೀಸ್ ಜೀಪ್ (ಸಂಖ್ಯೆ ಕೆ.ಎ.18 ಜಿ.728) ನಗರದ ಹನುಮಂತಪ್ಪ ವೃತ್ತದ ಪೆಟ್ರೋಲ್ ಬಂಕ್ಗೆ ಡೀಸೆಲ್ ತುಂಬಿಸಿಕೊಳ್ಳಲು ಬಂದಾಗ ಈ ಘಟನೆ ನಡೆದಿದೆ.
ಪೊಲೀಸ್ ಜೀಪಿನ ಚಾಲಕ ಇಂಧನ ತುಂಬಿಸಿಕೊಂಡು ಕೀಲಿಯನ್ನು ಜೀಪಿನಲ್ಲಿಯೇ ಬಿಟ್ಟು ಹಣ ನೀಡಲು ಬಂಕ್ನ ಕಚೇರಿಗೆ ಹೋದಾಗ, ಅಲ್ಲೇ ಇದ್ದ ವ್ಯಕ್ತಿಯೋರ್ವ ಜೀಪನ್ನು ಚಾಲನೆ ಮಾಡಿಕೊಂಡು ಕಡೂರು-ಮಂಗಳೂರು ರಸ್ತೆಯಲ್ಲಿ ವೇಗವಾಗಿ ತೆರಳಿ ಲಕ್ಯಾವರೆಗೂ ಹೋಗಿದ್ದ.
ತಕ್ಷಣ ಎಚ್ಚೆತ್ತ ಚಾಲಕ ಈ ಮಾಹಿತಿಯನ್ನು ಇಲಾಖೆಗೆ ತಿಳಿಸಿ, ಕಳುವಾದ ಜೀಪು ಹಿಂಬಾಲಿಸಲು ಮುಂದಾದಾಗ, ಜೀಪನ್ನು ರಸ್ತೆಯಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದಾಗ, ಪ್ರಕರಣ ನಡೆದಿರುವುದು ನಿಜ. ನಿರ್ಲಕ್ಷé ತೋರಿದ ಜೀಪ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
MUST WATCH
ಹೊಸ ಸೇರ್ಪಡೆ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