ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೆ ತಡೆ; ತೀರ್ಪು ಎಚ್ಚರಿಕೆಯಾಗಲಿ


Team Udayavani, Jan 6, 2020, 6:00 AM IST

46

ಈ ನೇಮ­ಕಾತಿಗಳನ್ನು ಪ್ರಶ್ನಿಸುವ ಮೂಲಕ ಪ್ರಜ್ಞಾವಂತರು ಆಳುವವರ “ಗೆದ್ದ ಬಳಿಕ ಏನು ಮಾಡಿದರೂ ನಡೆಯುತ್ತದೆ’ ಎಂಬಂಥ ಧೋರಣೆಗೆ ಕಡಿವಾಣ ಹಾಕಿದ್ದಾರೆ.

ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಿಕೊಳ್ಳಲು ಅವಕಾಶ ನೀಡಿದ್ದ ಕರ್ನಾಟಕ ಸಂಸದೀಯ ಕಾರ್ಯದರ್ಶಿಗಳ ಕಾಯಿದೆಯನ್ನು ಮತ್ತು ಇದಕ್ಕೆ ಮಾಡಿದ್ದ ತಿದ್ದುಪಡಿಗಳನ್ನು ಅಸಿಂಧುಗೊಳಿಸಿರುವ ಹೈಕೋರ್ಟಿನ ತೀರ್ಪನ್ನು ರಂಗೋಲಿ ಕೆಳಗೆ ತೂರಿಕೊಳ್ಳುವ ಜಾಣ್ಮೆಯನ್ನು ತೋರಿಸುವ ಸರಕಾರಗಳ ಪ್ರವೃತ್ತಿಗೆ ಹಾಕಿದ ಲಗಾಮು ಎಂದು ವ್ಯಾಖ್ಯಾನಿಸಬಹುದು. ಅತೃಪ್ತರು, ಅವಕಾಶ ವಂಚಿತರಿಗೆ ರಾಜಕೀಯ ಸ್ಥಾನಮಾನಗಳನ್ನು ಕಲ್ಪಿಸುವ ಸಲುವಾಗಿ ಕಂಡುಕೊಂಡಿದ್ದ ಈ ಅಡ್ಡಹಾದಿಯನ್ನು ಈ ತೀರ್ಪಿನ ಮೂಲಕ ನ್ಯಾಯಾಲಯ ಮುಚ್ಚಿದಂತಾಗಿದೆ.

ಸಂವಿಧಾನದ 164ನೇ ಪರಿಚ್ಛೇದದ (1-ಎ) ಪ್ರಕಾರ ಸಚಿವರ ಸಂಖ್ಯೆ ಶೇ.15 ಮೀರಬಾರದು. ಆದರೆ ಪ್ರಸ್ತುತ ಕಾಲಘಟ್ಟದಲ್ಲಿ ಸಚಿವ ಹುದ್ದೆ ಆಕಾಂಕ್ಷಿಗಳ ಸಾಲು ಬಹಳ ದೀರ್ಘ‌ವಾಗಿರುತ್ತದೆ. ಎಲ್ಲರನ್ನೂ ಸಚಿವರನ್ನಾಗಿ ಮಾಡಲು ಸಾಧ್ಯವಿಲ್ಲದ ಕಾರಣ ಸರಕಾರಗಳು ಕಂಡುಕೊಂಡ ಉಪಾಯವೇ ಸಂಸದೀಯ ಕಾರ್ಯದರ್ಶಿ ಹುದ್ದೆಯ ಸೃಷ್ಟಿ. ಸಂಸದೀಯ ಕಾರ್ಯದರ್ಶಿ ಸಹಾಯಕ ಸಚಿವನ ಸ್ಥಾನಮಾನ ಹೊಂದಿರುತ್ತಾರೆ ಹಾಗೂ ಆಯಾಯ ಇಲಾಖೆಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಅನುಭವಿಸುತ್ತಾರೆ. ಆಡಳಿತಕ್ಕೆ ಸಂಸದೀಯ ಕಾರ್ಯದರ್ಶಿಗಳಿಂದ ಏನು ಲಾಭವಾಗುತ್ತದೆ ಎಂಬ ಪ್ರಶ್ನೆಗಿನ್ನೂ ಸಮರ್ಪಕ ಉತ್ತರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಅತೃಪ್ತರನ್ನು ಸಮಾಧಾನಿಸಲು ಮುಖ್ಯಮಂತ್ರಿಯಾದವರಿಗೆ ಇದು ಸುಲಭ ಮಾರ್ಗವಾಗಿತ್ತು. ಶಾಸಕರಾದವರು ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿಲ್ಲ ಎಂಬ ನಿಯಮವನ್ನೂ ಈ ಹುದ್ದೆ ಉಲ್ಲಂ ಸುತ್ತದೆ. ಸಂಸದೀಯ ಕಾರ್ಯದರ್ಶಿಗಳಾದವರು ನೇರವಾಗಿ ಯಾವುದೇ ವೇತನ ,ಭತ್ಯೆ ಇತ್ಯಾದಿಗಳನ್ನು ಪಡೆಯುವುದಿಲ್ಲವಾದರೂ ಪರೋಕ್ಷವಾಗಿ ಇದರಿಂದ ಸಿಗುವ ಹಲವು ಲಾಭಗಳ ಫ‌ಲಾನುಭವಿಗಳೇ ಆಗಿರುತ್ತಾರೆ ಎನ್ನುವುದನ್ನು ನ್ಯಾಯಾಲಯಗಳು ಈ ಮಾದರಿಯ ಪ್ರಕರಣಗಳ ಹಲವು ತೀರ್ಪುಗಳಲ್ಲಿ ಉಲ್ಲೇಖೀಸಿರುವುದನ್ನು ಗಮನಿಸಬಹುದು.

