ಗಣಪತಿ ಕೆರೆ ಚಿತ್ರಣ ಶೀಘ್ರ ಬದಲು: ಶಾಸಕ ಹಾಲಪ್ಪ


Team Udayavani, Jan 2, 2020, 6:14 PM IST

2-January-34

ಸಾಗರ: ಬಿಜೆಪಿ ಪಕ್ಷದ ವಿವಿಧ ಪ್ರಮುಖರು, ಜನಪ್ರತಿನಿಧಿಗಳು ನೋಡ ನೋಡುತ್ತಿದ್ದಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೊಡೆಯುವವವರಂತೆ ಕೈ ಎತ್ತಿದರು. ಒಂದು ಕ್ಷಣ ಶಾಸಕ ಹಾಲಪ್ಪ ಕೂಡ ಬೆದರಿದವರಂತೆ ದೇಹ ಕುಗ್ಗಿಸಿದರು. ಕೆಲ ಕ್ಷಣಗಳಲ್ಲಿಯೇ ನೋಡುತ್ತಿದ್ದವರಿಗೆ ಹಿರಿಯರಾದ ಕಾಗೋಡು ಹಾಲಪ್ಪ ಅವರಿಗೆ ಬೆನ್ನು ತಟ್ಟಿದ್ದು, ಹಸ್ತಲಾಘವ ಕೊಟ್ಟಿದ್ದು ಮತ್ತು ಕೆಲ ಹೆಜ್ಜೆ ಹೆಗಲ ಮೇಲೆ ಕೈ ಹಾಕಿ ಗಣಪತಿ ಕೆರೆ ದಂಡೆಯ ಮೇಲೆ ಸಾಗಿದ ಅಪರೂಪದ ದೃಶ್ಯ ಕಾಣಸಿಕ್ಕಿತು.

ಈ ಘಟನೆ ಮಂಗಳವಾರ ಸಂಜೆ ಶಾಸಕ ಎಚ್‌.ಹಾಲಪ್ಪ ಗಣಪತಿ ಕೆರೆ ಸುತ್ತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಲು ತೆರಳಿದ್ದ ಸಮಯದಲ್ಲಿ ನಡೆದಿದ್ದು, ಆಕಸ್ಮಿಕವಾಗಿ ಎದುರಾದ ಕಾಗೋಡು ಹೃದಯಪೂರ್ವಕವಾಗಿ ಹಾಲಿ ಶಾಸಕರಿಗೆ ಅಭಿನಂದನೆ ಹೇಳಿದ್ದು ಗಮನ ಸೆಳೆಯಿತು.

ಕಾಗೋಡು ಅವರಿಗೆ ಗಣಪತಿ ಕೆರೆ ಅಭಿವೃದ್ಧಿ ಕುರಿತಾಗಿ ಮಾಹಿತಿ ನೀಡಿದ ಹಾಲಪ್ಪ, ಮುಂದಿನ ಹದಿನೈದು ದಿನಗಳ ಒಳಗೆ ಗಣಪತಿ ಕೆರೆಯ ಚಿತ್ರಣವನ್ನೇ ಬದಲಾಯಿಸುತ್ತೇನೆ. ಈಗಾಗಲೇ ಕೆರೆಯ ಸುತ್ತ ವಾಯುವಿಹಾರ ನಡೆಸಲು ಸುಸಜ್ಜಿತವಾದ ಕಾಮಗಾರಿ ನಡೆಸಲಾಗುತ್ತಿದೆ. ಬಿಎಚ್‌ ರಸ್ತೆ ಪಕ್ಕದಲ್ಲಿ ಇಂದಿರಾ ಗಾಂಧಿ ಕಾಲೇಜು ಎದುರು ಭಾಗದಲ್ಲಿರುವ ಕೆರೆಯ ಜಾಗವನ್ನು ಈಗಾಗಲೇ ಸಮತಟ್ಟು ಮಾಡಲಾಗುತ್ತಿದೆ. ಈ ಕೆರೆಗೆ ಮುಖ್ಯವಾಗಿ ಹರಿದು ಬರುತ್ತಿರುವ ಎಸ್‌ ಎನ್‌ ನಗರ ಕೆರೆಯ ನೀರಿನ ತೋಡನ್ನು ಮುಚ್ಚುವುದಿಲ್ಲ ಎಂದರು.

