ಸ್ಮಶಾನ ಒತ್ತುವರಿ ದೂರು: ಪರಿಶೀಲನೆ
Team Udayavani, Jan 2, 2020, 4:22 PM IST
ಬಂಗಾರಪೇಟೆ: ತಾಲೂಕಿನ ಸಿಂಗರಹಳ್ಳಿ ಗ್ರಾಮದಲ್ಲಿ ಸ್ಮಶಾನ ಒತ್ತುವರಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ದೂರಿನ ಮೇರೆಗೆ ತಹಶೀಲ್ದಾರ್ ಕೆ.ಬಿ. ಚಂದ್ರಮೌಳೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನ ಸಿಂಗರಹಳ್ಳಿ ಸರ್ವೆ ನಂ.27ರಲ್ಲಿ 17 ಎಕರೆ ಗೋಮಾಳ ಇದೆ. ಇದರಲ್ಲಿ ಸ್ಮಶಾನಕ್ಕೆ ಸ್ಥಳ ನಿಗದಿಯಾಗಿದೆ. ಆದರೆ, ಇತ್ತೀಚಿಗೆ ಮಂಜುನಾಥ್ ಅವರ ಕುಟುಂಬದವರ ಸ್ಮಶಾನಕ್ಕೆ ಬೇಲಿ ಹಾಕಿರುವುದರಿಂದ ಗ್ರಾಮದಲ್ಲಿ ನಿಧನರಾದವರನ್ನು ಶವ ಸಂಸ್ಕಾರ ಮಾಡಲು ಸ್ಥಳವಿಲ್ಲ ಎಂದು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಅನೇಕ ಬಾರಿ ಮನವಿ ಸಲ್ಲಿಸಿ, ನ್ಯಾಯಕ್ಕಾಗಿ ಒತ್ತಾಯಿಸಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಕೆ.ಬಿ.ಚಂದ್ರಮೌಳೇಶ್ವರ್, ಸ್ಥಳಕ್ಕೆ ಆಗಮಿಸಿ ಸ್ಮಶಾನಭೂಮಿ ಒತ್ತುವರಿ ಮಾಡಿಕೊಳ್ಳಲಾಗಿದ್ದ ಮಂಜುನಾಥ್ ಹಾಗೂ ಗ್ರಾಮಸ್ಥರ ವಿಚಾರಣೆ ಮಾಡಿ, ಮೂಲ ದಾಖ ಲಾತಿಗಳನ್ನು ಪರಿಶೀಲನೆ ಮಾಡಿ, ಮೂರು ದಿನಗಳೊಳಗೆ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.
ಈ ವೇಳೆ ಕಂದಾಯ ನಿರೀಕ್ಷಕ ಗೋಪಾಲ್, ಪಿಡಿಒ ಸರಸ್ವತಿ, ಗ್ರಾಪಂ ಸದಸ್ಯ ಅಂಬೇಡ್ಕರ್, ನಾರಾಯಣ, ಮಂಜುನಾಥ್, ಮಧು ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