ಭತ್ತ ಕೃಷಿಯಲ್ಲಿ ಭರವಸೆ ಮೂಡಿಸಿದ ಗ್ರಾಮೀಣ ರೈತ

ಪ್ರಗತಿಪರ ಕೃಷಿಕ ರಾಘವೇಂದ್ರರ ಅಪ್ರತಿಮ ಸಾಧನೆ

Team Udayavani, Jan 6, 2020, 7:24 AM IST

22

ಹೆಸರು: ರಾಘವೇಂದ್ರ ದೇವಾಡಿಗ
ಏನೇನು ಕೃಷಿ: ಭತ್ತ,ಅಡಿಕೆ, ತೆಂಗು
ಎಷ್ಟು ವರ್ಷ ಕೃಷಿ: 18
ಪ್ರದೇಶ : 3.5 ಎಕರೆ
ಸಂಪರ್ಕ: 9900768679

ನಾವು ಅದೆಷ್ಟು ಆಧುನಿಕಗೊಂಡರೂ ಉಣ್ಣುವ ಅನ್ನವನ್ನು ಸೃಷ್ಟಿಸಲಾರೆವು; ಅದನ್ನು ಬಿತ್ತಿ ಬೆಳೆದೇ ಆಗಬೇಕು. ಕೃಷಿಗೆ ಮಹತ್ವದ ಸ್ಥಾನವಿದೆ. ಇದೇ ಹಿನ್ನೆಲೆಯಲ್ಲಿ ಉದಯವಾಣಿಯು ರೈತರ ಸಾಧನೆಯ ಚಿತ್ರಣ ನೀಡುವ “ಕೃಷಿ ಕಥನ’ವನ್ನು ಆರಂಭಿಸಿದೆ. ಈ ಹೊಸ ಸರಣಿಯು ಇನ್ನಷ್ಟು ಮಂದಿಗೆ ಪ್ರೇರಣೆಯಾಗಲೆಂದು ಸರಕಾರದಿಂದ ಪ್ರಶಸ್ತಿ ಪುರಸ್ಕಾರಗಳಿಂದ ಗುರುತಿಸಲ್ಪಟ್ಟ ರೈತರನ್ನು ಪರಿಚಯಿಸುವ ಪ್ರಯತ್ನ.

ಸಿದ್ದಾಪುರ: ಕಠಿನ ಪರಿಶ್ರಮದಿಂದ ಕೃಷಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ತೋರಿಸಿದ ಹೆಗ್ಗಳಿಕೆ ಕುಂದಾಪುರ ತಾಲೂಕು ಹಾಲಾಡಿಯ ಕೃಷಿಕ ರಾಘವೇಂದ್ರ ದೇವಾಡಿಗ (39) ಅವರದ್ದಾಗಿದೆ. ರಾಘವೇಂದ್ರ ದೇವಾಡಿಗ ಅವರು ತಮ್ಮ 3.5 ಎಕರೆ ಭೂಮಿಯಲ್ಲಿ ಭತ್ತದ ಕೃಷಿಯಲ್ಲಿ ಆವಿಷ್ಕಾರ ಮಾಡುವ ಮೂಲಕ ಹಡಿಲು ಭೂಮಿಗೆ ಜೀವ ಕಳೆ ತುಂಬಿದರು. ಮೂಲತಃ ಕೃಷಿ ಮನೆತನದಿಂದ ಬೆಳೆದು ಬಂದ ಅವರು 18 ವರ್ಷಗಳಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಭತ್ತ ಬೆಳೆಯೊಂದಿಗೆ ಅಡಿಕೆ, ತೆಂಗು ಬೆಳೆಯುತ್ತಿದ್ದಾರೆ. ಭತ್ತದ ತಳಿಗಳಲ್ಲಿ ಎಂ.ಒ.13 (ಪವಿತ್ರ) ಹೊಸ ತಳಿಯನ್ನು ಆವಿಷ್ಕಾರ ಮಾಡುವ ಮೂಲಕ ಸಾಧಕ ಕೃಷಿಕರಾಗಿದ್ದಾರೆ. ಭತ್ತದ ಬೇಸಾಯದಲ್ಲಿ ಕ್ರಾಂತಿಕಾರಕವಾಗಿ ಮೂಡಿಬಂದ ಎಂ.ಒ.4 ತಳಿಗೆ ಪರ್ಯಾಯವಾದ ತಳಿಯೊಂದರ ಶೋಧನೆಯಲ್ಲಿದ್ದ ಕೃಷಿ ವಿಜ್ಞಾನ ಕೇಂದ್ರಕ್ಕೆ ರಾಘವೇಂದ್ರ ದೇವಾಡಿಗ ಅವರು ಎಂ.ಒ.13 ಹೊಸ ತಳಿಯನ್ನು ಆವಿಷ್ಕರಿಸಿ, ಭರವಸೆ ಮೂಡಿಸಿದ್ದಾರೆ. ಹಾಲಾಡಿಯಲ್ಲಿ ಪ್ರಯೋಗಕ್ಕೆ ಅಳವಡಿಸಲಾದ ಈ ತಳಿ ಎಂ.ಒ.4ಗೆ ಪರ್ಯಾಯ ತಳಿ ಎನ್ನುವುದು ಕೂಡ ಸಾಬೀತಾಗಿದೆ.

