ವನವಾಸಿಗಳ ಪ್ರತಿಭಟನೆಗೆ ಡಿಕೆಶಿ ಸ್ಪಂದಿಸಲಿ: ಸತೀಶ್
Team Udayavani, Dec 31, 2019, 3:34 PM IST
ರಾಮನಗರ: ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಅರಣ್ಯ ಪ್ರದೇಶದಲ್ಲಿ ಕಳೆದ 11 ದಿನಗಳಿಂದ ಮೂಲ ನಿವಾಸಿಗಳಾದ ವನವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಏಸುಕ್ರಿಸ್ತರ ಪ್ರತಿಮೆ ನಿರ್ಮಾಣಕ್ಕೆ ಸ್ಪಂದಿಸಿದಂತೆ ಈ ಹೋರಾಟಕ್ಕೂ ಸ್ಪಂದಿಸಬೇಕು ಎಂದು ವನವಾಸಿ ಕಲ್ಯಾಣ ಸಮಿತಿಯ ಜಿಲ್ಲಾ ಖಜಾಂಚಿ ಆರ್.ಕೆ.ಸತೀಶ್ ಆಗ್ರಹಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾರೋಬೆಲೆಯ ಕಪಾಲಬೆಟ್ಟದಲ್ಲಿ ಏಸುಕ್ರಿಸ್ತರ ಪ್ರತಿಮೆ ನಿರ್ಮಾಣಕ್ಕೆ ಡಿ.ಕೆ.ಶಿವಕುಮಾರ್ ಅವರು 10 ಎಕರೆ ಭೂಮಿಯನ್ನು ತಮ್ಮ ವೈಯಕ್ತಿಕವಾಗಿಯೇ ಕೊಡಿಸಿದ್ದಾರೆ. ಪ್ರತಿಮೆ ಸ್ಥಾಪನೆಗೆ ಸಹಕರಿಸುವ ಮೊದಲು ಅಲ್ಲಿನ ಮೂಲ ನಿವಾಸಿಗಳಾದ ವನವಾಸಿಗಳಿಗೆ ತಮ್ಮ ವಾಸಸ್ಥಳಕ್ಕೆ ಹಕ್ಕುಪತ್ರ ಕೊಡಿಸಬೇಕಿತ್ತು ಎಂದರು.
ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಅರಣ್ಯ ಪ್ರದೇಶದಲ್ಲಿ ಕಳೆದ 11 ದಿನಗಳಿಂದ ಹಗಲು, ರಾತ್ರಿ ಎನ್ನದೆ ಅಲ್ಲಿನ ಮೂಲ ನಿವಾಸಿಗಳು ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಯಾವ ಚುನಾಯಿತ ಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ. ಡಿ.ಕೆ.ಶಿ ಅವರು ಒಮ್ಮೆಯೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ವನವಾಸಿಗಳಿಗೆ ಹಕ್ಕುಪತ್ರ ವಿತರಿಸಬೇಕಾಗಿದೆ. ಕನಕಪುರ ತಾಲೂಕಿನಲ್ಲಿಯೇ 600 ಹೆಚ್ಚು ಮಂದಿ ಫಲಾನುಭವಿಗಳಿದ್ದಾರೆ. ಈ ದಿಕ್ಕಿನಲ್ಲಿ ಇನ್ನು ಮುಂದಾದರೂ ಸ್ಥಳಿಯ ಶಾಸಕರು, ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರು ಮನಸ್ಸು ಮಾಡಬೇಕು ಎಂದು ಮನವಿ ಮಾಡಿದರು.
ಸಾಮಾಜಿಕ ಹೋರಾಟಗಾರ, ವಕೀಲ ವಿನೋದ್ ಭಗತ್ ಮಾತನಾಡಿ, ಮೂಲ ನಿವಾಸಿಗಳು ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಕ್ಕುಪತ್ರ ವಿತರಿಸುವುದಲ್ಲದೆ, ಈ ಸಮುದಾಯಕ್ಕ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸಲಿ ಎಂದು ಒತ್ತಾಯಿಸಿದರು. ವನವಾಸಿ ಕಲ್ಯಾಣ ಸಮಿತಿಯ ಜಿಲ್ಲಾ ಕಾರ್ಯದರ್ಶಿ ರಾಜು, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