ತುಮಕೂರು; ಕಾರು ಒಳಬಿಟ್ಟಿದ್ಯಾಕೆ-ಬೆಳ್ತಂಗಡಿ ಮೂಲದ ಖಡಕ್ ಐಪಿಎಸ್ ಅಧಿಕಾರಿ ಅನೂಪ್
2019ರ ಆಗಸ್ಟ್ ನಲ್ಲಿ ರಾಮನಗರ ಎಸ್ಪಿಯಾಗಿ ಅನೂಪ್ ಶೆಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿತ್ತು.
Team Udayavani, Jan 2, 2020, 12:59 PM IST
ತುಮಕೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಈ ವೇಳೆ ಸಚಿವ ವಿ.ಸೋಮಣ್ಣ ಕಾರನ್ನು ಮಠದೊಳಕ್ಕೆ ಬಿಟ್ಟ ಪೊಲೀಸರ ಮೇಲೆ ಎಸ್ಪಿ ಅನೂಪ್ ಶೆಟ್ಟಿ ಕೆಂಡಾಮಂಡಲರಾದ ಘಟನೆ ಗುರುವಾರ ನಡೆಯಿತು.
ಸಿದ್ದಗಂಗಾ ಮಠದ 2ನೇ ಗೇಟ್ ನಲ್ಲಿ ಸೋಮಣ್ಣ ಕಾರನ್ನು ಒಳಗೆ ಬಿಟ್ಟಿದ್ದಕ್ಕೆ, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಎಸ್ಪಿ ಅನೂಪ್ ಶೆಟ್ಟಿ, ಬ್ಯಾಡ್ಜ್ ಕಾಣಿಸುತ್ತಾ ನಿನಗೆ. ಒಂದು ರಿಹರ್ಸಲ್ ಬರಲ್ಲ. ಒಂದು ಮೀಟಿಂಗ್ ಗೆ ಬರುವ ಯೋಗ್ಯತೆ ಇಲ್ಲ. ಟೈಮ್ ಪಾಸ್ ಮಾಡೋಕೆ ಬರುತ್ತೀರಾ ಇಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಯಾವುದೇ ಗಾಡಿ(ವಾಹನ) ಬಿಡಬಾರದು ಎಂದು ಹತ್ತು ಸಲ ಹೇಳಿದ್ದೀನಿ. ಮೂರು ದಿನಗಳಿಂದ ಏನು ಕಸ ಗುಡಿಸುತ್ತಿದ್ದೇವಾ ಇಲ್ಲಿ. ಅಯೋಗ್ಯ…ನಮಗೆ ಮಾಡೋಕೆ ಬೇರೆ ಕೆಲಸ ಇಲ್ವಾ? ಗಾಡಿ ಬಿಡಬಾರದು ಅಂದರೆ ಬಿಡಬಾರದು ಅಷ್ಟೇ ಎಂದು ತರಾಟೆಗೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ನಮ್ಮವರದ್ದೇ ಸ್ವಲ್ಪ ಜಾಸ್ತಿಯಾಯ್ತು:
ಮಠದಿಂದ ಹೊರ ಹೋಗುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸೋಮಣ್ಣ, ನಾನು ಎಸ್ ಪಿಜಿಯವರಿಗೆ ಮನವರಿಕೆ ಮಾಡುತ್ತಿದ್ದೆ. ಆದರೆ ನಮ್ಮವರದ್ದೇ (ಅನೂಪ್ ಶೆಟ್ಟಿ) ಸ್ವಲ್ಪ ಜಾಸ್ತಿಯಾಯ್ತು ಎಂದು ಪರೋಕ್ಷವಾಗಿ ಅಸಮಧಾನವ್ಯಕ್ತಪಡಿಸಿದರು.
ಬೆಳ್ತಂಗಡಿ ಮೂಲದ ಖಡಕ್ ಐಪಿಎಸ್ ಅಧಿಕಾರಿ ಅನೂಪ್ ಶೆಟ್ಟಿ:
2013ರ ಐಪಿಎಸ್ ಬ್ಯಾಚ್ ಅಧಿಕಾರಿ ಅನೂಪ್ ಶೆಟ್ಟಿ ದಕ್ಷಿಣ ಕನ್ನಡದ ಬೆಳ್ತಂಗಡಿ ಮೂಲದವರು. ಈ ಹಿಂದೆ ಕೊಪ್ಪಳದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಬೆಂಗಳೂರಿನ ಸಿಐಡಿಯಲ್ಲಿ ಕೆಲಸ ನಿರ್ವಹಿಸಿದ್ದರು. 2019ರ ಆಗಸ್ಟ್ ನಲ್ಲಿ ರಾಮನಗರ ಎಸ್ಪಿಯಾಗಿ ಅನೂಪ್ ಶೆಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು