ಕಾನೂನು ಯಾರ ಪೌರತ್ವ ಕಿತ್ತುಕೊಳ್ಳುವುದಿಲ್ಲ


Team Udayavani, Jan 2, 2020, 3:00 AM IST

kanoonu-yara

ಚಿಕ್ಕಬಳ್ಳಾಪುರ: ದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುವ ದೃಷ್ಟಿಯಿಂದಲೇ ಕೇಂದ್ರ ಸರ್ಕಾರ ಪೌರತ್ವ ಕಾನೂನನ್ನು ಅನುಷ್ಠಾನಗೊಳಿಸಿದ್ದು, ತಿದ್ದುಪಡಿ ಕಾನೂನು ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಆದರೆ ಪೌರತ್ವ ವಿರೋಧಿಸಿ ನಡೆಯುತ್ತಿರುವ ಗಲಾಟೆ, ಗಲಭೆಗಳ ಹಿಂದೆ ಕಾಂಗ್ರೆಸ್‌ ಪಿತೂರಿ ಇದೆ ಎಂದು ಬಿಜೆಪಿ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ ಕಾನೂನಯಡಿ ಯಾರನ್ನು ದೇಶ ಬಿಟ್ಟು ಕಳುಹಿಸುವುದಿಲ್ಲ. ಇದರ ಬಗ್ಗೆ ಕಾಂಗ್ರೆಸ್‌, ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿಸುತ್ತಿದ್ದು, ಕಾಂಗ್ರೆಸ್‌ ನಾಯಕರ ಮಾತಿಗೆ ಯಾರು ಕಿವಿಗೂಡಬಾರದೆಂದು ಮನವಿ ಮಾಡಿದರು.

ಕಾಂಗ್ರೆಸ್‌ ಕೊಡುಗೆ ಏನು?: ಪೌರತ್ವದ ವಿಷಯ ನಿನ್ನೆ ಮೊನ್ನೆಯದ್ದಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದಾಗನಿಂದಲೂ ಪೌರತ್ವದ ಬಗ್ಗೆ ಚರ್ಚೆ ಆಗುತ್ತಿದೆ. ದೇಶದಲ್ಲಿ ಎಲ್ಲ ಧರ್ಮಗಳು ಇದ್ದು, ಎಲ್ಲರಿಗೂ ಸಮಾನವಾದ ಹಕ್ಕು ಹಾಗೂ ಅವಕಾಶಗಳನ್ನು ನೀಡಲಾಗುತ್ತಿದೆ. ದೇಶವನ್ನು ಆಳಿದ ಕಾಂಗ್ರೆಸ್‌ ಪಕ್ಷ ಅಲ್ಪಸಂಖ್ಯಾತರನ್ನು ಹಾಗೂ ದಲಿತರನ್ನು ಕೇವಲ ಮತ ಬ್ಯಾಂಕ್‌ ಮಾಡಿಕೊಂಡು ಅವರನ್ನು ಕತ್ತಲಿನಲ್ಲಿಟ್ಟು ರಾಜಕೀಯ ಅಧಿಕಾರ ಪಡೆದಿದ್ದು ಬಿಟ್ಟರೆ ಅವರಿಗೆ ಯಾವುದೇ ಕೊಡುಗೆ ಕೊಟ್ಟಿಲ್ಲ ಎಂದರು.

