ಉಡುಪಿಯಲ್ಲಿ ಶ್ರೀಕೃಷ್ಣನಿಗೆ ತುಲಾಭಾರ

ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವ ; ಇತಿಹಾಸ ನಿರ್ಮಿಸಿದ ಕಾರ್ಯಕ್ರಮ

Team Udayavani, Jan 6, 2020, 6:00 AM IST

05012020Astro09

ಉಡುಪಿ: ಶ್ರೀಕೃಷ್ಣ ಮಠದ ಉತ್ಸವ ಮೂರ್ತಿಗೆ ರವಿವಾರ ತುಲಾಭಾರ ಮಹೋತ್ಸವವು ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮೊದಲ ಬಾರಿಗೆ ಸಂಭ್ರಮದಿಂದ ಸಂಪನ್ನಗೊಂಡಿತು.

ಸಂಜೆ ಚಾಮರಸೇವೆ ನಡೆದ ಬಳಿಕ, ರಾತ್ರಿ ಪೂಜೆ, ಶ್ರೀ ಮುಖ್ಯಪ್ರಾಣ ದೇವರಿಗೆ ರಂಗಪೂಜೆ, ಉತ್ಸವ ನಡೆಯಿತು. ಅನಂತರ ಸೃಷ್ಟಿ ನೃತ್ಯ ಕಲಾ ಕುಟೀರದ ಡಾ| ಮಂಜರಿ ಅವರಿಂದ “ಶ್ರೀಕೃಷ್ಣ ಸಂದರ್ಶನಂ’ ನೃತ್ಯರೂಪಕ ರಥಬೀದಿಯಲ್ಲಿ ನಿರ್ಮಿಸಿದ್ದ ಸುಧರ್ಮ ವೇದಿಕೆಯಲ್ಲಿ ನಡೆಯಿತು. ಬಳಿಕ ಶ್ರೀಕೃಷ್ಣ ದೇವರ ಉತ್ಸವಮೂರ್ತಿಗೆ ಸ್ವರ್ಣ ತುಲಾಭಾರ ಮಹೋತ್ಸವ ಇದೇ ಮೊದಲ ಬಾರಿ ನಡೆಯಿತು. ರಥಬೀದಿಯಲ್ಲಿ ಕಾರ್ಯಕ್ರಮ ಪೂರ್ತಿ ಕಿಕ್ಕಿರಿದ ಜನಸಂದಣಿ ಸೇರಿತ್ತು.

ದೇವರನ್ನು ತೂಗಲಿಕ್ಕೆ ನಾವು ಯಾರು, ದೇವರು ಕೊಟ್ಟದ್ದನ್ನೇ ನಾವು ಆತನಿಗೆ ಸಮರ್ಪಿಸುತ್ತಿದ್ದೇವೆ. ನಮ್ಮ ಭಾರ ಕಡಿಮೆ ಮಾಡಿ ಕೊಳ್ಳಲು ದೇವರಿಗೆ ಸಮರ್ಪಿಸುತ್ತಿದ್ದೇವೆ ಎಂದು ಪರ್ಯಾಯ ಶ್ರೀಪಾದರು ಆಶೀರ್ವಚನದಲ್ಲಿ ನುಡಿದರು.
ಇಂತಹ ಸತ್ಕಾರ್ಯಗಳನ್ನು ದೇವರು ನಮ್ಮೊಳ ಗಿದ್ದು, ಆತನೇ ಮಾಡಿಸಿಕೊಂಡದ್ದು ಎಂಬ ಅನುಸಂಧಾನ ಅಗತ್ಯ ಎಂದು ಶ್ರೀ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಹೇಳಿದರು. ಪಲಿಮಾರು ಸ್ವಾಮೀಜಿಯವರು ನಿತ್ಯ ಲಕ್ಷ ತುಳಸೀ ಅರ್ಚನೆ ನಡೆಸಿದರು. ನಾವು ಒಂದು ದಳವನ್ನಾದರೂ ಸಮರ್ಪಿಸಬೇಕು ಎಂದು ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ದೇವರಿಗೆ ತುಲನೆ ಇಲ್ಲ. ಪಲಿಮಾರು ಶ್ರೀಗಳು ಈಗಾಗಲೇ ವ್ಯಾಸರ ಸುವರ್ಣವೆಂಬ ಮಹಾಭಾರತ ಗ್ರಂಥದಿಂದಲೂ ಸುವರ್ಣದಿಂದಲೂ ತೂಗಿದ್ದಾರೆ. ಈಗ ಇನ್ನೊಂದು ಬಗೆಯಲ್ಲಿ ತೂಗಿದ್ದಾರೆಂದು ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥರು ಅಭಿಪ್ರಾಯಪಟ್ಟರು.

ಭಗವಂತ ನೀಡಿದ ಶಕ್ತಿಯಿಂದಲೇ ಜಗದೋದ್ಧಾರಕನನ್ನು ತೂಗಲಾಗಿದೆ ಎಂದು ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಗಳು ನುಡಿದರು. ಹೃತೂ³ರ್ವಕ ಅನುಸಂಧಾನ ದಿಂದ ತುಲಾಭಾರದಲ್ಲಿ ಪಾಲ್ಗೊಂಡರೆ ದೇಹದ ಭಾರ, ತಲೆಯ ಭಾರ ಇಳಿಕೆಯಾಗುತ್ತದೆ ಎಂದು ಶ್ರೀ ಬಾಳೆಗಾರು ಮಠದ ಶ್ರೀ ರಘುಭೂಷಣತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದರು. ಸತ್ಯ ಭಾಮೆ ಸುವರ್ಣದಿಂದ ಶ್ರೀಕೃಷ್ಣನನ್ನು ತೂಗಿದರೆ, ರುಕ್ಮಿಣಿ ತುಳಸಿಪತ್ರದಿಂದ ತೂಗಿದಳು ಎಂದು ಶ್ರೀ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹೇಳಿದರು. ವಿ| ಕೊರ್ಲಹಳ್ಳಿ ವೆಂಕಟೇಶಾಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ನೃತ್ಯ ಕಲಾವಿದೆಯ
ಏಕಾದಶಿ ಉಪವಾಸ
ನೃತ್ಯರೂಪಕ ನಡೆಸಿಕೊಟ್ಟ ಡಾ| ಮಂಜರಿ ಅವರು ಏಕಾದಶಿಯಂದು ನಿರ್ಜಲ ಉಪವಾಸ ಮಾಡುತ್ತಿದ್ದಾರೆ. ಅವರು ಕಲಾವಿದೆ ಮಾತ್ರವಲ್ಲದೆ ಧಾರ್ಮಿಕರೂ ಆಗಿದ್ದಾರೆ ಎಂದು ಪಲಿಮಾರು ಶ್ರೀಗಳು ಹೇಳಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.