ಭೀಮಾನದಿಯಲ್ಲಿ ಮತ್ತೆ ಟಿಪ್ಪರ್‌-ಹಿಟಾಚಿ ಸದ್ದು !

ಮರಳು ಸಂಗ್ರಹಕ್ಕೆ ಕಚೇರಿ ಮೈದಾನವೂ ಸಾಲುತ್ತಿಲ್ಲನಾಮಕೇವಾಸ್ತೆ ಮರಳು ಸಾಗಣೆ ಪರೀಕ್ಷಾ ಕೇಂದ್ರ

Team Udayavani, Jan 5, 2020, 10:50 AM IST

5-January-02

ಅಫಜಲಪುರ: ತಾಲೂಕಿನ ಜೀವನದಿಯಾಗಿರುವ ಭೀಮಾ ನದಿಯಲ್ಲಿ ಮತ್ತೆ ಅಕ್ರಮ ಮರಳು ದಂಧೆ ಶುರುವಾಗಿದೆ.

ಟಿಪ್ಪರ್‌-ಹಿಟಾಚಿ ಸದ್ದು: ತಾಲೂಕಿನಲ್ಲಿ ಹರಿಯುವ ಭೀಮಾ ನದಿಯಲ್ಲಿ ಅಕ್ರಮ ಮರಳು ದಂಧೆ ಆರಂಭವಾಗುತ್ತಲೇ, ನದಿಗೆ ಹಿಟಾಚಿ, ಟಿಪ್ಪರ್‌ ವಾಹನಗಳು ಲಗ್ಗೆ ಇಟ್ಟಿದ್ದು, ಹಗಲು-ರಾತ್ರಿ ಎನ್ನದೆ ಮರಳು ಧಂದೆ ನಡೆಯುತ್ತಿದೆ. ಇದರಿಂದ ಭೀಮಾ ನದಿ ಒಡಲು ಖಾಲಿಯಾಗುವ ಹಂತಕ್ಕೆ ತಲುಪಿದೆ.

ಸರ್ಕಾರಿ ಕಚೇರಿಗಳು ಸಾಲುತ್ತಿಲ್ಲ: ಭೀಮಾ ನದಿಯಿಂದ ಹೊರ ತೆಗೆದ ಅಕ್ರಮ ಮರಳನ್ನು ಮನಸೋ ಇಚ್ಚೆ ಸಾಗಿಸುವುದಲ್ಲದೇ, ಸರ್ಕಾರಿ ಕಚೇರಿಗಳ ಮೈದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಈ ಕಚೇರಿಗಳ ಮೈದಾನಗಳು ಸಂಗ್ರಹಕ್ಕೆ ಸಾಲುತ್ತಿಲ್ಲ ಎಂದರೆ ಅಕ್ರಮ ಮರಳು ದಂಧೆ ಎಷ್ಟು ದೊಡ್ಡ ಮಟ್ಟದಲ್ಲಿ ಇರುಬಹುದು ಎನ್ನುವುದನ್ನು ಅಂದಾಜಿಸಬಹುದು.

ನಿತ್ಯ ಟಿಪ್ಪರ್‌, ಟ್ರ್ಯಾಕ್ಟರ್‌ಗಳ ಮೂಲಕ ಎಡೆಬಿಡದೆ ಮರಳು ಸಾಗಾಟ ನಡೆದಿದೆ. ಅದರಲ್ಲೂ ತಾಲೂಕಿನಿಂದ ಹೊರರಾಜ್ಯಗಳಿಗೆ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ.

