ಹೆಸರು ನೋಂದಣಿ ಪ್ರಕ್ರಿಯೆ ಆರಂಭ ವಿಳಂಬ

ಒಟ್ಟು 75 ಖರೀದಿ ಕೇಂದ್ರ ಸ್ಥಾಪನೆ  82 ಸಾವಿರ ಕ್ವಿಂಟಲ್‌ ತೊಗರಿ ಫ‌ಸಲು ಬೆಳೆ

Team Udayavani, Jan 2, 2020, 11:51 AM IST

2-January-5

ಬೀದರ: ಮಾರುಕಟ್ಟೆಯಲ್ಲಿ ತೊಗರಿ ದರ ಕುಸಿತದಿಂದ ನಲುಗಿದ್ದ ಅನ್ನದಾತನ ಆಸರೆಗೆ ಕೇಂದ್ರ-ರಾಜ್ಯ ಸರ್ಕಾರಗಳು ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರಗಳನ್ನು ಸ್ಥಾಪಿಸಿವೆ. ಆದರೆ ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಲು ಆದೇಶಿಸಿ 11 ದಿನ ಕಳೆದಿದೆ. ಆದರೆ ಈವರೆಗೆ ಪ್ರಕ್ರಿಯೆ ಆರಂಭಗೊಳ್ಳದೇ ಇರುವುದರಿಂದ ಅನ್ನದಾತ ಆತಂಕದಲ್ಲಿದ್ದಾನೆ.

ಪ್ರಸಕ್ತ ಸಾಲಿನಲ್ಲಿ ಪ್ರತಿ ಕ್ವಿಂಟಲ್‌ ತೊಗರಿ ಖರೀದಿಗೆ ಕೇಂದ್ರ ಸಕಾರದ ಕನಿಷ್ಠ ಬೆಂಬಲ 5800 ರೂ. ಜತೆ ಪ್ರೋತ್ಸಾಹ ಧನ 300ರೂ. ಸೇರಿ ರೈತರಿಂದ ಪ್ರತಿ ಕ್ವಿಂಟಲ್‌ ತೊಗರಿಯನ್ನು 6100 ರೂ.ಗಳಿಗೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕಳೆದ ಡಿ. 21ರಿಂದ ಜ.10ರವರೆಗೆ ರೈತರು ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸುವಂತೆ ಮತ್ತು ನಂತರ 30 ದಿನಗಳ ಕಾಲ ಖರೀದಿ ಪ್ರಕ್ರಿಯೆ ನಡೆಸಲು
ಆದೇಶ ಹೊರಡಿಸಿದೆ.

ತೊಗರಿ ಖರೀದಿಗಾಗಿ ನೋಂದಣಿಗೆ ಸರ್ಕಾರ ಕೇವಲ 21 ದಿನ ಮಾತ್ರ ಕಾಲಾವಕಾಶ ಕಲ್ಪಿಸಿದೆ. ಆದರೆ, ರೈತರು ಹೆಸರು ನೋಂದಣಿ ಆರಂಭವಾಗಿ 11 ದಿನಗಳು ಕಳೆದರೂ ಇದುವರೆಗೂ ಖರೀದಿ ಪ್ರಕ್ರಿಯೆಗೆ ಚಾಲನೆ ಮಾತ್ರ ಸಿಕ್ಕಿಲ್ಲ. ಈಗ ಉಳಿದಿರುವ 10 ದಿನಗಳಲ್ಲಿ ಎಲ್ಲ ರೈತರ ನೋಂದಣಿ ಕಾರ್ಯ ನಡೆಯುವುದು ಕಷ್ಟ ಸಾಧ್ಯ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ 82 ಸಾವಿರ ಕ್ವಿಂಟಲ್‌ ತೊಗರಿ ಬೆಳೆಯಲಾಗಿದ್ದು, ಎರಡ್ಮೂರು ವಾರಗಳಲ್ಲಿ ಕಟಾವು ಶುರುವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 78 ಖರೀದಿ ಕೇಂದ್ರ ಸ್ಥಾಪಿಸಲಾಗಿದೆ. ಈ ಬಾರಿ ಉತ್ತಮ ಮಳೆ ಸುರಿದಿದೆ ಮತ್ತು ಕೀಟ ಬಾಧೆ ಇಲ್ಲವಾದ್ದರಿಂದ ಬಂಪರ್‌ ಇಳುವರಿ ಸಿಗಬಹುದು ಎಂಬ ನಿರೀಕ್ಷೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿಗೆ ಘೋಷಿಸಿರುವುದು ರೈತರಲ್ಲಿ ಸಂತಸ ಇಮ್ಮಡಿಗೊಳಿಸಿತ್ತು. ಆದರೆ ಇವತ್ತಿಗೂ ನೋಂದಣಿ ಪ್ರಕ್ರಿಯೆ ಆರಂಭವಾಗಿಲ್ಲ. ಇದಕ್ಕೆ ಎನ್‌ಇಎಂಎಲ್‌ ಸಾಫ್ಟವೇರ್‌ನಲ್ಲಿ ತಾಂತ್ರಿಕ ಸಮಸ್ಯೆಯೇ ಕಾರಣ ಎಂದು ಹೇಳಲಾಗಿದೆ.