ಯಾರ ಪೌರತ್ವಕ್ಕೂ ಧಕ್ಕೆ ಬರುವುದಿಲ್ಲ: ಅಲ್ಪಸಂಖ್ಯಾತರ ಹಾಗೂ ದಲಿತರು ಇಲ್ಲದೇ ಹೋಗಿದ್ದರೆ ದೇಶದಲ್ಲಿ ಕಾಂಗ್ರೆಸ್‌ ಹೆಸರು ಹೇಳುವವರೇ ಇರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುವ ಉದ್ದೇಶಿಸಿ ದಶಕಗಳಿಂದ ಸಮಸ್ಯೆಗೆ ಪರಿಹಾರ ಕಾಣದೇ ಇರುವ ಪೌರತ್ವ ಕಾನೂನುಗೆ ತಿದ್ದುಪಡಿ ತಂದಿದ್ದಾರೆ. ಇದರಿಂದ ಯಾರ ಪೌರತ್ವಕ್ಕೂ ಧಕ್ಕೆ ಬರುವುದಿಲ್ಲ. ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗಲಭೆ ಸೃಷ್ಟಿಸದಿರಿ: ಬಿಜೆಪಿ ಪಕ್ಷಕ್ಕೆ ದೇಶ ಮೊದಲು. ಆನಂತರ ಪಕ್ಷ, ಆದರೆ ಕಾಂಗ್ರೆಸ್‌ಗೆ ದೇಶಕ್ಕಿಂತ ಮೊದಲು ಅಧಿಕಾರ ಬೇಕು. ಆ ಕಾರಣಕ್ಕಾಗಿ ದೇಶದ ಭದ್ರತೆ ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡಲು ರೂಪಿಸಿರುವ ಸಿಎಎ ವಿರುದ್ಧ ಜನರನ್ನು ಎತ್ತಿಕಟ್ಟಿ ಹೋರಾಟಕ್ಕೆ ಇಳಿಸುವ ಮೂಲಕ ದೇಶದಲ್ಲಿ ಗಲಭೆಗಳನ್ನು ಸೃಷ್ಟಿಸಿ ಆಶಾಂತಿ ಮೂಡಿಸುತ್ತಿದೆ ಎಂದರು.

ಮಾಜಿ ಶಾಸಕ ಎಂ.ಶಿವನಾಂದ್‌, ಬಿಜೆಪಿ ತಾಲೂಕು ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್‌, ಕಾರ್ಯದರ್ಶಿ ಕೇತೇನಹಳ್ಳಿ ಕೃಷ್ಣಾರೆಡ್ಡಿ, ನಗರ ಘಟಕ ಅಧ್ಯಕ್ಷ ಮಂಜುನಾಥ, ಮುಖಂಡರಾದ ಎ.ವಿ.ಬೈರೇಗೌಡ, ಲಕ್ಷ್ಮೀಪತಿ, ಹನುಮಂತಪ್ಪ, ಆರ್‌.ಶ್ರೀನಿವಾಸ್‌, ರಾಮಣ್ಣ, ಕಳವಾರ ಶ್ರೀಧರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ನಾಯಕರ ತಲೆಯಲ್ಲಿ ಜ್ಞಾನ ಇಲ್ಲ. ಏನೇ ಹೇಳಿದರೂ ಅವರ ತಲೆಗೆ ಹತ್ತಲ್ಲ. ಆ ಕಾರಣಕ್ಕಾಗಿ ಅವರಿಗೆ ಎನ್‌ಆರ್‌ಸಿ, ಸಿಇಇ ಬಗ್ಗೆ ಅರ್ಥ ಆಗುತ್ತಿಲ್ಲ. ದೇಶದ ಅಲ್ಪಸಂಖ್ಯಾತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಎಂದಿಗೂ ಬಿಜೆಪಿ ಮಾಡುವುದಿಲ್ಲ. ಪಾಕಿಸ್ತಾನ, ಬಾಂಗ್ಲದೇಶ ಹೊಸದಾಗಿ ರಚನೆಯಾದಾಗ ದೇಶದಿಂದ ಹೋಗದ ಮುಸ್ಲಿಂರನ್ನು ನಾವು ಈಗ ಹೊರ ಕಳುಹಿಸಲು ಸಾಧ್ಯವೇ? ಅಲ್ಪಸಂಖ್ಯಾತರ ರಕ್ಷಣೆಗಾಗಿಯೆ ಕೇಂದ್ರ ಸರ್ಕಾರ ಪೌರತ್ವ ಕಾನೂನು ತಂದಿದೆ.
-ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.