ಪುಷ್ಟಿದಾಯಕ ಭತ್ತ
ರಾಘವೇಂದ್ರ ದೇವಾಡಿಗ ಅವರು ಪ್ರಥಮವಾಗಿ ಹಾಲಾಡಿ ಭಾಗದಲ್ಲಿ ಈ ತಳಿಯನ್ನು ನಾಟಿ ಮಾಡಿ, ಬೀಜೋತ್ಪಾದನೆಯ ಮೂಲಕ ಈ ಭಾಗಕ್ಕೆ ಮುಂಗಾರು- ಹಿಂಗಾರು ಎರಡು ಋತುವಿಗೂ ಒಗ್ಗಿಕೊಳ್ಳುತ್ತದೆ ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಈ ಬಾರಿ ಮುಂಗಾರು ಹಂಗಾಮಿನಂತೆ ಸುಗ್ಗಿ ಬೆಳೆಯಲ್ಲೂ ಕೂಡ ಉತ್ತಮ ಫಸಲು ನೀಡಿರುವ ಎಂ.ಒ.4 ತಳಿ ಯಂತೆ ಕಾಣುವ ಈ ತಳಿಯಲ್ಲಿ ಜೊಳ್ಳು ಕಡಿಮೆ. ಈ ಭತ್ತ ಪುಷ್ಟಿದಾಯಕ. ಯಂತ್ರ ನಾಟಿ ಹಾಗೂ ಸಾಲು ನಾಟಿ ಯಲ್ಲೂ ಉತ್ತಮ ಇಳುವರಿ ನೀಡುವ ಈ ತಳಿ ಶ್ರೀ ಪದ್ಧತಿ ಗೂ ಸೂಕ್ತ ಎನ್ನಲಾಗಿದೆ. ವಿವಿಧ ನಾಟಿ ಯಂತ್ರೋಪಕರಣಗಳು ಇವರಲ್ಲಿವೆ.

ಉತ್ತಮ ಇಳುವರಿ
ರಾಘವೇಂದ್ರ ದೇವಾಡಿಗ ಭತ್ತದ ಕೃಷಿಯಲ್ಲಿ 18 ವರ್ಷ ಎಂ.ಒ.4 ತಳಿ ಬಳಕೆ ಮಾಡಿಕೊಂಡು ಬರುತ್ತಿದ್ದರು. ಆರು ವರ್ಷಗಳ ಹಿಂದೆ ಬೇಸಗೆ ಕಾಲದಲ್ಲಿ ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಿಂದ 200 ಗ್ರಾಂ. ಎಂ.ಒ.13 (ಪವಿತ್ರ) ತಳಿಯ ಭತ್ತದ ಬೀಜವನ್ನು ಪಡೆದು ಬಿತ್ತನೆ ಮಾಡಿದರು. ಮುಂಗಾರು ಕೃಷಿಯಲ್ಲಿ ಭತ್ತದ ಸಸಿ ಗಳನ್ನು ನಾಟಿ ಮಾಡಿದರು. 4 ತಿಂಗಳ ಅವಧಿಯಲ್ಲಿ 57 ಕೆ.ಜಿ. ಭತ್ತದ ಇಳುವರಿಯನ್ನು ಪಡೆದರು. ಹಿಂಗಾರು ಭತ್ತದ ಕೃಷಿಯಲ್ಲಿ 45 ಸೆಂಟ್ಸ್‌ ವಿಸ್ತೀರ್ಣದಲ್ಲಿ 15 ಕೆ.ಜಿ. ಎಂ.ಒ.13 ಪವಿತ್ರ ಭತ್ತದ ಬೀಜವನ್ನು ಬಿತ್ತನೆ ಮಾಡಿ, 15 ಕ್ವಿಂಟಾಲ್‌ ಭತ್ತದ ಇಳುವರಿ ಪಡೆದರು. ಈಗ ಅವರು ಕೃಷಿಕರಿಗೆ ಭತ್ತದ ಬೀಜವನ್ನು ಮಾರಾಟ ಮಾಡುತ್ತಿದ್ದಾರೆ.ರೈತರ ಸಮಸ್ಯೆಗಳಿಗೆ ಪರಿಹಾರವನ್ನೂ ನೀಡುತ್ತಾರೆ.

