ಪ್ರತಿಭಟನೆಗೆ ಕ್ಯಾರೇ ಎನ್ನದ ಜಿಲ್ಲಾಡಳಿತ


Team Udayavani, Dec 31, 2019, 10:42 AM IST

huballi-tdy-01

ಧಾರವಾಡ: ಜಿಪಂ ವ್ಯಾಪ್ತಿಯ ನೆರೆ ಪರಿಹಾರ ಕಾಮಗಾರಿಗಳಲ್ಲಿ ಜಿಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಜಿಲ್ಲಾಡಳಿತ ಹಾಗೂ ಜಿಪಂ ಅಧಿಕಾರಿಗಳ ಕ್ರಮ ಖಂಡಿಸಿ ಜಿಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಕೈಗೊಂಡಿರುವ ಅಹೋರಾತ್ರಿ ಧರಣಿ ಮುಂದುವರಿದಿದೆ.

ಡಿ. 23ರಿಂದ ಜಿಪಂ ಪ್ರವೇಶ ದ್ವಾರ ಬಳಿ ಅಹೋರಾತ್ರಿ ಧರಣಿ ಕೈಗೊಂಡಿದ್ದ ಸದಸ್ಯರು, ಸೋಮವಾರ ಜಿಪಂ ಆವರಣ ಸ್ವಚ್ಛಗೊಳಿಸುವುದು ಹಾಗೂ ಕ್ರೀಡೆ ಆಡುವ ಮೂಲಕ ಗಮನ ಸೆಳೆದರು. ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿದಂತೆ ಸದಸ್ಯರೆಲ್ಲರೂ ಬೆಳಗ್ಗೆ 9ರಿಂದ 11ಗಂಟೆವರೆಗೆ ಜಿಪಂ ಆವರಣ ಸ್ವತ್ಛಗೊಳಿಸಿ ಕೆಲ ಹೊತ್ತು ಕ್ರೀಡೆಗಳನ್ನು ಆಡಿ ನಂತರ ಅಲ್ಲಿಯೇ ಉಪಹಾರ ಸಿದ್ಧಪಡಿಸಿ ಸೇವಿಸುವ ಮೂಲಕ ಡಿಸಿ ಕ್ರಮ ಖಂಡಿಸಿದರು.

ಸೋಮವಾರ ಜಿಪಂ ಆವರಣ, ಮಂಗಳವಾರ ಜಿಲ್ಲಾಧಿಕಾರಿ ಆವರಣ, ವರ್ಷದ ಮೊದಲ ದಿನ ಜ. 1ರಂದು ಡಿಡಿಪಿಐ ಕಚೇರಿ, ಆರೋಗ್ಯ ಇಲಾಖೆ ಹೀಗೆ ಸರ್ಕಾರದ ಎಲ್ಲ ಕಚೇರಿಗಳ ಆವರಣ ಹಾಗೂ ಅಲ್ಲಿನ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಕಾರ್ಯ ಮಾಡಲಿದ್ದೇವೆ. ಜೊತೆಗೆ ಜಿಪಂ ಸದಸ್ಯರು ಕೆಲವು ಕ್ರೀಡೆಗಳಲ್ಲೂ ತೊಡಗಿಸಿಕೊಳ್ಳಲಿದ್ದೇವೆ. ಕಳೆದ 10 ದಿನಗಳಿಂದಲೂ ಪ್ರತಿಭಟನೆ ಕುಳಿತರೂ ಉಸ್ತುವಾರಿ ಸಚಿವರು ಮಾತ್ರ ನಮ್ಮ ಬಳಿ ಬಂದಿಲ್ಲ. ತಮಗೆ ಏನೂ ಸಂಬಂಧವೇ ಇಲ್ಲ ಎಂದುಕೊಂಡಿರುವ ಶೆಟ್ಟರ್‌ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಪಂ ಸದಸ್ಯರು ಬೇಸರ ವ್ಯಕ್ತಪಡಿಸಿದರು.

ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಮಾತನಾಡಿ, ಡಿಸಿ ಕಚೇರಿ, ಜಿಪಂ ಆವರಣದಲ್ಲಿ ಸ್ವತ್ಛತೆಯೇ ಇಲ್ಲವಾಗಿದೆ. ನಿರ್ವ ಹಣೆಗೆ ಸಾಕಷ್ಟು ಅನುದಾನ ಬಳಸಿಕೊಳ್ಳುತ್ತಿದ್ದರೂ ಸ್ವತ್ಛತೆ ಮಾತ್ರ ಕಾಣುತ್ತಿಲ್ಲ. ಬಂದ ಜನರಿಗೆ ಇಲ್ಲಿನ ಯಾವ ಕಚೇರಿಗಳಲ್ಲೂ ಶೌಚಾಲಯಗಳು ಸರಿಯಿಲ್ಲ. ನಮ್ಮ ಪ್ರತಿಭಟನೆ ಅಂಗವಾಗಿ ಸ್ವತ್ಛತಾ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಪ್ರತಿಭಟನೆಯೊಂದಿಗೆ ವ್ಯವಸ್ಥೆ ಸಹ ಸ್ವತ್ಛಗೊಳಿಸುವ ಕಾರ್ಯ ನಡೆಯಲಿದೆ ಎಂದರು.

ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ನೆರೆ ಪರಿಹಾರವಾಗಿ ಜಿಲ್ಲೆಗೆ 50 ಕೋಟಿ ಅನುದಾನ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಕಳೆದುಕೊಂಡವರಿಗೆ, ರಸ್ತೆ-ಸೇತುವೆ ನಿರ್ಮಾಣ ಕಾರ್ಯ ನಡೆಯಬೇಕಿದೆ. ಜಿಲ್ಲಾಧಿಕಾರಿಗಳು ತಮ್ಮ ಗಮನಕ್ಕೆ ತರದೇ ಕಾಮಗಾರಿಗಳನ್ನು ಆಯಾ ಶಾಸಕರ ಮೂಲಕ ನೀಡಿದ್ದಾರೆ ಎಂದರು. ಉಮೇಶ ಹೆಬಸೂರ, ಕರೆಪ್ಪ ಮಾದರಿ, ಅಣ್ಮಪ್ಪ ದೇಸಾಯಿ, ರೇಣುಕಾ ಇಬ್ರಾಹಿಂಪುರ, ಚೆನ್ನಮ್ಮ ಪಾಟೀಲ, ಮಂಜಪ್ಪ ಹರಿಜನ, ಚನ್ನಬಸಪ್ಪ ಮಟ್ಟಿ, ರತ್ನಾ ಪಾಟೀಲ, ವಿದ್ಯಾ ಭಾವನವರ ಇದ್ದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.