ಅಕ್ರಮ ಸಾಗುವಳಿ ಭೂಮಿ ತೆರವಿಗೆ ಆಗ್ರಹಿಸಿ ಧರಣಿ


Team Udayavani, Jan 2, 2020, 3:55 PM IST

2-January-22

ಸೊರಬ: ಸ್ಮಶಾನ ಭೂಮಿಯಲ್ಲಿ ಅನಧಿಕೃತ ಸಾಗುವಳಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ತಾಲೂಕಿನ ಕೋಡಕನಕಟ್ಟೆ ಗ್ರಾಮಸ್ಥರು ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ ಹೊಸಬಾಳೆ ಗ್ರಾಪಂ ಸದಸ್ಯ ಕೆ.ವಿ. ಸತ್ಯನಾರಾಯಣ ಮಾತನಾಡಿ, ಗ್ರಾಮದ ಸರ್ವೆ ನಂ. 31ರ 6 ಎಕರೆ ಜಾಗವನ್ನು ಸ್ಮಶಾನವನ್ನಾಗಿ ತಲೆ ತಲಾಂತರದಿಂದ ಗ್ರಾಮಸ್ಥರು ಉಪಯೋಗಿಸುತ್ತಿದ್ದರು.

ಹೊಸಬಾಳೆ ಗ್ರಾಪಂನಲ್ಲೂ ಮುಕ್ತಿಧಾಮ ಹೆಸರಿನಲ್ಲಿ ಅಭಿವೃದ್ಧಿಪಡಿಸಲು ಈ ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಹೊಸಬಾಳೆಯ ನಿವಾಸಿಯೊಬ್ಬರು ಫಾರಂ. 53ನ್ನು ಇದೇ ಜಾಗಕ್ಕೆ ಸಲ್ಲಿದ್ದು, 2004-05ರಲ್ಲಿ ಸಾಗುವಳಿ ಮಾಡಲು ಪ್ರಯತ್ನಿಸಿದಾಗ ತಡೆ ಹಿಡಿದು, ಸ್ಮಶಾನ ಭೂಮಿಗೆ ಮಂಜೂರು ಮಾಡುವಂತೆ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಗಿತ್ತು ಎಂದರು.

ಇತ್ತೀಚೆಗೆ ಗ್ರಾಮದ ವ್ಯಕ್ತಿಯೊಬ್ಬರು ಅಕ್ರಮವಾಗಿ ಸಾಗುವಳಿ ಮಾಡುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ಕುಮ್ಮಕ್ಕಿದೆ ಎಂದು ಗಂಭೀರ
ಆರೋಪ ಮಾಡಿದರು. ಇದಲ್ಲದೆ, ಗ್ರಾಮಸ್ಥರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬೆದರಿಕೆಯನ್ನೂ ಹಾಕಲಾಗಿತ್ತು. ಸ್ಮಶಾನ ಭೂಮಿಯನ್ನು ಪರಭಾರೆ ಮಾಡಬಾರದು ಎಂದು ಆಗ್ರಹಿಸಿ ಸ್ಥಳೀಯ ತಹಶೀಲ್ದಾರ್‌ ಅವರಿಗೆ ನಾಲ್ಕೈದು ಭಾರಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ಮಾಹಿತಿ ಹಕ್ಕಿನಡಿ ದಾಖಲೆಗಳನ್ನು ಕೇಳಿದರೂ ಮಾಹಿತಿ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಕೂಡಲೇ ಗ್ರಾಮದ ಸರ್ವೆ ನಂ. 31ರ ಜಮೀನನಲ್ಲಿ ಅನಧಿಕೃತ ಸಾಗುವಳಿ ತೆರವುಗೊಳಿಸಿ, ಸ್ಮಶಾನಕ್ಕೆ ಕಾಯ್ದಿರಿಸಬೇಕು ಮತ್ತು ಅನಧಿಕೃತ ದಾಖಲೆಗಳನ್ನು ಸೃಷ್ಟಿಸಿದ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದ ಗ್ರಾಮಸ್ಥರು, ಸ್ಥಳಕ್ಕೆ ಜಿಲ್ಲಾಧಿಕಾರಿ
ಆಗಮಿಸಿ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಗ್ರಾಪಂ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷೆ ಪದ್ಮಶ್ರೀ, ಸದಸ್ಯ ಜಿ.ವೈ. ಪ್ರಸಾದ್‌, ಗ್ರಾಮಸ್ಥರಾದ ಕೆ.ಟಿ. ಶಿವಾನಂದ, ಸತೀಶ್‌ ಆಚಾರಿ, ಕೃಷ್ಣಮೂರ್ತಿ ಭಟ್‌, ನಾಗರಾಜ ಪಟೇಲ್‌, ಅಶೋಕ ಮೇಸ್ತ್ರಿ, ರಘು ನಾಡಿಗ್‌, ಉದಯ್‌ ಸೇರಿದಂತೆ ನೂರಾರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸ್ಥಳಕ್ಕೆ ಎ.ಸಿ. ಭೇಟಿ: ಪ್ರತಿಭಟನಾ ಸ್ಥಳಕ್ಕೆ ಸಾಗರ ಉಪ ವಿಭಾಗಾಧಿ ಕಾರಿ ನಾಗರಾಜ್‌ ಧರಣಿ ನಿರತರ ಅಹವಾಲನ್ನು ಸ್ವೀಕರಿಸಿ, ಕೋಡನಕಟ್ಟೆ ಗ್ರಾಮದಲ್ಲಿನ ವಿವಾದಿತ ಜಾಗದ ಕುರಿತು ಸಂಬಂಧಪಟ್ಟವರಿಂದ ವರದಿ ತರಿಸಿಕೊಳ್ಳಲಾಗುವುದು. ಶೀಘ್ರದಲ್ಲಿಯೇ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಸದ್ಯ ಸ್ಥಳದಲ್ಲಿ ನಾಮಫಲಕವನ್ನು ಅಳವಡಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು. ತಹಶೀಲ್ದಾರ್‌ ಪಟ್ಟರಾಜ ಗೌಡ ಇದ್ದರು.

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.