ಬಾಹ್ಯಾಕಾಶ ಸಂಶೋಧನೆ ಎನ್ಐಟಿಕೆ -ಇಸ್ರೋ ಒಪ್ಪಂದ
Team Udayavani, Jan 3, 2020, 6:18 AM IST
ಸುರತ್ಕಲ್: ಸ್ಪೇಸ್ ಟೆಕ್ನಾಲಜಿ ಅಪ್ಲಿಕೇಶನ್ ಕ್ಷೇತ್ರದಲ್ಲಿ ಜಂಟಿಯಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕಾಗಿ ಇಲ್ಲಿನ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿಕೆ) ಮತ್ತು ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ನಿರ್ಧರಿಸಿವೆ. ಈ ಸಂಬಂಧ ಜ. 3ರಂದು ಇಸ್ರೋ ಸಿಬಿಪಿಒ ವಿಭಾಗದ ನಿರ್ದೇಶಕ ಪಿ. ವೆಂಕಟಕೃಷ್ಣನ್ ಮತ್ತು ಎನ್ಐಟಿಕೆ ನಿರ್ದೇಶಕ ಪ್ರೊ| ಉಮಾಮಹೇಶ್ವರ ರಾವ್ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದರ ಅಂಗವಾಗಿ ಇಸ್ರೋ ಸಂಸ್ಥೆಯು ಎನ್ಐಟಿಕೆಯಲ್ಲಿ ರೀಜನಲ್ ಅಕಾಡೆಮಿಕ್ ಸೆಂಟರ್ ಫಾರ್ ಸ್ಪೇಸ್ (ಆರ್ಎಸಿ-ಎಸ್) ಸ್ಥಾಪಿಸಲಿದೆ. ಸ್ಥಳೀಯ ಅಧ್ಯಯನ ಕೇಂದ್ರ ಸ್ಥಾಪನೆ ಜತೆಗೆ ಭವಿಷ್ಯದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಉನ್ನತ ತಂತ್ರಜ್ಞಾನ, ಸಂಶೋಧನೆಗೆ ಮುಂದಾಗುವ ನಿಟ್ಟಿನಲ್ಲಿ ಈ ಮಹತ್ವದ ಹೆಜ್ಜೆ ಇರಿಸಲಾಗಿದೆ.
ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಪುದುಚೇರಿ, ಲಕ್ಷದ್ವೀಪ ರಾಜ್ಯಗಳನ್ನೊಳಗೊಂಡಂತೆ ಈ ಕೇಂದ್ರ ಸಂಶೋಧನೆ, ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ. ಸಂಶೋಧನೆ ಮತ್ತು ಅಭಿವೃದ್ಧಿಗೆ ಪೂರಕವಾಗಿ ಇಸ್ರೋ 2 ಕೋಟಿ ರೂ. ಅನುದಾನ ಒದಗಿಸಲಿದೆ ಮಾತ್ರವಲ್ಲದೆ ಸಂಸ್ಥೆಯ ವಿಜ್ಞಾನಿಗಳು ಎನ್ಐಟಿಕೆ ಮತ್ತು ಪಾಲುದಾರ ಶಿಕ್ಷಣ ಸಂಸ್ಥೆಗಳಿಗೆ ಆಗಮಿಸಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ.
ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಮತ್ತು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸುವ ಉದ್ದೇಶವನ್ನು ಈ ಒಪ್ಪಂದ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.