ನಾಮಕೇವಾಸ್ತೆ ಪರೀಕ್ಷಾ ಕೇಂದ್ರ: ಅಕ್ರಮ ಮರಳು ಸಾಗಾಟ ನಿಯಂತ್ರಿಸುವ ಸಲುವಾಗಿ ತಾಲೂಕಿನ ಮಲ್ಲಾಬಾದ, ಚವಡಾಪುರ ಬಳಿ ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡು ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ ಅವು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಬಾಗಿಲು ಮುಚ್ಚಿರುವ ತಪಾಸಣೆ ಕೇಂದ್ರಗಳ ಸುತ್ತ ಜಾಲಿ ಕಂಟಿ ಬೆಳೆದಿದೆ. ಅದರ ಸುತ್ತ ಸಾರ್ವಜನಿಕರು ಮಲಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಮಲ್ಲಾಬಾದ ಬಳಿ ಇರುವ ತಪಾಸಣೆ ಕೇಂದ್ರದ ಮೇಲ್ಛಾವಣಿ ಕುಸಿದಿದೆ. ಇದನ್ನು ಯಾರೂ ಗಮನಿಸುತ್ತಿಲ್ಲ. ಎರಡು ಕೇಂದ್ರಗಳ ಬಳಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇವು ನಾಮಕೇವಾಸ್ತೆ ಎನ್ನುವಂತಾಗಿದೆ. ಯಾವ ವಾಹನಗಳನ್ನು ಈ ಕೇಂದ್ರಗಳಲ್ಲಿ ಜಪ್ತಿ ಮಾಡುತ್ತಿಲ್ಲ.

ಮರಳು ದಂಧೆಗೆ ಕಡಿವಾಣ ಹಾಕಲು ಇಲಾಖೆಗಳು ವಿಫಲ: ಅಕ್ರಮ ಮರಳು ದಂಧೆಗೆ ಒಂದರ್ಥದಲ್ಲಿ ಇಲಾಖೆಗಳು ಸಹಕಾರ ನೀಡಿದಂತೆ ಕಾಣುತ್ತಿದೆ. ಮರಳು ಸಾಗಾಟ ಮಾಡಲು ರಾಯಲ್ಟಿ ನೀಡಲಾಗುತ್ತದೆ. ಆದರೆ ಯಾವ ಪಾಯಿಂಟ್‌ನಿಂದ ಮರಳು ಸಾಗಿಸಬೇಕೆಂದು ತೋರಿಸುವುದಿಲ್ಲ. ಹೀಗಾಗಿ ದಂಧೆಕೋರರು ಮನಸೋ ಇಚ್ಚೆ ಮರಳು ಸಾಗಾಟ ಮಾಡುತ್ತಿದ್ದಾರೆ.

ಅಕ್ರಮ ಮರಳು ಸಾಗಾಟ ಗಮನಕ್ಕೆ ಬಂದರೆ, ಕೂಡಲೇ ದಾಳಿ ನಡೆಸಿ ಅಕ್ರಮ ಮರಳು ವಶಕ್ಕೆ ಪಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಯಲ್ಲಪ್ಪ ಸುಬೇದಾರ,
ತಹಶೀಲ್ದಾರ್‌

ಡಿ.27ರಂದು ರಾತ್ರಿ ರೇವೂರ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದೇವೆ. ಅಕ್ರಮ ತಡೆಗಟ್ಟಲು ಸತತ ಶ್ರಮ ವಹಿಸುತ್ತಿದ್ದೇವೆ. ಮರಳು ತಪಾಸಣಾ ಕೇಂದ್ರಗಳು ಹಾಳಾಗಿದ್ದರ ಬಗ್ಗೆ ಕೂಡಲೇ ಸಭೆ ಕರೆದು ಸರಿಪಡಿಸಲಾಗುತ್ತದೆ. ಮರಳು ಸಾಗಾಟಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಖಡಕ್‌ ಸೂಚನೆ ನೀಡಲಾಗಿದೆ.
ರಾಮಚಂದ್ರ ಗಡದೆ,
ಸಹಾಯಕ ಆಯುಕ್ತರು, ಕಲಬುರಗಿ

ಅಕ್ರಮ ಮರಳು ಸಾಗಾಟ ತಡೆಗಟ್ಟುವ ಕೆಲಸ ಮಾಡುತ್ತಿದ್ದೇವೆ. ಅಕ್ರಮ ಕಂಡು ಬಂದರೆ ಚಾಲಕ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ.
ಮಹಾದೇವ ಪಂಚಮುಖೀ, ಸಿಪಿಐ

ಮಲ್ಲಿಕಾರ್ಜುನ ಹೀರೆಮಠ

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.