ತಮಿಳುನಾಡು ವಿಧಾನಸಭೆಯಲ್ಲಿ ಸ್ಪೀಕರ್ ಅಧಿಕಾರ ತೋರಿಸಿದ್ದ ಮಾಜಿ ಸ್ಪೀಕರ್ ಪಾಂಡಿಯನ್ ವಿಧಿವಶ

ಡಿಎಂಕೆ ತೊರೆದ ನಂತರ ಎಂಜಿಆರ್ ಜತೆ ಎಐಎಡಿಎಂಕೆ ಸ್ಥಾಪಿಸುವಲ್ಲಿ ಮುಂಚೂಣಿಯಲ್ಲಿದ್ದರು.

Team Udayavani, Jan 4, 2020, 4:53 PM IST

Ex-speakar

ಚೆನ್ನೈ:ಸ್ಪೀಕರ್ ಅಂದ್ರೆ ರಬ್ಬರ್ ಸ್ಟ್ಯಾಂಪ್ ಅಲ್ಲ. ಆಕಾಶದೆತ್ತರ ಅಧಿಕಾರ ಇದೆ ಎಂದು ಹೇಳಿ ತೋರಿಸಿಕೊಟ್ಟಿದ್ದ ತಮಿಳುನಾಡು ವಿಧಾನಸಭೆಯ ಮಾಜಿ ಸ್ಪೀಕರ್, ಆಡಳಿತಾರೂಢ ಎಐಎಡಿಎಂಕೆ ಹಿರಿಯ ಮುಖಂಡ ಪಿಎಚ್ ಪಾಂಡಿಯನ್(74ವರ್ಷ) ಶನಿವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಂಡಿಯನ್ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಪಾಂಡಿಯನ್ ನಿಕಟವರ್ತಿ ತಿಳಿಸಿರುವುದಾಗಿ ವರದಿ ಹೇಳಿದೆ.

ಎಐಎಡಿಎಂಕೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದ ಪಾಂಡಿಯನ್, ಡಿಎಂಕೆ ತೊರೆದ ನಂತರ ಎಂಜಿಆರ್ ಜತೆ ಎಐಎಡಿಎಂಕೆ ಸ್ಥಾಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಪಾಂಡಿಯನ್ ನಾಲ್ಕು ಬಾರಿ ಶಾಸಕರಾಗಿದ್ದರು. ಎಂಜಿಆರ್ ಕಾಲಾವಧಿಯಲ್ಲಿ (1985-89) ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1999ರಲ್ಲಿ ತಿರುನೆಲ್ವೇಲಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಸಂಪಾದಕರಿಗೆ ಜೈಲುಶಿಕ್ಷೆ ವಿಧಿಸಿದ್ದ ಸ್ಪೀಕರ್!

ಸ್ಪೀಕರ್ ಗೆ ಬಾನೆತ್ತರದ ಅಧಿಕಾರವಿದೆ ಎಂದು ಪಾಂಡಿಯನ್ ಹೇಳುತ್ತಿದ್ದರು. ತಮ್ಮ ಅಧಿಕಾರವನ್ನು ಚಲಾಯಿಸಿದ್ದರು ಕೂಡಾ. ತಮಿಳು ವಾರ ಪತ್ರಿಕೆ ವಿಕಟನ್ ನಲ್ಲಿ ಎಂಜಿಆರ್ ಅವರನ್ನು ಟೀಕಿಸುವ ವ್ಯಂಗ್ಯಚಿತ್ರವನ್ನು ಪ್ರಕಟಿಸಿತ್ತು. ಸ್ಪೀಕರ್ ಪಾಂಡಿಯನ್ ಅವರು ಪತ್ರಿಕಾ ಸಂಪಾದಕರಿಗೆ ನೋಟಿಸ್ ಜಾರಿ ಮಾಡಿದ್ದರು.

ಸಂಪಾದಕ ಬಾಲಸುಬ್ರಮಣಿಯನ್ ಅವರು ಸ್ಪೀಕರ್ ಅವರನ್ನು ಭೇಟಿಯಾಗುವ ಮೊದಲೇ ಕ್ಷಮೆಯಾಚಿಸುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಬಾಲಸುಬ್ರಮಣಿಯನ್ ಅದನ್ನು ನಿರಾಕರಿಸಿದ್ದರು. ನಂತರ ಸ್ಪೀಕರ್ ಪಾಂಡಿಯನ್ ಅವರು ಸಂಪಾದಕ ಬಾಲಸುಬ್ರಮಣಿಯನ್ ಗೆ ಮೂರು ತಿಂಗಳ ಜೈಲು ಶಿಕ್ಷೆ ನೀಡಿ ಆದೇಶ ನೀಡಿದ್ದರು. ಈ ಘಟನೆ 80ರ ದಶಕದಲ್ಲಿ ಮಾಧ್ಯಮಗಳಲ್ಲಿ ಹೆಡ್ ಲೈನ್ ಆಗಿತ್ತು ಎಂದು ವರದಿ ವಿವರಿಸಿದೆ.

ಈ ವಿಷಯ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸ್ಪೀಕರ್ ಆಗಿ ನೋಟಿಸ್ ಜಾರಿ ಮಾಡಿದ್ದೇನೆ. ಆದರೆ ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದು, ಸ್ಪೀಕರ್ ಆದವರಿಗೆ ಆಕಾಶದೆತ್ತರ ಅಧಿಕಾರವಿದೆ ಎಂದು ವಾದಿಸಿದ್ದರು.

ಎಂಜಿಆರ್ ನಿಧನದ ನಂತರ ಪಾಂಡಿಯನ್ ಎಂಜಿಆರ್ ಪತ್ನಿ ಜಾನಕಿ ರಾಮಚಂದ್ರನ್ ಅವರ ಬೆಂಬಲಕ್ಕೆ ನಿಂತಿದ್ದರು. ಆದರೆ ನಂತರ ಎಐಎಡಿಎಂಕೆ ಜೆ.ಜಯಲಲಿತಾ ಅವರ ಹಿಡಿತಕ್ಕೆ ಹೋದ ಮೇಲೆ ತಮ್ಮ ನಿಷ್ಠೆಯನ್ನು ಜಯಲಲಿತಾರತ್ತ ಬದಲಾಯಿಸಿಕೊಂಡಿದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.