ಕುಂದಾಪುರ ನಗರಕ್ಕೆ ಇನ್ನು 24 ತಾಸು ನೀರು

ಇನ್ನು ಮೂರು ತಿಂಗಳಲ್ಲಿ ಕೋಡಿ ಟ್ಯಾಂಕ್‌ ಪೂರ್ಣ

Team Udayavani, Jan 5, 2020, 5:35 AM IST

Water-t

ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ದಿನದ 24 ಗಂಟೆ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ನಡೆಯುತ್ತಿರುವ ನೀರಿನ ಟ್ಯಾಂಕ್‌ ಹಾಗೂ ಪೈಪ್‌ಲೈನ್‌ ಕಾಮಗಾರಿ ಇನ್ನು 3 ತಿಂಗಳಲ್ಲಿ ಪೂರ್ಣವಾಗುವ ನಿರೀಕ್ಷೆಯಿದೆ.

ಕೋಡಿಯಲ್ಲೊಂದು ಟ್ಯಾಂಕ್‌ ಕಾಮಗಾರಿ ಪೂರ್ಣವಾದರೆ ಕುಂದಾಪುರದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಬಹುದು ಎಂಬ ಆಶಾಭಾವ ಜನತೆಯಲ್ಲಿದೆ. ಕೋಡಿ ಭಾಗದ ಜನತೆ ಹಲವು ಸಮಯದಿಂದ ಕಾಯುತ್ತಿದ್ದರೂ ವರ್ಷಗಳಿಂದ ಪೂರ್ಣವಾಗಿಲ್ಲ. ಹಿಂದಿನ ಅವಧಿಯ ಪುರಸಭೆ ಜನಪ್ರತಿನಿಧಿಗಳು ಕೂಡ ತಮ್ಮ ಅವಧಿಯಲ್ಲೇ ಕಾಮಗಾರಿ ಆಗುತ್ತದೆ ಎಂದಿದ್ದರು. ಆದರೆ ಸಮಯ ಇಷ್ಟಾದರೂ ಕಾಮಗಾರಿ ನಡೆಯುತ್ತಲೇ ಇದೆ, ಮಾರ್ಚ್‌ ಅಂತ್ಯದ ವೇಳೆಗೆ ಪೂರ್ಣವಾಗಲಿದೆ ಎನ್ನಲಾಗಿದೆ.

24 ತಾಸು ನೀರು
35.5 ಕೋ.ರೂ. ಯೋಜನೆ ಕುಂದಾಪುರ ಪುರಸಭೆ ವ್ಯಾಪ್ತಿಯ ಜನರಿಗೆ, ವಾಣಿಜ್ಯ ಉಪ ಯೋಗಕ್ಕೆ ದಿನದ 24 ತಾಸು ನೀರು ಒದಗಿಸಲು ಯೋಜನೆಯ ಕಾಮಗಾರಿ ಆಗುತ್ತಿದೆ. 23.1 ಕೋ.ರೂ.ಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಸಾಲದಿಂದ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣೆ ಹೂಡಿಕೆ ಯೋಜನೆ (ಜಲಸಿರಿ) ಮೂಲಕ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಕರ್ನಾಟಕ ಸಮಗ್ರ ನೀರು ನಿರ್ವಹಣೆ ಹೂಡಿಕೆಯಲ್ಲಿ ಕಾಮಗಾರಿ ನಡೆಯುತ್ತಿದೆ.

ಕಾಮಗಾರಿಗೆ ಕಲ್ಕತ್ತಾದ ಮೆ| ಜಿ.ಕೆ. ಡಬ್ಲೂé ಕನ್ಸಲ್ಟ್ ಸಂಸ್ಥೆ ತಾಂತ್ರಿಕ ಸಲಹೆ ನೀಡುತ್ತಿದೆ. 2017ರಲ್ಲಿ ಕಾಮಗಾರಿಗೆ ಟೆಂಡರ್‌ ಮಂಜೂರಾಗಿದೆ. ಒಟ್ಟು ಅವಧಿ 25 ತಿಂಗಳು. 2020 ಇಸವಿ ಬಂದರೂ ಕಾಮಗಾರಿ ಮುಗಿದಿಲ್ಲ. ಆದ್ದರಿಂದ ಈ ಬೇಸಗೆಗೆ ನೀರಿಗೆ ಉಪಯೋಗಕ್ಕೆ ದೊರೆಯುವಂತೆ ಆದಷ್ಟು ಶೀಘ್ರ ಕಾಮಗಾರಿ ಮುಗಿಸಿ ಬಿಟ್ಟುಕೊಡಬೇಕಿದೆ. ಕಾಮಗಾರಿ ಮುಗಿದ ಅನಂತರ 96 ತಿಂಗಳು ಅಂದರೆ 8 ವರ್ಷ ಅದರ ನಿರ್ವಹಣೆ ಹೊಣೆಯೂ ಕಾಮಗಾರಿ ನಿರ್ವಹಿಸಿದ ಸಂಸ್ಥೆಯದ್ದೇ ಆಗಿರುತ್ತದೆ. ಹಾಗಾಗಿ ಕಾಮಗಾರಿಗೆ 23.1 ಕೋ.ರೂ. ನೀಡಿದ್ದರೆ ಅದರ ನಿರ್ವಹಣೆಗೆ ಎಂದೇ 12.4 ಕೋ. ರೂ. ನೀಡಲಾಗುತ್ತಿದೆ. ಒಟ್ಟು 35.5 ಕೋ.ರೂ. ವೆಚ್ಚದ ಕಾಮಗಾರಿ ಇದಾಗಿದೆ.

