ನೀರಿನ ಘಟಕಗಳ ನಿರ್ವಹಣೆ ಕೊರತೆ


Team Udayavani, Jan 2, 2020, 3:00 AM IST

neerina-ghata

ಹುಳಿಯಾರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 20 ಸಾವಿರ ಜನಸಂಖ್ಯೆಗೆ ಕೇವಲ ಮೂರು ನೀರಿನ ಘಟಕಗಳು ನೀರು ಪೂರೈಸುತ್ತಿವೆ. ಅದರಲ್ಲೂ ಧರ್ಮಸ್ಥಳ ಸಂಸ್ಥೆಯ ನೀರಿನ ಘಟಕ ಸ್ಥಾಪನೆಯಾದ 2 ವರ್ಷದಿಂದ ತೊಂದರೆಯಿಲ್ಲದೆ ನೀರು ಪೂರೈಸುತ್ತಿದೆ.

ನಾಲ್ಕೈದು ವರ್ಷದ ಹಿಂದೆ ಡಾ.ವಾಟರ್‌ ಸಂಸ್ಥೆಯಿಂದ ಘಟಕ ಸ್ಥಾಪಿಸಲಾಯಿತು. ಅಲ್ಲಿಂದ ಇಲ್ಲಿಯವರೆವಿಗೆ ಶಾಸಕರು, ಸಂಸದರ ನಿಧಿ, ಗ್ರಾಮೀಣ ಕುಡಿಯುವ ನೀರು ಯೋಜನೆ ಸೇರಿ 10 ಘಟಕಗಳು ಸ್ಥಾಪನೆಗೊಂಡಿವೆ. ಆದರೆ ಕೆಲ ಘಟಕಗಳ ನಿರ್ವಹಣೆ ಕೊರತೆಯಿಂದಪಕ್ಕದ ಊರಿನ ಘಟಕಗಳಿಂದ ನೀರು ತರಬೇಕು. ಇಲ್ಲವೇ ಫ್ಲೋರೈಡ್‌ ಯುಕ್ತ ನೀರು ಕುಡಿಯಬೇಕು.

ಹುಳಿಯಾರಿನ ನಾಡಕಚೇರಿ ಬಳಿಯ ಸರ್ಕಾರದ ನೀರಿನ ಘಟಕ, ಪೊಲೀಸ್‌ ಠಾಣೆ ಪಕ್ಕದ ಡಾ.ವಾಟರ್‌ ಘಟಕ ಹಾಗೂ ಪಂಚಾಯಿತಿ ಕಚೇರಿ ಬಳಿಯ ಧರ್ಮಸ್ಥಳ ಸಂಸ್ಥೆಯ ಘಟಕ ಬಿಟ್ಟರೆ ಉಳಿದ ಘಟಕಗಳು ಆಗಾಗ ಕೆಡುತಿರುತ್ತವೆ. ಕೆಟ್ಟು ತಿಂಗಳಾದರೂ ದುರಸ್ತಿ ಮಾಡುವುದಿಲ್ಲ. ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದರೆ ಘಟಕಗಳ ನಿರ್ವಹಣೆ ಹೊಣೆ ಹೊತ್ತವರ ಕಡೆ ಬೆರಳು ಮಾಡುತ್ತಾರೆ.

ತಾಲೂಕು ಕುಡಿಯುವ ನೀರಿನ ಎಂಜಿನಿಯರ್‌, ಗುತ್ತಿಗೆದಾರರು ಸ್ಪಂದಿಸುವುದಿಲ್ಲ. ಕೆಂಕೆರೆ ರಸ್ತೆಯ ಬಿಎಂಎಸ್‌ ಪಕ್ಕದ ಘಟಕ ಕೆಟ್ಟು ವರ್ಷ ಕಳೆದಿದೆ. ವೈ.ಎಸ್‌.ಪಾಳ್ಯ, ಲಿಂಗಪ್ಪನಪಾಳ್ಯ, ಕೋಡಿಪಾಳ್ಯದ ನಿವಾಸಿಗಳು ಶುದ್ಧ ನೀರಿಗೆ ಪರದಾಡಬೇಕು. ಬೈಕ್‌ ಇರುವವರು ಅಕ್ಕಪಕ್ಕದ ಊರಿನ ಘಟಕಗಳಿಂದ ನೀರು ತಂದರೆ ಬೈಕ್‌ ಇಲ್ಲದವರು ಕೊಳವೆ ಬಾವಿ ನೀರು ಕುಡಿಯಬೇಕು.