ತೊಗರಿ ಖರೀದಿಗೆ ನಾಫೆಡ್‌ ಹಾಗೂ ಎಫ್‌ ಸಿಐ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿ ಮತ್ತು ಮಾರ್ಕ್‌ಫೆಡ್‌, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಯನ್ನು ರಾಜ್ಯದ ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಮಾರ್ಗಸೂಚಿಯನ್ವಯ ಬೀದರ
ಸೇರಿ ತೊಗರಿ ಬೆಳೆಯುವ 9 ಜಿಲ್ಲೆಗಳಲ್ಲಿ ಎಕರೆಗೆ 5 ಕ್ವಿಂ. ಮತ್ತು ಪ್ರತಿ ರೈತರಿಂದ ಗರಿಷ್ಠ 10 ಕ್ವಿಂ. ತೊಗರಿ ಖರೀದಿಗೆ ಅವಕಾಶ ನೀಡಲಾಗಿದೆ.

ಮಳೆಯಾಶ್ರಿತ ಪ್ರದೇಶವಾಗಿರುವ ಬೀದರ ಜಿಲ್ಲೆಯಲ್ಲಿ ತೊಗರಿ ಬಿತ್ತನೆ ತಡವಾಗಿ ನಡೆಯುವುದರಿಂದ ಬೆಳೆ ಕಟಾವು ಸಹ ವಿಳಂಬವಾಗುತ್ತದೆ. ಅಲ್ಪ ಅವಧಿ ಯಲ್ಲಿಯೇ ಎಲ್ಲ ರೈತರು ನೋಂದಣಿ ಮಾಡಿಸಬೇಕಿರುವುದರಿಂದ ಸರ್ವರ್‌ ಮೇಲೆ ಒತ್ತಡ, ನೂಕು ನುಗ್ಗಲು ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಸರ್ಕಾರ ನೋಂದಣಿ ಪ್ರಕ್ರಿಯೆ ವಿಸ್ತರಿಸಬೇಕು ಎಂಬುದು ರೈತರ ಒತ್ತಾಸೆಯಾಗಿದೆ.

ಉತ್ತಮ ಮಳೆ ಹಿನ್ನೆಲೆಯಲ್ಲಿ ಬಂಪರ್‌ ಬೆಳೆ ಬರುವ ನಿರೀಕ್ಷೆ ಇದೆ. ಸರ್ಕಾರದಿಂದ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಮುಂದಾಗಿರುವುದರಿಂದ ಖುಷಿಯಲ್ಲಿದ್ದೆವು. ತೊಗರಿ ಖರೀದಿ ನೋಂದಣಿ ಪ್ರಕ್ರಿಯೆಗೆ ಕೇವಲ 21 ದಿನಗಳ ಅಲ್ಪ ಸಮಯ ನೀಡಲಾಗಿದೆ. ಆದರೆ ಇವತ್ತಿಗೂ ನೋಂದಣಿ ಆರಂಭಿಸಿಲ್ಲ. ಇದಕ್ಕಾಗಿ ನಾವು ಕಾಯ್ದು ಕುಳಿತಿದ್ದೇವೆ. ಇನ್ನೂ ಖರೀದಿ ಯಾವಾಗ ಮಾಡುತ್ತಾರೆ ಎಂಬ ಆತಂಕ ಮೂಡಿದೆ.
. ಸಿದ್ರಾಮ ಬೇಲೂರೆ, ರೈತ

ಬೀದರ ಜಿಲ್ಲೆಯಲ್ಲಿ ತೊಗರಿ ಖರೀದಿಸಲು ಒಟ್ಟು 78 ಕೇಂದ್ರ ಸ್ಥಾಪಿಸಲಾಗಿದೆ. ಡಿ.21ರಿಂದಲೇ ನೋಂದಣಿ ಆರಂಭವಾಗಬೇಕಿತ್ತು. ಆದರೆ, ಎನ್‌ಇಎಂಎಲ್‌ ಸಾಫ್ಟವೇರ್‌ನಲ್ಲಿನ ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗಿದೆ. ಇಂದು ಅಥವಾ ನಾಳೆ ಪ್ರಕ್ರಿಯೆ ಶುರುವಾಗಲಿದೆ. ನೋಂದಣಿ ದಿನಾಂಕ ವಿಸ್ತರಿಸುವ ಕುರಿತಂತೆ ಈಗಾಗಲೇ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ.
. ಪ್ರಭಾಕರ,
ಶಾಖಾ ವ್ಯವಸ್ಥಾಪಕರು,
ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.