ಕೆರೆ ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಮುಂದಿನ ವಾರದಲ್ಲಿ ಈ ಭಾಗದಲ್ಲಿ ಕೆರೆ ಹಬ್ಬ ಆಯೋಜಿಸಲು ಕೂಡ ಚಿಂತಿಸಲಾಗಿದೆ. ಆ ಮೂಲಕ ಜನ ಸಾಗರದ ಅಪರೂಪದ ಗಣಪತಿ ಕೆರೆಯನ್ನು ವೈಭವೋಪೇತ ಮಾದರಿಯಲ್ಲಿ ನೋಡುವಂತಾಗಬೇಕು ಎಂಬುದು ನನ್ನ ಬಯಕೆ ಎಂದರು.

ಒಂದು ಹಂತದಲ್ಲಿ ಕಾಗೋಡು ಹಾಲಪ್ಪ ಅವರ ಬೆನ್ನು ತಟ್ಟಿ, ಉತ್ತಮವಾದ ಕೆಲಸವನ್ನು ಮಾಡುತ್ತಿದ್ದೀರಿ. ಒಳ್ಳೆಯ ಕೆಲಸ ಮಾಡಿ. ಇಲ್ಲಿ ಸಮತಟ್ಟು ಮಾಡಲು ತರಿಸಿರುವ ಮಣ್ಣು ಅತ್ಯಂತ ಯೋಗ್ಯವಾದುದಾಗಿದೆ. ಇಂತಹ ಗುಣಮಟ್ಟದ ಕಾಮಗಾರಿ ಮಾಡುವುದಕ್ಕೆ ನಮ್ಮ ಬೆಂಬಲವಿದೆ ಎಂದರು. ನಗರಸಭೆಯ ಮುಖ್ಯ ಇಂಜಿನಿಯರ್‌ ಎಚ್‌. ನಾಗಪ್ಪ. ನಗರಸಭೆ ಸದಸ್ಯರಾದ ಟಿ.ಡಿ. ಮೇಘರಾಜ್‌, ಆರ್‌. ಶ್ರೀನಿವಾಸ್‌ ಗಣೇಶ್‌ ಪ್ರಸಾದ್‌, ವಿಶ್ವ ಹಿಂದೂ ಪರಿಷತ್‌ ಅಧ್ಯಕ್ಷ ಐ.ವಿ. ಹೆಗಡೆ, ಲಿಂಗರಾಜ್‌, ಬಿ.ಟಿ. ರವೀಂದ್ರ, ವಿನಾಯಕ ರಾವ್‌ ಮನೇಘಟ್ಟ, ಅರುಣ್‌ ಕುಗ್ವೆ ಇನ್ನಿತರರು ಇದ್ದರು.

ದಿನದ ಬೆಳಗಿನ ಸಮಯದಲ್ಲಿ ನಡೆದ ಮಲೆನಾಡು ರೈಲ್ವೆ ಹೋರಾಟ ಸಮಿತಿಯವರ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್‌ನ ಕಾಗೋಡು ಹಾಗೂ ಇತರ ನಾಯಕರು ಶಾಸಕ ಹಾಲಪ್ಪ ಅವರನ್ನು ಹಿಗ್ಗಾಮುಗ್ಗಾ ಟೀಕಿಸಿದ್ದನ್ನು ನೋಡಿದ ಜನ ಸಂಜೆ ಈ ಇಬ್ಬರ ನಡುವೆ ಪ್ರೀತಿ ಉಕ್ಕಿ ಹರಿದಿದ್ದನ್ನು ನೋಡಿ ಗೊಂದಲಕ್ಕೊಳಗಾದರು ಎಂಬ ವಿಶ್ಲೇಷಣೆ ಪ್ರತ್ಯಕ್ಷದರ್ಶಿಗಳಿಂದ ಕೇಳಿ ಬಂದಿತು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.