ಸಂಸದೀಯ ಕಾರ್ಯದರ್ಶಿ ಹುದ್ದೆ ಸೃಷ್ಟಿಯಾಗಿ ದಶಕಗಳೇ ಕಳೆದಿದ್ದರೂ ಇದು ವ್ಯಾಪಕವಾಗಿ ಸಾರ್ವಜನಿಕ ಚರ್ಚೆಗೆ ಬಂದದ್ದು 2015ರಲ್ಲಿ ದಿಲ್ಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ 21 ಸಂಸದೀಯ ಕಾರ್ಯದರ್ಶಿಗಳನ್ನು ನೇಮಿಸಿದಾಗ. ಭಾರೀ ವಿವಾದ ಮತ್ತು ಟೀಕೆಗೆ ಒಳಗಾಗಿದ್ದ ಈ ನೇಮಕಾತಿ ಚುನಾವಣಾ ಆಯೋಗ, ನ್ಯಾಯಾಲಯ, ಲೆಫ್ಟಿನೆಂಟ್‌ ಗವರ್ನರ್‌ ಕಚೇರಿ ಎಂದೆಲ್ಲ ಅಲೆದಾಡಿತ್ತು. ಕೊನೆಗೆ ನ್ಯಾಯಾಲಯ ಈ ನೇಮಕಾತಿಯನ್ನು ರದ್ದುಗೊಳಿಸಿತು. ಇದಕ್ಕೂ ಮೊದಲು 2009ರಲ್ಲೂ ಗೋವಾ ಸರಕಾರ ಸಂಸದೀಯ ಕಾರ್ಯದರ್ಶಿಗಳನ್ನು ನೇಮಿಸಿದ್ದೂ ಇದೇ ರೀತಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಮಣಿಪುರ, ಹಿಮಾಚಲ ಪ್ರದೇಶ, ಮಿಜೋರಂ, ಅಸ್ಸಾಂ, ರಾಜಸ್ಥಾನ, ಪಂಜಾಬ್‌ ಸೇರಿ ಇನ್ನೂ ಕೆಲವು ರಾಜ್ಯಗಳು ಸಂಸದೀಯ ಕಾರ್ಯದರ್ಶಿಗಳನ್ನು ನೇಮಿಸಿ ನ್ಯಾಯಾಂಗದ ಕೆಂಗಣ್ಣಿಗೆ ಗುರಿಯಾದ ಅನುಭವ ಹೊಂದಿವೆ. ಸಂಸದೀಯ ಕಾರ್ಯದರ್ಶಿ ಎನ್ನುವುದು ಕಾಂಗ್ರೆಸ್‌ ಸೃಷ್ಟಿ. 1967ರಲ್ಲಿ ಮಧ್ಯ ಪ್ರದೇಶ ಸರಕಾರ ಮೊದಲ ಬಾರಿಗೆ ಸಂಸದೀಯ ಕಾರ್ಯದರ್ಶಿಯನ್ನು ನೇಮಕ ಮಾಡಿತ್ತು. ಕಾಂಗ್ರೆಸ್‌ ಶಾಸಕ ರಾಜೇಂದ್ರ ಪ್ರಸಾದ್‌ ಶುಕ್ಲ ಆಗ ಸಂಸದೀಯ ಕಾರ್ಯದರ್ಶಿಯಾದವರು. ಅನಂತರ ಉಳಿದ ಪಕ್ಷಗಳು ಸಂದರ್ಭ ಒದಗಿ ಬಂದಾಗಲೆಲ್ಲ ಈ ಮೇಲ್ಪಂಕ್ತಿಯನ್ನು ಅನುಸರಿಸಿಕೊಂಡು ಬಂದಿವೆ. ಉಪ ಮುಖ್ಯಮಂತ್ರಿ ಹುದ್ದೆಯೂ ಒಂದರ್ಥದಲ್ಲಿ ಇದೇ ರೀತಿಯದ್ದು. ಯಾವುದೇ ಸಾಂವಿಧಾನಿಕ ಮಾನ್ಯತೆ ಹೊಂದಿರದ ಈ ಅಲಂಕಾರಿಕ ಹುದ್ದೆಯನ್ನು ಅನುಕೂಲ ಶಾಸ್ತ್ರಕ್ಕಾಗಿ ಸೃಷ್ಟಿಸಲಾಗಿದೆ. ಇದಕ್ಕಾಗಿ ನಡೆಯುತ್ತಿರುವ ಲಾಬಿ, ವಶೀಲಿ, ಹೋರಾಟಗಳನ್ನು ನೋಡುವಾಗ ಈ ಹುದ್ದೆಗೆ ಸಂಬಂಧಿಸಿದಂತೆಯೂ ನ್ಯಾಯಾಲಯ ಈ ಮಾದರಿಯ ತೀರ್ಪೊಂದನ್ನು ನೀಡುವ ಅಗತ್ಯವಿರುವಂತೆ ಕಂಡು ಬರುತ್ತದೆ.

