ಬಿಜೆಪಿಯಿಂದ ಮನೆ ಮನೆ ಸಂಪರ್ಕ

ರಾಜ್ಯದಲ್ಲಿ 30 ಲಕ್ಷ ಮನೆಗಳಿಗೆ ತೆರಳಿ ಮಾಹಿತಿ: ಯಡಿಯೂರಪ್ಪ

Team Udayavani, Jan 6, 2020, 6:30 AM IST

33

ವ್ಯಾಪಾರಿಗಳಿಗೆ ಸಿಎಎ ಬಗ್ಗೆ ಮಾಹಿತಿ ನೀಡಿದ ಸಿಎಂ ಅಲ್ಲಿಯೇ ಎಳನೀರು ಕುಡಿದರು.

ಬೆಂಗಳೂರು: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾದ್ಯಂತ ಆರಂಭಿಸಿರುವ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ರಾಜ್ಯದಲ್ಲೂ ಚಾಲನೆ ದೊರೆತಿದೆ.

ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರೆ, ವಿವಿಧ ಜಿಲ್ಲೆಗಳಲ್ಲಿ ಸಚಿವರು, ಶಾಸಕರು
ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಮಗೆ ನಿಗದಿಪಡಿಸ ಲಾದ ಮನೆಗಳಿಗೆ ತೆರಳಿದ ಬಿಜೆಪಿ ಜನ ಪ್ರತಿನಿಧಿಗಳು ಜನರಲ್ಲಿನ ಗೊಂದಲ ನಿವಾರಣೆಗೆ ಮುಂದಾದರು.

ಮುಖ್ಯಮಂತ್ರಿ ಯಡಿಯೂರಪ್ಪ, ಶಿವಾಜಿನಗರ ವಿಧಾನಸಭೆ ಕ್ಷೇತ್ರದ ವಸಂತನಗರ ವಾರ್ಡ್‌ನ ಕೆಲವು ಮನೆಗಳಿಗೆ ತೆರಳಿ ಮನೆಮಂದಿಯನ್ನು ಭೇಟಿಯಾಗಿ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಪ್ರಮುಖವಾಗಿ ಕಾಯ್ದೆ ಜಾರಿ, ಅದರಿಂದ ಉಂಟಾಗಲಿರುವ ಅನುಕೂಲಗಳು, ಕಾಯ್ದೆ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಜನರ ಮೇಲೆ ಬೀರುವ ಪರಿಣಾಮಗಳ ಬಗ್ಗೆ ವಿವರ ನೀಡಿದರು. ಕಾಯ್ದೆ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವ ಬಗ್ಗೆಯೂ ತಿಳಿಸಿ ತಪ್ಪು ಕಲ್ಪನೆ ಬದಿ ಗಿಟ್ಟು ಕಾಯ್ದೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಕಾಯ್ದೆಯಿಂದ ಇಡೀ ದೇಶದಲ್ಲಿ ಯಾವುದೇ ರೀತಿಯ ದುಷ್ಪರಿಣಾಮ ವಾಗುವುದಿಲ್ಲ. ಮುಸ್ಲಿಂ ಸಹಿತ ಯಾವುದೇ ಸಮುದಾಯಕ್ಕೂ ಇದ ರಿಂದ ಸಮಸ್ಯೆಯಾಗದು. ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ, ಇಂದಿರಾಗಾಂಧಿ, ರಾಜೀವ್‌ ಗಾಂಧಿಯವರ ಕಾಲದಲ್ಲೂ ಕಾಯ್ದೆ ಇತ್ತು. ಆದರೆ ಈಗ ಅಲ್ಪಸಂಖ್ಯಾಕ ಮುಸ್ಲಿಂ ಬಾಂಧವರಲ್ಲಿ ಪೌರತ್ವ ತಿದ್ದು ಪಡಿ ಕಾಯ್ದೆಯಿಂದ ತೊಂದರೆಯಾಗ ಲಿದೆ ಎಂಬ ಗೊಂದಲ ಮೂಡಿಸುವ ಪ್ರಯತ್ನವನ್ನು ಕೆಲವರು ಮಾಡು ತ್ತಿದ್ದಾರೆ. ಹಾಗಾಗಿ ಜನರಿಗೆ ವಾಸ್ತ ವಾಂಶ ತಿಳಿಸಲು ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ದೇಶಾದ್ಯಂತ 3 ಕೋಟಿ ಮನೆಗಳಿಗೂ ಭೇಟಿ ನೀಡಿ ಮಾಹಿತಿ ನೀಡುವ ಕೆಲಸ ನಡೆಯಲಿದೆ. ರಾಜ್ಯದಲ್ಲಿ 30 ಲಕ್ಷ ಮನೆಗಳಿಗೂ ತೆರಳಿ ಮಾಹಿತಿ ನೀಡಲಿದ್ದೇವೆ ಎಂದು ಹೇಳಿದರು.

ನಾವು ಕೇವಲ ಹಿಂದೂ ಸಮು ದಾಯದವರ ಮನೆಗಳಿಗಷ್ಟೇ ಹೋಗುತ್ತಿಲ್ಲ. ಮುಸ್ಲಿಂ ಸಮುದಾಯ ದವರಲ್ಲೂ ಜಾಗೃತಿ ಮೂಡಿಸ ಲಾಗುತ್ತಿದೆ. ಹಿಂದೂ- ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರ ಮನೆಗಳಿಗೂ ಭೇಟಿ ನೀಡಿ ಮಾಹಿತಿ ನೀಡ ಲಾಗುವುದು ಎಂದು ಹೇಳಿದರು.

ಕಾಂಗ್ರೆಸ್‌, ಜೆಡಿಎಸ್‌ ನಾಯ ಕರು ತಮ್ಮ ಮತ ಬ್ಯಾಂಕ್‌ ಭದ್ರಪಡಿಸಿ ಕೊಳ್ಳಲು ಜನರಲ್ಲಿ ಸಂಶಯ ಹುಟ್ಟು ಹಾಕುವ ಕೆಲಸ ಮಾಡುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವೇಳೆ ನಿಮ್ಮ ಕುಟುಂಬ ಸದಸ್ಯರ ವಿಳಾಸ, ಆಧಾರ್‌ ಕಾರ್ಡ್‌, ಪಡಿತರ ಕಾರ್ಡ್‌ ಪಡೆದು ವಿವರವನ್ನಷ್ಟೇ ಪಡೆದುಕೊಳ್ಳ ಲಾಗುತ್ತದೆ ಎಂದು ಹೇಳಿದರು.

ಅಭಿಯಾನದ ವೇಳೆ ರಸ್ತೆಬದಿ ವ್ಯಾಪಾರದಲ್ಲಿ ತೊಡಗಿದ್ದ ಮುಸ್ಲಿಂ ಸಮುದಾಯದವರಿಗೆ ಕರಪತ್ರ ನೀಡಿ ಕಾಯ್ದೆ ಬಗ್ಗೆ ಯಡಿಯೂರಪ್ಪ ಅವರು ಮಾಹಿತಿ ನೀಡಿದರು. ಎಳನೀರು ಕುಡಿದು ವ್ಯಾಪಾರಿಗೂ ಮಾಹಿತಿ ನೀಡಿದ್ದು ಗಮನ ಸೆಳೆಯಿತು. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ದಾಸರಹಳ್ಳಿ ಕ್ಷೇತ್ರದಲ್ಲಿ ಅಭಿ ಯಾನಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.