ಉದಯವಾಣಿ 50ನೆಯ ವರ್ಷಾಚರಣೆ ಆರಂಭ


Team Udayavani, Jan 2, 2020, 6:43 AM IST

aa-32

ಉಡುಪಿ: “ಉದಯವಾಣಿ’ ದೈನಿಕದ 50ನೇ ವರ್ಷದ ಸಂಭ್ರಮವನ್ನು ಬುಧವಾರ ಮಣಿಪಾಲದ ಉದಯವಾಣಿ ಆಡಳಿತ ಕಚೇರಿಯಲ್ಲಿ ಆಚರಿಸಲಾಯಿತು.ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಆಡಳಿತ ನಿರ್ದೇಶಕ ಟಿ. ಸತೀಶ್‌ ಯು. ಪೈ, “ತರಂಗ’ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ, ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಕಾರ್ಯನಿರ್ವಾಹಕ ನಿರ್ದೇಶಕ ಟಿ. ಗೌತಮ್‌ ಪೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

“ಉದಯವಾಣಿ’ ದೈನಿಕವು ಕಳೆದ 49 ವರ್ಷಗಳಲ್ಲಿ ಕರಾವಳಿ ಪ್ರದೇಶದ ಶಿಕ್ಷಣ, ಸಂಸ್ಕೃತಿ, ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದೆ. ನಮ್ಮ ಸಂಸ್ಥೆಯ ಮೇಲೆ ಗರಿಷ್ಠ ವಿಶ್ವಾಸವನ್ನು ಜನರು ಇರಿಸಿದ್ದಾರೆ. ಇಷ್ಟು ವರ್ಷಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬದಲಾವಣೆಗೆ ತಕ್ಕಂತೆ ನಾವೂ ಪುನರವಲೋಕನ ನಡೆಸಿ ಮುಂದಿನ 50 ವರ್ಷಗಳ ದೃಷ್ಟಿಯಲ್ಲಿರಿಸಿಕೊಂಡು ಕಾರ್ಯಾಚರಿಸಬೇಕಾಗಿದೆ ಎಂದು ಗೌತಮ್‌ ಪೈ ಕರೆ ನೀಡಿದರು.

“ಉದಯವಾಣಿ’ಯು ಸಮಾಜದ ಹಿತವನ್ನೇ ಇರಿಸಿಕೊಂಡು ಬೆಳೆದಿದೆ. 50 ವರ್ಷವೆಂದರೆ ಮಧ್ಯವಯಸ್ಸು. ಈಗ ಮತ್ತಷ್ಟು ಪ್ರಬುದ್ಧತೆ, ತಾಳ್ಮೆ ಮೈಗೂಡುವ ಸಮಯ. ಸಹನೆ ಮತ್ತು ಸಾಮಾಜಿಕ ಕಾಳಜಿಯೇ ಪತ್ರಿಕೆಯ ವಿಶ್ವಾಸಾರ್ಹತೆ ಮತ್ತು ಬೆಳವಣಿಗೆಗೆ ಕಾರಣವಾಗಿದೆ. ಇದುವರೆಗಿನ ಸಾಧನೆ ಸಾಧ್ಯವಾದುದು ಸಿಬಂದಿಯ ಸಹಕಾರದಿಂದ. ಇದೇ ರೀತಿ ಸಂಸ್ಥೆಯು ಅಭಿವೃದ್ಧಿ ಹೊಂದಲಿ ಎಂದು
ಡಾ| ಸಂಧ್ಯಾ ಪೈ ಶುಭ ಹಾರೈಸಿದರು.

ಕರಾವಳಿ ಕರ್ನಾಟಕದ ಸಾಂಸ್ಕೃತಿಕ, ಸಾಮಾಜಿಕ ಅಭಿವೃದ್ಧಿಗೆ ವೇದಿಕೆಯಾಗಿ ಉದಯವಾಣಿ ಕಾರ್ಯಾಚರಿಸಿದೆ. ಟಿ. ಸತೀಶ್‌ ಪೈ, ಟಿ. ಮೋಹನದಾಸ ಪೈ ಅವರು ಸಂಸ್ಥೆಯನ್ನು ಕಟ್ಟಿ ಬೆಳೆಸುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಗಣನೀಯವಾದ ಪ್ರಭಾವ ಬೀರಿದರು. 50 ವರ್ಷಗಳ ಹಿಂದೆಯೇ ಸ್ಥಾಪಕರು ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿದ್ದರು. ಇದೇ ಕಾರಣಕ್ಕಾಗಿ ಲಕ್ಷಾಂತರ ಓದುಗರ ಮನವನ್ನು ಉದಯವಾಣಿ ಸೆಳೆದಿದೆ. ಆರಂಭದಿಂದಲೂ ಜಾಹೀರಾತುದಾರರು ಸಹಕಾರ ಕೊಟ್ಟಿದ್ದಾರೆ. ಸಾವಿರಾರು ಸಿಬಂದಿಗೆ ಉದ್ಯೋಗ ಕಲ್ಪಿಸಿದೆ. ಸ್ಥಾಪಕರ ಉದ್ದೇಶದಂತೆ ಗೌತಮ್‌ ಪೈಯವರು ಸಂಸ್ಥೆಯನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ. ಅಗತ್ಯಕ್ಕೆ ತಕ್ಕಂತೆ ಬದಲಾವಣೆ, ಜೀವನಶೈಲಿಯ ಬದಲಾವಣೆಯನ್ನು ಗಮನದಲ್ಲಿರಿಸಿಕೊಂಡು ಸಂಸ್ಥೆಯನ್ನು ಮುನ್ನಡೆಸಬೇಕಾಗಿದೆ. ಇದೊಂದು ಅನೌಪಚಾರಿಕ ಕಾರ್ಯಕ್ರಮವಷ್ಟೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸಮಾರಂಭವನ್ನು ಏರ್ಪಡಿಸಲಾಗುವುದು ಎಂದು ಸಂಸ್ಥೆಯ ಸಿಇಒ ವಿನೋದ್‌ ಕುಮಾರ್‌ ಪ್ರಸ್ತಾವನೆಯಲ್ಲಿ ತಿಳಿಸಿದರು.

“ಉದಯವಾಣಿ’ಯ 50ನೇ ವರ್ಷದ ಸಂಭ್ರಮವನ್ನು ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಆಡಳಿತ ನಿರ್ದೇಶಕ ಟಿ. ಸತೀಶ್‌ ಯು. ಪೈ ಉದ್ಘಾಟಿಸಿದರು.

ಟಾಪ್ ನ್ಯೂಸ್

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.