ಮಿನಿ ಸೌಧ’ಕ್ಕೆ ಪ್ರವಾಸಿ ಮಂದಿರ ಸ್ಥಳವೇ ಸೂಕ್ತ


Team Udayavani, Dec 31, 2019, 12:00 PM IST

bidar-tdy-2

ಕಮಲನಗರ: ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ಮಿಸು ಸ್ಥಳ ಕುರಿತು ಡಾ| ಚನ್ನಬಸವ ಪಟ್ಟದ್ದೇವರ ಸಾರ್ವಜನಿಕ ಗ್ರಂಥಾಲಯದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಮಂತ ಬಿರಾದಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಮಾಜ ಸೇವಕ ಗುರುನಾಥ ವಡ್ಡೆ ಮಾತನಾಡಿ, ಈ ಮೊದಲು ಮೂರ್‍ನಾಲ್ಕು ಸಲ ಪ್ರವಾಸಿ ಮಂದಿರದಲ್ಲಿ ಗ್ರಾಮದ ಸುತ್ತ-ಮುತ್ತಲಿನ ಜನರು ಸಭೆ ನಡೆಸಿ ಮಿನಿ ವಿಧಾನ ಸೌಧ ಕಟ್ಟಡಕ್ಕೆ ಪ್ರವಾಸಿ ಮಂದಿರದ ಸ್ಥಳವೇ ಸೂಕ್ತ ಎಂದು ತಿಳಿಸಿದ್ದಾರೆ. ಆದರೆ ಕೆಲ ಕಾಣದ ಕೈಗಳ ಒತ್ತಡಕ್ಕೆ ಮಣಿದು ಹೋರಂಡಿ ಗ್ರಾಮದ ಗೋಮಾಳದಲ್ಲಿ ನಿರ್ಮಿಸಲು ಜಿಲ್ಲಾಧಿಕಾರಿಗಳು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ಆ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡಲು ಬಿಡುವುದಿಲ್ಲ. ಪ್ರಸಂಗ ಬಂದರೆ ಕಾನೂನು ಸಮರಕ್ಕೆ ಸಿದ್ಧ ಎಂದು ಗುಡುಗಿದರು.

ರೈತ ಮುಖಂಡ ವೈಜನಾಥ ವಡ್ಡೆ ಮಾತನಾಡಿ, ಪ್ರಭು ಚವ್ಹಾಣ ಅವರು ಪಶು ಸಂಗೋಪನಾ ಸಚಿವರಾದ ಮೇಲೆ, ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಪಾರ ಕಾರ್ಯಕರ್ತರು, ಸಾರ್ವಜನಿಕರು, ಮಿನಿ ವಿಧಾನಸೌಧವನ್ನು ಪ್ರವಾಸಿ ಮಂದಿರದಲ್ಲೇ ನಿರ್ಮಿಸಬೇಕೆಂದು ಒತ್ತಾಯಿಸಿದಾಗ ಸಚಿವರು ಒಪ್ಪಿಗೆ ಸೂಚಿಸಿದ್ದರು. ಜೊತೆಗೆ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮುಖಾಂತರ ಮೌಖೀಕ ಆದೇಶ ಕೂಡ ನೀಡಿದ್ದರು. ಇದಕ್ಕೆ ಜಿಲ್ಲಾಧಿಕಾರಿಗಳು ಕೂಡ ಒಪ್ಪಿಗೆ ಸೂಚಿಸಿದ್ದರು. ಆದರೆ ಎರಡು ತಿಂಗಳಾದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಅಸಮಾಧಾನ ವ್ಯಕ್ತಪಡಿಸಿದರು.

