ಬಿಬಿಎಂಪಿ ಚುನಾವಣೆ ಒಂದು ವರ್ಷ ಮುಂದೂಡಲು ಪಕ್ಷಾತೀತ ಕಸರತ್ತು!


Team Udayavani, Jan 2, 2020, 3:10 AM IST

bbmp2

ಬೆಂಗಳೂರು: ಈ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ನಡೆಯಬೇಕಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಒಂದು ವರ್ಷ ಮುಂದೂಡುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ. ನಗರದ ಶಾಸಕರು ಪಕ್ಷಾತೀತವಾಗಿ ಬಿಬಿಎಂಪಿ ಚುನಾವಣೆ ಮುಂದೂಡಲು ಬಯಸಿದ್ದು ಆಡಳಿತಾರೂಢ ಬಿಜೆಪಿ ಶಾಸಕರ ಮೂಲಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೇಲೂ ಒತ್ತಡ ತರಲು ಕಾರ್ಯತಂತ್ರ ರೂಪಿಸಿದ್ದಾರೆ.

ಬಿಬಿಎಂಪಿ ವಾರ್ಡ್‌ ಪುನರ್‌ ವಿಂಗಡನೆಯಲ್ಲಿ ವಿಳಂಬ ಮಾಡುವುದು ಹಾಗೂ ಆಡಳಿತ ದೃಷ್ಟಿಯಿಂದ ಪಾಲಿಕೆ ತ್ರಿಭಜನೆ ಮಾಡುವ “ಅಸ್ತ್ರ’ ಮುಂದಿಟ್ಟುಕೊಂಡು ಚುನಾವಣೆ ಮುಂದೂಡಿಕೆ ಮಾಡಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಈಗಾಗಲೇ ಪಾಲಿಕೆಯ ವಾರ್ಡ್‌ ಪುನರ್‌ ವಿಂಡಗಣೆ ಕಾರ್ಯ ಪೂರ್ಣಗೊಳ್ಳಬೇಕಿತ್ತಾದರೂ ಇನ್ನೂ ಪ್ರಾರಂಭದ ಹಂತದಲ್ಲಿದೆ ಎಂದು ಹೇಳಲಾಗಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ವಾರ್ಡ್‌ ಪುನರ್‌ ವಿಂಗಡಣೆಗಾಗಿ ಸಾರ್ವಜನಿಕ ಆಕ್ಷೇಪ ಸ್ವೀಕರಿಸಲು ಪುರಭವನದಲ್ಲಿ ಸಭೆ ಕರೆಯಲಾಗಿತ್ತಾದರೂ ಮುಂದೂಡಲಾಗಿತ್ತು. ರಾಜ್ಯ ಬಜೆಟ್‌ ಹಾಗೂ ಬಿಬಿಎಂಪಿ ಬಜೆಟ್‌ ನಂತರ ಬಿಬಿಎಂಪಿ ಮೂರು ಪಾಲಿಕೆಗಳಾಗಿ ವಿಭಜನೆ ಮಾಡುವ ಪ್ರಯತ್ನಕ್ಕೆ ಚಾಲನೆ ಸಿಗಲಿದೆ. ಬಿ.ಎಸ್‌.ಪಾಟೀಲ್‌ ನೇತೃತ್ವದ ಸಮಿತಿ ನೀಡಿರುವ ವರದಿಯಲ್ಲಿ ಆಡಳಿತ ದೃಷ್ಟಿಯಿಂದ ಪಾಲಿಕೆಯನ್ನು ಮೂರು ಪಾಲಿಕೆಗಳಾಗಿ ವಿಭಜನೆ ಮಾಡುವ ಶಿಫಾರಸು ಸಹ ಇದ್ದು ಆ ಬಗ್ಗೆ ಶಾಸಕರು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಚುನಾವಣೆ ಒಂದು ವರ್ಷ ಮುಂದೂಡಿದರೆ ಬಿಬಿಎಂಪಿ ಆಡಳಿತದಲ್ಲಿ ಶಾಸಕರು ನೇರವಾಗಿ ಮಧ್ಯಪ್ರವೇಶಿಸಬಹುದು. ವಾರ್ಡ್‌ ಮಟ್ಟದ ಅಧಿಕಾರಗಳಿಂದ ಹಿಡಿದು ಆಯುಕ್ತರವರೆಗೆ ತಮ್ಮ ಮಾತು ಕೇಳುತ್ತಾರೆ. ರಾಜ್ಯ ಸರ್ಕಾರದಿಂದ ಬಿಬಿಎಂಪಿ ಮೂಲಕ ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಂಡು ತಮ್ಮ ನಿರ್ದೆಶನದಡಿಯೇ ಟೆಂಡರ್‌ ಮತ್ತಿತರ ಪ್ರಕ್ರಿಯೆ ನಡೆಯುವಂತೆ ಮಾಡುವುದು ಶಾಸಕರ ಉದ್ದೇಶ.

