ಕಿರುಕುಳ: ಶಾಲಾ ವಿದ್ಯಾರ್ಥಿ ಆತ್ಮಹತ್ಯೆ ಯತ್ನ


Team Udayavani, Jan 4, 2020, 3:00 AM IST

kirikula

ಎಚ್‌.ಡಿ.ಕೋಟೆ: ಮೊರಾರ್ಜಿ ವಸತಿ ಶಾಲೆಯಲ್ಲಿ ಸಮಸ್ಯೆಗಳ ಬಗ್ಗೆ ಧ್ವನಿಎತ್ತಿದ ನಮ್ಮ ವಿರುದ್ಧ ವಸತಿ ಶಾಲೆಯ ಪ್ರಾಚಾರ್ಯರು ಸೇರಿದಂತೆ ಆಡಳಿತ ಮಂಡಳಿ ವಿನಾಃ ಕಾರಣ ದೂಷಣೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ 10ನೇ ತರಗತಿ ವಿದ್ಯಾರ್ಥಿ ಶಾಲೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ. ತಾಲೂಕಿನ ಕೆ.ಬೆಳತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಿದ್ದಪ್ಪಾಜಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ. ಸಹ ವಿದ್ಯಾರ್ಥಿಗಳು ಅವನ ಮನವೊಲಿಸಿ ಕರೆತಂದಿದ್ದಾರೆ.

ನಡೆದಿದ್ದು ಇಷ್ಟು: ತಾಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದಿನಚರಿಯಂತೆ ಊಟ ತಿಂಡಿ ನೀಡುತ್ತಿಲ್ಲ, ವಾರದಲ್ಲಿ 2ಭಾರಿ ನೀಡಬೇಕಾದ ಮೊಟ್ಟೆ ತಿಂಗಳಿಗೊಮ್ಮೆ ನೀಡುತ್ತಾರೆ. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬದಲಾಗಿ ಬಾಳೆಹಣ್ಣು ನೀಡುತ್ತಿಲ್ಲ, ಕಳೆದ ಒಂದುವರೆ ತಿಂಗಳಿಂದ ರಾತ್ರಿ ಮುದ್ದೆ ರದ್ದು ಪಡಿಸಿದ್ದಾರೆ.

ಶುಚಿತ್ವ ಇಲ್ಲ, ಶಾಲೆಯಲ್ಲಿ ಪ್ರಾಚಾರ್ಯರಾದ ಶ್ರೀದೇವಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದಲೇ ಕೆಲಸ ಕಾರ್ಯ ಮಾಡಿಸುತ್ತಾರೆ. ಶಾಲೆಗೆ ಸುಮಾರು 40ರಿಂದ 50ವಿದ್ಯಾರ್ಥಿಗಳು ಗೈರಾಗುತ್ತಿದ್ದು, ಬಯೋಮೆಟ್ರಿಕ್‌ ಅವ್ಯವಸ್ತೆಯಿಂದ ಆಹಾರ ದುರುಪಯೋಗ ಪಡಿಸಿಕೊಳ್ಳುತ್ತಿದಾರೆ. ಊಟ ತಿಂಡಿ ಶುಚಿ ರುಚಿ ಇಲ್ಲ. ವಿದ್ಯಾರ್ಥಿಗಳು ನಿಯಮಾವಳಿಯಂತೆ ಆಹಾರ ನೀಡಬೇಕೆಂದು ಒತ್ತಾಯಿಸಿದ ವಿದ್ಯಾರ್ಥಿಗಳನ್ನು ಟಾರ್ಗೆಟ್‌ ಮಾಡಿ ಹಿಂಸಿಸುತ್ತಾರೆ.

ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಡುವೆ ಸಂಬಂಧಕಲ್ಪಿಸಿ ಅಸಭ್ಯವಾಗಿ ಮಾನಾಡುತ್ತಾರೆ ಎಂದು ಪ್ರಾಚಾರ್ಯರನ್ನು ವರ್ಗಾಯಿಸುವವರೆಗೆ ಶಾಲೆಗೆ ಹೋಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದು ತರಗತಿ ಬಹಿಷ್ಕರಿಸಿ ಮಧ್ಯಾಹ್ನದ ತನಕ ಶಾಲೆಗೆ ತೆರಳಲಿಲ್ಲ. ಬಳಿಕ ಮಧ್ಯಾಹ್ನ ವೇಳೆಗೆ ವಿಷಯ ತಿಳಿದು ಮಾಹಿತಿ ಪಡೆದುಕೊಂಡ ಮಾಧ್ಯಮ ಪ್ರತಿನಿಧಿಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿ ಸ್ಥಳಕ್ಕೆ ಭೇಟಿ ಮಾಡಿಸುವ ಭರವಸೆ ನೀಡಿದಾಗ ವಿದ್ಯಾರ್ಥಿಗಳು ತರಗತಿ ಹಾಜರಾಗಿದ್ದರು.

ಹೊಂದಾಣಿಕೆ ಕೊರತೆ: ಮೊರಾರ್ಜಿ ವಸತಿ ಶಾಲೆಯ ಪ್ರಚಾರ್ಯರು ಸೇರಿದಂತೆ ಶಿಕ್ಷಕರು ಮತ್ತು ಇರುವ ಸಿಬ್ಬಂ ಗಳ ಜೊತೆಗೆ ವಿದ್ಯಾರ್ಥಿಗಳಲ್ಲಿ ಹೊಂದಾಣಿಕೆ ಕೊರತೆಯಿದ್ದು, ಆರೋಪ ಪ್ರತ್ಯಾರೋಪಗಳಲ್ಲಿ ವೈಷಮ್ಯದ ದಿನಗಳು ಉರುಳುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಾಮರಸ್ಯ ಮೂಡಿಸಲು ಸಂಬಂಧಿಸಿದ ಅಧಿಕಾರಿಗಳು ಮುಂದಾಗದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ.

ವಿದ್ಯಾರ್ಥಿಗಳಲ್ಲಿ ಕಜ್ಜಿ ಸೋಂಕು: ವಸತಿ ಶಾಲೆಯ ಆಶುಚಿತ್ವದ ಕಾರಣದಿಂದ ಶಾಲೆಯ ಬಹುಸಂಖ್ಯೆ ವಿದ್ಯಾರ್ಥಿಗಳ ದೇಹದಲ್ಲಿ ಕಜ್ಜಿ ಕಂಡು ಬಂದಿದೆ. ಇದು ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಸಾಧ್ಯತೆ ಇದೆ. ಕೂಡಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಚಿಕಿತ್ಸೆ ನೀಡಬೇಕಿದೆ.

ಸುಳ್ಳು ಆರೋಪ: ವಿದ್ಯಾರ್ಥಿಗಳು ಮನಬಂದಂತೆ ಸುತ್ತಾಡುತ್ತಾರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಶಾಲೆಯಿಂದ ಹೊರಹೋಗದಂತೆ ವಿದ್ಯಾರ್ಥಿಗಳಿಗೆ ನಿಬಂಧನೆ ಏರಿದ್ದಕ್ಕೆ ಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮೊರಾರ್ಜಿ ಶಾಲೆಯ ಪ್ರಾಚಾರ್ಯೆ ಶ್ರೀದೇವಿ ತಿಳಿಸಿದರು. ಊಟ ತಿಂಡಿಯಲ್ಲಿ ನಿಯಮದಂತೆ ಪಾಲನೆಯಾಗುತ್ತಿದೆ ಎಂದು ಅವರು ಪ್ರತಿಕ್ರಿಯಿಸುತ್ತಿದ್ದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಾಚಾರ್ಯರ ಸಮ್ಮುಖದಲ್ಲಿಯೇ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರಾಚಾರ್ಯರ ಹೇಳಿಕೆ ಶುದ್ಧ ಶುಳ್ಳು ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.