ರೈತ ಮುಖಂಡ ವಿಠಲರಾವ್‌ ಪಾಟೀಲ ಮಾತನಾಡಿ, ಈ ವಿಷಯದಲ್ಲಿ ಹಿಂದಿನಂತೆ ಕಾಣದ ಕೈಗಳ ಕೈವಾಡ ಇದೆ ಎಂಬ ಶಂಕೆ ಕಾಡುತ್ತಿದೆ. ಜ. 26ರ ವರೆಗೆ ಕೊಟ್ಟ ಮಾತು ಈಡೇರಿಸದಿದ್ದಲ್ಲಿ ಜ. 27ರಂದು ಔರಾದ ತಾಲೂಕು ರೈತ ಸಂಘದ ಅಧ್ಯಕ್ಷ ಶ್ರೀಮಂತ ಬಿರಾದಾರ ಅವರ ಮುಂದಾಳತ್ವದಲ್ಲಿ ತಹಶೀಲ್ದಾರ್‌ ಕಚೇರಿಯ ಆವರಣದಲ್ಲಿ ಬೇಡಿಕೆ ಈಡೇರಿಸುವವರೆಗೆ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರವಾಸಿ ಮಂದಿರದ ಸ್ಥಳ ಸುಮಾರು 3 ಎಕರೆ ಇದ್ದು, ಅದರ ಸುತ್ತ-ಮುತ್ತ ಅನಧಿ ಕೃತವಾಗಿ ಜಾಗ ಕಬಳಿಕೆ ಮಾಡಿಕೊಂಡಿದ್ದಾರೆ. ಆ ಸ್ಥಳ ತೆರವುಗೊಳಿಸಿದರೆ ಮಿನಿ ವಿಧಾನ ಸೌಧಕ್ಕೆ ಸಾಕಾಗುವಷ್ಟು ಸ್ಥಳಾವಕಾಶವಾಗುತ್ತದೆ ಎಂದು ಕಮಲನಗರ ರೈತ ಸಂಘದ ಅಧ್ಯಕ್ಷ ಪ್ರವೀಣ ಕುಲಕರ್ಣಿ ತಿಳಿಸಿದರು.

ಸುಶೀಲಕುಮಾರ ಘಾಗರೆ ಮಾತನಾಡಿ, ಪ್ರವಾಸಿ ಮಂದಿರದ ಸ್ಥಳ 54 ಗ್ರಾಮಸ್ಥರಿಗೆ ಅನುಕೂಲಕರ ಸ್ಥಳವಾಗಿದ್ದು, ಪಟ್ಟಣದ ಮಧ್ಯ ಭಾಗದಲ್ಲಿದೆ. ಈ ಸ್ಥಳದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣವಾದರೆ ಎಲ್ಲರಿಗೂ ಅನೂಕೂಲವಾಗುತ್ತದೆ ಎಂದು ಹೇಳಿದರು. ಬಳಿಕ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಪಟ್ಟಣದ ಪ್ರವಾಸಿ ಮಂದಿರವೇ ಸೂಕ್ತ ಎಂದು ಸಭೆಯಲ್ಲಿ ಎಲ್ಲರೂ ಒಮ್ಮತ ಸೂಚಿಸಿದರು.

ರೈತ ಸಂಘದ ಕಾರ್ಯದರ್ಶಿ ಪ್ರಕಾಶ ಬಾವಗೆ, ಉತ್ತಮರಾವ ಮಾನೆ, ವಿಠಲ ಪಾಟೀಲ, ಸಂಗಶೇಟ್ಟಿ ದಾನಾ, ನಾಗಶೆಟ್ಟಿ ನಂಜವಾಡ, ವಿಠಲರಾವ್‌ ಮೇತ್ರೆ, ರಮೇಶ ಮೇತ್ರೆ, ವೀರಭದ್ರ ಹಲಮಂಡಗೆ, ಮೋಹನರಾವ್‌ ಕಾಂಬಳೆ, ಪರಮೇಶ್ವರ ಪಾಂಚಾಲ, ಹಣಮಂತರಾವ್‌ ಪಾಟೀಲ, ಅಜಮೋದ್ದಿನ, ಶಿವರಾಜ ಪಾಟೀಲ, ಮನ್ಸೂರ, ಭೀಮರಾವ್‌ ಕಣಜೆ, ಶಿವಕುಮಾರ ಬಿರಾದಾರ, ಎಂ.ಕೆ.ಗಾಯಕವಾಡ, ಸುಶೀಲ ಘಾಗರೆ, ದೀಲೀಪ ಮುಧಾಳೆ, ಜ್ಞಾನೋಬಾ, ರಾಜಶೇಖರ ಅಜ್ಜಾ, ಅಂತೇಶ್ವರ ಪಾಟೀಲ, ದಯಾನಂದ ವಡ್ಡೆ, ಬಾ.ನಾ. ಸೊಲ್ಲಾಪೂರೆ, ವಿರೇಶ ತೋರಣೇಕರ್‌, ಸಂತೋಷ ಬಿರಾದಾರ, ಸಂಗಮನಾಥ ಡಿಗ್ಗಿ, ಸಂತೋಷ ಹಾಗೂ ಜನಪರ ಹೋರಾಟಗಾರರು, ಪ್ರಜಾಪ್ರಭುತ್ವ ಉಳಿಸಿ ಜನಾಂದೋಲನ ಸಮಿತಿಯ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.