ಎರಡು ಟ್ಯಾಂಕ್‌
ಎರಡು ಕಡೆ ಟ್ಯಾಂಕ್‌ ರಚನೆಯಾಗಬೇಕಿದ್ದು ಸಂಗಮ್‌ ಬಳಿ ಪೂರ್ಣ ಹಂತಕ್ಕೆ ತಲುಪಿದೆ. ಕೋಡಿ ಸಮೀಪ ಕಡಲ ತೀರದಲ್ಲಿ ಟ್ಯಾಂಕ್‌ ರಚನೆ ಕಾಮಗಾರಿ ನಡೆದಿದೆ. 32 ಕಿ.ಮೀ. ಪೈಪ್‌ಲೈನ್‌ ಎರಡು ಟ್ಯಾಂಕ್‌ಗಳಿಂದ 6 ಸಾವಿರ ಸಂಪರ್ಕಗಳಿಗೆ ನೀರು ಕೊಡಲು ಒಟ್ಟು 32 ಕಿ.ಮೀ. ಪೈಪ್‌ಲೈನ್‌ ಕಾಮಗಾರಿ ಪೈಕಿ ಸ್ವಲ್ಪ ಬಾಕಿ ಇದೆ.
ಪ್ರಸ್ತುತ ಪುರಸಭೆ ವ್ಯಾಪ್ತಿಯಲ್ಲಿ 3 ಸಾವಿರ ನೀರಿನ ಸಂಪರ್ಕಗಳಿವೆ. ಇನ್ನು ಇದು ದುಪ್ಪಟ್ಟು ಆಗಲಿದ್ದು ದಿನವಿಡೀ ನೀರು ಒದಗಿಸಲು ಈ ಯೋಜನೆ ರೂಪಿಸಲಾಗಿದೆ. 3,153 ನೀರಿನ ಹೊಸ ಸಂಪರ್ಕದ ಗುರಿಯಲ್ಲಿ 2,650 ಹೊಸ ಸಂಪರ್ಕಗಳಿಗೆ ಮೀಟರ್‌ ಅಳವಡಿಸಿ ಆಗಿದೆ. ಜಪ್ತಿಯಲ್ಲಿ ನೀರು ಸಾಗಿಸುವ ಶುದ್ಧೀಕರಣ ಘಟಕದಲ್ಲಿ ಶೇ.75ರಷ್ಟು ಕಾಮಗಾರಿ ಆಗಿದ್ದು ಇನ್ನು ಎಲೆಕ್ಟ್ರಿಕ್‌ ಕೆಲಸಗಳು ಬಾಕಿಯಿವೆ. ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಆಗಮಿಸಿದ ಇಲಾಖಾ ತಂಡ ಕಾಮಗಾರಿಯ ಪರಿಶೀಲನೆ ನಡೆಸಿದೆ.

ಶೀಘ್ರ ಮುಕ್ತಾಯ
ಕಾಮಗಾರಿ ಮುಗಿಸಲು ಮಾರ್ಚ್‌ ಅಂತ್ಯದ ಗಡುವು ನೀಡಲಾಗಿದ್ದು, ಈ ಬೇಸಗೆಗೆ ಕುಡಿಯಲು ನೀರಿಗೆ ದೊರೆಯಲಿದೆ. ಪೈಪ್‌ಲೈನ್‌ನಿಂದಾಗಿ ಹಾಳಾದ ರಸ್ತೆಗಳನ್ನು ದುರಸ್ತಿ ಮಾಡಲಾಗುತ್ತಿದೆ. ಎಂ ಕೋಡಿಯಲ್ಲಿ ರಸ್ತೆ ಅಗೆದಲ್ಲಿ ಇಂಟರ್‌ಲಾಕ್‌ ಅಳವಡಿಸಲಾಗಿದೆ. ನಳ್ಳಿನೀರಿನ ಸಂಪರ್ಕ ಜೋಡಣೆ ನಡೆಯುತ್ತಿದೆ. ಶುದ್ಧೀಕರಣ ಘಟಕದಲ್ಲೂ ಹೊಸ ಟ್ಯಾಂಕ್‌ಗೆ ನೀರು ತುಂಬಿಸಲು ಕೆಲಸ ನಡೆದಿದೆ. -ಗೋಪಾಲಕೃಷ್ಣ ಶೆಟ್ಟಿ, ಮುಖ್ಯಾಧಿಕಾರಿ, ಪುರಸಭೆ

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.