ದುರ್ಗಾಪರಮೇಶ್ವರಿ ದೇವಾಲಯ ಆವರಣದಲ್ಲಿರುವ ಘಟಕ ನೀರು ಸರಬರಾಜು ಮಾಡಿದ್ದಕ್ಕಿಂತ ಕೆಟ್ಟಿದ್ದೇ ಹೆಚ್ಚು. ಪ್ರಸ್ತುತ ಈ ಘಟಕ ಕೆಟ್ಟಿದ್ದರೂ ದುರಸ್ತಿಗೆ ಇನ್ನೂ ಮುಂದಾಗಿಲ್ಲ. ಎಪಿಎಂಸಿ ಆವರಣದಲ್ಲಿನ ಘಟಕ, ವೈ.ಎಸ್‌.ಪಾಳ್ಯದ ಘಟಕವೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಆರಂಭವಾಗಿಲ್ಲ.

ಘಟಕ ಕೆಟ್ಟರೆ ಅಥವಾ ತಾಂತ್ರಿಕ ಸಮಸ್ಯೆ ತಲೆದೋರಿದರೆ ರಿಪೇರಿ ಮಾಡಲು ಯಾರಿಗೆ ತಿಳಿಸಬೇಕೆಂದು ತಿಳಿಯುವುದಿಲ್ಲ. ಪಪಂ ಅಧಿಕಾರಿಗಳಿಗೆ ಕೇಳಿದರೆ ನಮ್ಮ ಜವಾಬ್ದಾರಿಯಲ್ಲ ಎನ್ನುತ್ತಾರೆ. ನಿರ್ವಹಣೆ ಮಾಡಬೇಕಿರುವ ಕಂಪನಿಯವರು ಘಟಕದ ಹಣ ತಪ್ಪದೆ ಕೊಂಡೊಯ್ಯುತ್ತಾರೆ. 10 ನೀರಿನ ಘಟಕಗಳಿದ್ದರೂ ಶುದ್ಧ ನೀರಿಗೆ ಪರದಾಡುವುದು ತಪ್ಪಿಲ್ಲ.
-ಜಯಲಕ್ಷ್ಮೀ, ಸಾಮಾಜಿಕ ಕಾರ್ಯಕರ್ತೆ

ನೀರಿನ ಘಟಕ ನಿರ್ವಹಣೆ ಬೇರೆ ಬೇರೆ ಕಂಪನಿ ವಹಿಸಿದೆ. ಆದರೆ ಕೆಟ್ಟರೆ ಜನರು ಪಂಚಾಯಿತಿಗೆ ಬಂದು ಕೇಳುತ್ತಾರೆ. ಸಣ್ಣಪುಟ್ಟ ರಿಪೇರಿ ಮಾಡಿಸಿ ನೀರು ಕೊಟ್ಟಿದ್ದೇವೆ. ಎಲ್ಲಾ ಘಟಕ ಪಂಚಾಯ್ತಿಗೆ ಬಿಟ್ಟುಕೊಟ್ಟರೆ ಸಮರ್ಪಕವಾಗಿ ನಿರ್ವಹಿಸುತ್ತೇವೆ.
-ಮಂಜುನಾಥ್‌, ಪಪಂ ಮುಖ್ಯಾಧಿಕಾರಿ

* ಎಚ್‌.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.