ಪ್ರಶಸ್ತಿಗಳು
2017-18ನೇ ಸಾಲಿನಲ್ಲಿ ಆತ್ಮ ಯೋಜನೆಯಡಿ ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆಯಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದಿದ್ದಾರೆ. ಅವರಿಗೆ ಅನೇಕ ಸಂಘ ಸಂಸ್ಥೆಗಳಿಂದ ಸಮ್ಮಾನಗಳು ನಡೆದಿವೆ. ಭತ್ತದ ಬೇಸಾಯದಲ್ಲಿ ಹಲವು ಪ್ರಯೋಗಗಳನ್ನು ಮಾಡುತ್ತ ಬಂದಿರುವ ರಾಘವೇಂದ್ರ ಅವರು ಕೃಷಿ ಆಸಕ್ತಿಯಿಂದ ಈ ಭಾಗದ ಭತ್ತ ಬೇಸಾಯಗಾರರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಈಗಾಗಲೇ ಅವರ ಪವಿತ್ರ ತಳಿಯ ಪ್ರಭಾವ ಹಲವಾರು ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭತ್ತ ಸಂಪೂರ್ಣ ನೆಲಕ್ಕ‌ಚ್ಚುವ ಸಾಧ್ಯತೆ
ಕೃಷಿ ಕ್ಷೇತ್ರದಲ್ಲಿ ರೈತರಿಗೆ ನಿರಾಸಕ್ತಿಗೆ ಮುಖ್ಯ ಕಾರಣ ಭತ್ತಕ್ಕೆ ಸೂಕ್ತ ಧಾರಣೆ ಇಲ್ಲದೆ ಇರುವುದು. ಮೊದಲೇ ಕೃಷಿಯಲ್ಲಿ ಕಾರ್ಮಿಕ ಕೊರತೆ, ಕಾಡು ಪ್ರಾಣಿಗಳ ಹಾವಳಿ, ಮಾಹಿತಿ ಕೊರತೆ, ನೀರಿನ ಅಭಾವದಿಂದಾಗಿ ಭತ್ತದ ಗದ್ದೆಗಳು ಹಡಿಲು ಬೀಳುತ್ತಿವೆ. ಭತ್ತಕ್ಕೆ ಸೂಕ್ತ ಬೆಲೆ ಇಲ್ಲದೆ ಹೋದಲ್ಲಿ ಇನ್ನೆರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಭತ್ತ ಸಂಪೂರ್ಣ ನೆಲಕ್ಕಚ್ಚುವ ಸಾಧ್ಯತೆ ಇದೆ. ಭತ್ತ ಕೃಷಿ ಹೆಚ್ಚಿಸುವ ದೃಷ್ಟಿಯಲ್ಲಿ ನಾನು ರೈತರ ಅನುಕೂಲಕ್ಕಾಗಿ ಕಡಿಮೆ ದರದಲ್ಲಿ ಯಂತ್ರ ನಾಟಿ ಮಾಡಿ ಕೊಡುವ ಮೂಲಕ ಫಸಲು ಬರುವ ತನಕ ನಿರಂತರವಾಗಿ ಸಂಪರ್ಕದಲ್ಲಿರುತ್ತೇನೆ. ಸಮಸ್ಯೆ ಗಳು ಬಂದಾಗ ಅನೇಕ ಕಡೆಗಳಲ್ಲಿ ವಿಜ್ಞಾನಿಗಳನ್ನು ಕರೆದುಕೊಂಡು ಹೋಗಿ ಪರಿಶೀಲನೆ ಕೂಡ ನಡೆಸಿದ್ದೇನೆ.
– ರಾಘವೇಂದ್ರ ದೇವಾಡಿಗ, ಪ್ರಗತಿಪರ ಕೃಷಿಕ

ಸತೀಶ ಆಚಾರ್‌ ಉಳ್ಳೂರು

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

Kota ಚಿಟ್‌ ಫಂಡ್‌ ಹೆಸರಲ್ಲಿ ವಂಚನೆ; ದೂರು ದಾಖಲು

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.