‘ಗ್ರಾಪಂ ಮಟ್ಟದಲ್ಲೇ ಖರೀದಿ ಕೇಂದ್ರ ತೆರೆಯಿರಿ’

ಕರ್ನಾಟಕ ರೈತ ಸಂಘ ಸದಸ್ಯರ ಮನವಿ ಖಾಸಗಿ ವರ್ತಕರೂ ಬೆಂಬಲ ಬೆಲೆಯಡಿ ಕೃಷಿ ಉತ್ಪನ್ನ ಖರೀದಿಸಲಿ

Team Udayavani, Jan 2, 2020, 12:08 PM IST

2-January-7

ಮಾನ್ವಿ: ಗ್ರಾಮ ಪಂಚಾಯತಿಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಜೋಳ, ತೊಗರಿ ಖರೀದಿ ಕೇಂದ್ರ ತೆರೆಯಲು ಮತ್ತು ಕೃಷಿ ಉತ್ಪನ್ನ ಖರೀದಿಸಿದ ಮರುದಿನವೇ ರೈತರಿಗೆ ಹಣ ಪಾವತಿಸಲು ಆಗ್ರಹಿಸಿ ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ಸದಸ್ಯರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ತಾಲೂಕಿನಾದ್ಯಂತ ರೈತರು ಬೆಳೆಯುತ್ತಿರುವ ಸೋನಾ ಮಸೂರಿ ಭತ್ತಕ್ಕೆ ಭಾರೀ ಬೇಡಿಕೆ ಇದೆ. ಇತರೆ ಕೃಷಿ ಉತ್ಪನ್ನಗಳಾದ ಜೋಳ, ತೊಗರಿ, ಕಡಲೆ ಬೆಳೆಗಳನ್ನು ಈ ಭಾಗದ ರೈತರು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಆದರೆ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದಾಗಿದೆ. ಸರ್ಕಾರ ನಿಗದಿ ಮಾಡಿದ ಬೆಲೆಗಳು ರೈತರಿಗೆ ಸಿಗುತ್ತಿಲ್ಲ. ಇದರಿಂದ ತಾಲೂಕಿನ ರೈತರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಭತ್ತಕ್ಕೆ ಕ್ವಿಂಟಲ್‌ಗೆ 1,835 ರೂ. ಬೆಂಬಲ ಬೆಲೆ ನಿಗ ದಿ ಮಾಡಿದ್ದು, ಇದು ಅವೈಜ್ಞಾನಿಕ ವಾಗಿದೆ. ರೈತರಿಗೆ ಮಾಡಿದ ದ್ರೋಹವಾಗಿದೆ. ರಾಜ್ಯ ಸರ್ಕಾರದಿಂದ 200 ರೂ. ಪ್ರೋತ್ಸಾಹ ಧನ ಸೇರಿ ಒಂದು ಕ್ವಿಂಟಲ್‌ ಭತ್ತಕ್ಕೆ 2,035 ರೂ. ಸಿಗಬೇಕು. ಆದರೆ ಮಾರುಕಟ್ಟೆಯಲ್ಲಿ ಕ್ವಿಂಟಲ್‌ ಭತ್ತಕ್ಕೆ 1500 ರೂ. ಮಾತ್ರ ನೀಡಲಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ.

ತೊಗರಿ ಬೆಳೆಗೆ ಕ್ವಿಂಟಲ್‌ಗೆ 5,800 ರೂ. ಪ್ರೋತ್ಸಾಹ ಬೆಲೆ 6,200 ರೂ. ಒಟ್ಟು 12000 ರೂ. ರೈತರಿಗೆ ದೊರೆಯಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬೆಂಬಲ ಬೆಲೆ ಘೋಷಣೆ ಮಾಡಿ ಕೈ ತೊಳೆದುಕೊಂಡರೆ ಪ್ರಯೋಜನವಿಲ್ಲ. ಸರಕಾರ ನಿಗದಿ  ಮಾಡಿದ ಬೆಲೆಗೆ ಖರೀದಿ ಮಾಡಲೇಬೇಕೆಂದು ಖಾಸಗಿ ಮಧ್ಯವರ್ತಿಗಳಿಗೆ ಮತ್ತು ವರ್ತಕರಿಗೆ, ಖರೀದಿದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡುವ ಕಾಯ್ದೆ ಜಾರಿಗೆ ತರಬೇಕು. ಪ್ರಧಾನಿ ಮೋದಿ ಘೋಷಿಸಿದಂತೆ ಎಂ.ಎಸ್‌. ಸ್ವಾಮಿನಾಥನ್‌ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಲೆ ನಿಗದಿ ಮಾಡಬೇಕು. ಮಧ್ಯವರ್ತಿಗಳು ಮತ್ತು ವರ್ತಕರು, ಸರಕಾರ ನಿಗದಿ ಮಾಡಿದ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಸದಂತೆ ತಾಕೀತು ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾವಾರು ಕೃಷಿ ಉತ್ಪನ್ನದ ಆವಕ ಆಧರಿಸಿ ಒಂದು ತಿಂಗಳ ಮುಂಚಿತವಾಗಿ ಹಣವನ್ನು ಜಿಲ್ಲಾಧಿಕಾರಿ ಖಾತೆಗೆ ಜಮಾ ಮಾಡಬೇಕು. ರಾಜ್ಯ ಸರಕಾರ ಹೊರಡಿಸಿದ ಪ್ರಸ್ತಾವನೆಯಲ್ಲಿ ಭತ್ತಕ್ಕೆ ಪ್ರೋತ್ಸಾಹ ಧನದ ಉಲ್ಲೇಖ ಮಾಡಿಲ್ಲ. ತ್ವರಿಗತಿಯಲ್ಲಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಕೆಆರ್‌ಎಸ್‌ ತಾಲೂಕು ಅಧ್ಯಕ್ಷ ಮುದುಕಪ್ಪ ನಾಯಕ, ತಾಲೂಕು ಪ್ರಧಾನ ಕಾರ್ಯದರ್ಶಿ ಅಶೋಕ ನೀಲಗಲ್‌, ಹುಲಿಗೆಪ್ಪ ಸಿರವಾರ, ಆನಂದ ಭೋವಿ, ಮಲ್ಲಯ್ಯ ಗುಡದಿನ್ನಿ, ದಿಲೀಪ್‌ ಮಾನ್ವಿ, ಲಾಲಪ್ಪ ನಾಯ್ಕಕುರ್ಡಿ, ಯಲ್ಲಪ್ಪ ನಾಯಕ, ಈರೇಶ ಗುಡದಿನ್ನಿ, ರಮೇಶ ಸಿರವಾರ, ಹನುಮಂತ ನಾಯಕ, ಮುದುಕಪ್ಪ ನಾಯಕ ಗಣದಿನ್ನಿ ಇದ್ದರು.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.