ವಿಶೇಷವೆಂದರೆ ಹೆಚ್ಚಿನ ಸಂದರ್ಭಗಳಲ್ಲಿ ಸಂಸದೀಯ ಕಾರ್ಯದರ್ಶಿ ಹುದ್ದೆಗಳ ವಿರುದ್ಧ ಹೋರಾಡಿದ್ದು ಪ್ರಜ್ಞಾವಂತ ಜನರೇ ಹೊರತು ರಾಜಕೀಯ ಪಕ್ಷಗಳು ಅಲ್ಲ.ಸಾರ್ವಜನಿಕ ಹಿತಾಸಕ್ತಿ ದಾವೆಗಳ ಮೂಲಕ ಈ ನೇಮಕಾತಿಗಳನ್ನು ಪ್ರಶ್ನಿಸುವ ಮೂಲಕ ಪ್ರಜ್ಞಾವಂತರು ಆಳುವವರ “ಗೆದ್ದ ಬಳಿಕ ಏನು ಮಾಡಿದರೂ ನಡೆಯುತ್ತದೆ’ ಎಂಬಂಥ ಧೋರಣೆಗೆ ಕಡಿವಾಣ ಹಾಕಿದ್ದಾರೆ. ಇಂಥ ಹೋರಾಟಗಳಲ್ಲಿ ರಾಜಕೀಯ ಪಕ್ಷಗಳೇನಾದರೂ ಸೇರಿಕೊಂಡಿದ್ದರೆ ಅದು ತತ್‌ಕ್ಷಣದ ರಾಜಕೀಯ ಲಾಭಕ್ಕಾಗಿಯೇ ಹೊರತು ಸಮಷ್ಟಿಯ ಹಿತದ ದೃಷ್ಟಿಯಿಂದ ಅಲ್ಲ. ಸರಕಾರಗಳು ಹೀಗೆ ಸಂವಿಧಾನದ ಕಣ್ಣಿಗೆ ಮಣ್ಣೆರಚುವ ಚಾಳಿಯನ್ನು ಬಿಡಲು ಈ ತೀರ್ಪು ಒಂದು ಎಚ್ಚರಿಕೆಯಾಗಬೇಕು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.