ಈ ವಿಚಾರದಲ್ಲಿ ನಗರದ ಎಲ್ಲ ಶಾಸಕರು ಪಕ್ಷಾತೀತವಾಗಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಒಂದೆರಡು ಸುತ್ತಿನ ಮಾತುಕತೆಯೂ ಈ ಬಗ್ಗೆ ನಡೆದಿದ್ದು, ಒಂದು ವರ್ಷ ಮುಂದೂಡಿಕೆಗೆ ಏನೆಲ್ಲಾ ಮಾರ್ಗಗಳಿವೆ ಎಂಬುದರ ಬಗ್ಗೆ ಸಮಾಲೊಚನೆ ಸಹ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಸರತ್ತು: ನಗರಾಭಿವೃದ್ಧಿ ಇಲಾಖೆ ವಾರ್ಡ್‌ ಪುನರ್‌ ವಿಂಗಡಣೆ ಮಾಡಿ ರಾಜ್ಯ ಚುನಾವಣಾ ಆಯೋಗಕ್ಕೆ ಕೊಡಬೇಕು. ಈಗ ವಾರ್ಡ್‌ ಪುನರ್‌ ವಿಂಗಡಣೆ ಕಾರ್ಯ ಆರಂಭಿಸಲಾಗಿದೆಯಾದರೂ ಇನ್ನೂ ಸಾರ್ವಜನಿಕರ ಆಕ್ಷೇಪಕ್ಕೆ ಅವಕಾಶ ಕೊಡಬೇಕಾಗಿದೆ. ಆ ನಂತರವಷ್ಟೇ ಆಯೋಗಕ್ಕೆ ತಲುಪಿಸಬೇಕು.

ಈ ಮಧ್ಯೆ, ವಾರ್ಡ್‌ ಪುನರ್‌ ವಿಂಗಡಣೆಯಿಂದ ಜಯನಗರ, ಪದ್ಮನಾಭನಗರ, ಶಿವಾಜಿನಗರ, ಗಾಂಧಿನಗರ, ರಾಜಾಜಿನಗರ ವಿಧಾನಸಭೆ ಕ್ಷೇತ್ರಗಳ ವಾರ್ಡ್‌ಗಳು ಕಡಿಮೆಯಾಗಿ ಸರ್ವಜ್ಞನಗರ, ಸರ್‌.ಸಿ.ವಿ.ರಾಮನ್‌ನಗರ, ಕೆ.ಆರ್‌.ಪುರಂ, ಯಲಹಂಕ, ಬೆಂಗಳೂರು ದಕ್ಷಿಣ ಸೇರಿದಂತೆ ಬೇರೆ ವಿಧಾನಸಭೆ ಕ್ಷೇತ್ರಗಳ ವಾರ್ಡ್‌ಗಳ ಸಂಖ್ಯೆ ಹೆಚ್ಚಾಗಲಿದೆ.

ಶಾಸಕರು ತಾವು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗುವಂತೆ ವಾರ್ಡ್‌ಗಳ ಸೇರ್ಪಡೆ, ಆ ವಾರ್ಡ್‌ಗಳಿಗೆ ಬಡಾವಣೆಗಳ ಸೇರ್ಪಡೆಗೂ ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಕೆಲವೆಡೆ ವಾರ್ಡ್‌ ಪುನರ್‌ ವಿಂಗಡಣೆ ಅಧಿಕಾರಿಗಳ ಮೇಲೂ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದೆಯೂ ಮುಂದೂಡಲಾಗಿತ್ತು : ಪಾಲಿಕೆ ಚುನಾವಣೆ ಮುಂದೂಡಿಕೆ ಹೊಸದಲ್ಲ. ವಾರ್ಡ್‌ಗಳ ಸಂಖ್ಯೆಯನ್ನು 100ರಿಂದ 198 ವಾರ್ಡ್‌ಗಳಿಗೆ ಹೆಚ್ಚಿಸಿದಾಗ 2006ರಿಂದ 2010ರವರೆಗೆ ಚುನಾವಣೆ ನಡೆದಿರಲಿಲ್ಲ. ಆಡಳಿತಾಧಿಕಾರಿಗಳನ್ನು ನೇಮಿಸಲಾಗಿತ್ತು. ಅದಕ್ಕೂ ಮುನ್ನ 1978ರಿಂದ 1983ರವರೆಗೂ ಪಾಲಿಕೆಗೆ ಚುನಾವಣೆ ನಡೆದಿರಲಿಲ್ಲ. ಕೆಎಂಸಿ ಕಾಯ್ದೆ ಹಾಗೂ 74 ನೇ ತಿದ್ದುಪಡಿ ಪ್ರಕಾರ ಅವಧಿ ಮುಗಿಯುತ್ತಲೇ ಚುನಾವಣೆ ನಡೆಸಬೇಕು. ಆದರೆ, ಬೇರೆ ಬೇರೆ ಕಾರಣಗಳನ್ನು ನೀಡಿ ಮುಂದೂಡುವ ತಂತ್ರ ಶಾಸಕರದ್ದು ಎಂದು ಹೇಳಲಾಗಿದೆ.

* ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.